AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

Bigg Boss 8 Second Innings | Raghu Gowda: ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದ ವ್ಯಕ್ತಿ ಎಂದರೆ ಅವರು ರಘು ಗೌಡ. ತುಂಬಾನೇ ಎಮೋಷನಲ್​ ಆಗುತ್ತಿದ್ದ ಅವರು, ಟಾಸ್ಕ್​ಗಳಲ್ಲಿ ಹಿಂದೆ ಬಿದ್ದಿದ್ದರು. ನಂತರ ವೇಗ ಪಡೆದುಕೊಂಡಂತೆ ಕಂಡರೂ ಯಾವುದೇ ಪ್ರಯೋಜನವಾಗಿಲ್ಲ.

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ
ರಘು ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 10:02 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ರಘು ಗೌಡ ಅವರು ತುಂಬಾನೇ ವಿಚಿತ್ರವಾಗಿದ್ದರು. ಅಷ್ಟೇ ಅಲ್ಲ, ಅವರು ನಡೆದುಕೊಳ್ಳುತ್ತಿದ್ದ ರೀತಿ ಅವರಿಗೇ ಇಷ್ಟವಾಗುತ್ತಿರಲಿಲ್ಲ. ಈಗ ಸೆಕೆಂಡ್​ ಇನ್ನಿಂಗ್ಸ್​ ಆರಂಭವಾಗಿದೆ. ರಘು ಗೌಡ ಸಾಕಷ್ಟು ಜೋಶ್​ನೊಂದಿಗೆ ಮನೆ ಒಳಗೆ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆಯಂತೆ.

ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದ ವ್ಯಕ್ತಿ ಎಂದರೆ ಅದು ರಘು ಗೌಡ. ತುಂಬಾನೇ ಎಮೋಷನಲ್​ ಆಗುತ್ತಿದ್ದ ಅವರು, ಟಾಸ್ಕ್​ಗಳಲ್ಲಿ ಹಿಂದೆ ಬಿದ್ದಿದ್ದರು. ನಂತರ ವೇಗ ಪಡೆದುಕೊಂಡಂತೆ ಕಂಡರೂ ಯಾವುದೇ ಪ್ರಯೋಜನವಾಗಿಲ್ಲ. ಬಿಗ್​ ಬಾಸ್​ ಮೊದಲ ಇನ್ನಿಂಗ್ಸ್​ ಕೊನೆಯ ಅವಧಿಯಲ್ಲಿ ಮತ್ತೆ ಮಂಕಾದರು. ಸಣ್ಣ ವಿಚಾರವನ್ನೂ ದೊಡ್ಡ ಮಟ್ಟದಲ್ಲಿ ಚಿಂತೆ ಮಾಡುತ್ತಿದ್ದರು.

ವೈಷ್ಣವಿ ಹಾಗೂ ರಘು ಒಟ್ಟಿಗೆ ಇರುತ್ತಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದಕ್ಕೂ ಕೂಡ ರಘು ದೊಡ್ಡ ಮಟ್ಟದಲ್ಲಿ ತಲೆಕೆಡಿಸಿಕೊಂಡಿದ್ದರು. ಆದರೆ, ಈಗ ಈ ಆಲೋಚನೆಗಳನ್ನು ಅವರು ಬದಿಗಿಟ್ಟಿದ್ದಾರೆ.

ಎರಡನೇ ಇನ್ನಿಂಗ್ಸ್​ಗಾಗಿ ಬಿಗ್​ ಬಾಸ್​ ವೇದಿಕೆ ಏರಿದ ರೌಘು, ‘ನಾನು ಅನಾವಶ್ಯಕ ಡೌಟ್​ ಪಡೋದಿಲ್ಲ. ಹಳೆಯ ಎಪಿಸೋಡ್​ಗಳನ್ನು ನೋಡುವಾಗ ಹೆಂಡತಿ ನನಗೆ ಬೈದಿದ್ದರು. ಸುಮ್ಮನೆ ಅಳ್ತೀಯಲ್ಲ ಎಂದಿದ್ದರು. ಈ ಬಾರಿ ಸ್ಯಾಡ್​ ಸಂತೋಷ್​ ಆಗೋ ಸೀನ್​ ಇಲ್ಲ. ಪಾಸಿಟಿವ್​ ಅಂಶಗಳನ್ನು ಮಾತ್ರ ತೆಗೆದುಕೊಂಡು, ಕೆಟ್ಟ ಅಂಶಗಳನ್ನು ಬಿಟ್ಟು ಬಿಡ್ತೀನಿ’ ಎಂದರು.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Published On - 9:33 pm, Wed, 23 June 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್