AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

Bigg Boss 8 Second Innings | Raghu Gowda: ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದ ವ್ಯಕ್ತಿ ಎಂದರೆ ಅವರು ರಘು ಗೌಡ. ತುಂಬಾನೇ ಎಮೋಷನಲ್​ ಆಗುತ್ತಿದ್ದ ಅವರು, ಟಾಸ್ಕ್​ಗಳಲ್ಲಿ ಹಿಂದೆ ಬಿದ್ದಿದ್ದರು. ನಂತರ ವೇಗ ಪಡೆದುಕೊಂಡಂತೆ ಕಂಡರೂ ಯಾವುದೇ ಪ್ರಯೋಜನವಾಗಿಲ್ಲ.

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ
ರಘು ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 10:02 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ರಘು ಗೌಡ ಅವರು ತುಂಬಾನೇ ವಿಚಿತ್ರವಾಗಿದ್ದರು. ಅಷ್ಟೇ ಅಲ್ಲ, ಅವರು ನಡೆದುಕೊಳ್ಳುತ್ತಿದ್ದ ರೀತಿ ಅವರಿಗೇ ಇಷ್ಟವಾಗುತ್ತಿರಲಿಲ್ಲ. ಈಗ ಸೆಕೆಂಡ್​ ಇನ್ನಿಂಗ್ಸ್​ ಆರಂಭವಾಗಿದೆ. ರಘು ಗೌಡ ಸಾಕಷ್ಟು ಜೋಶ್​ನೊಂದಿಗೆ ಮನೆ ಒಳಗೆ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆಯಂತೆ.

ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದ ವ್ಯಕ್ತಿ ಎಂದರೆ ಅದು ರಘು ಗೌಡ. ತುಂಬಾನೇ ಎಮೋಷನಲ್​ ಆಗುತ್ತಿದ್ದ ಅವರು, ಟಾಸ್ಕ್​ಗಳಲ್ಲಿ ಹಿಂದೆ ಬಿದ್ದಿದ್ದರು. ನಂತರ ವೇಗ ಪಡೆದುಕೊಂಡಂತೆ ಕಂಡರೂ ಯಾವುದೇ ಪ್ರಯೋಜನವಾಗಿಲ್ಲ. ಬಿಗ್​ ಬಾಸ್​ ಮೊದಲ ಇನ್ನಿಂಗ್ಸ್​ ಕೊನೆಯ ಅವಧಿಯಲ್ಲಿ ಮತ್ತೆ ಮಂಕಾದರು. ಸಣ್ಣ ವಿಚಾರವನ್ನೂ ದೊಡ್ಡ ಮಟ್ಟದಲ್ಲಿ ಚಿಂತೆ ಮಾಡುತ್ತಿದ್ದರು.

ವೈಷ್ಣವಿ ಹಾಗೂ ರಘು ಒಟ್ಟಿಗೆ ಇರುತ್ತಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದಕ್ಕೂ ಕೂಡ ರಘು ದೊಡ್ಡ ಮಟ್ಟದಲ್ಲಿ ತಲೆಕೆಡಿಸಿಕೊಂಡಿದ್ದರು. ಆದರೆ, ಈಗ ಈ ಆಲೋಚನೆಗಳನ್ನು ಅವರು ಬದಿಗಿಟ್ಟಿದ್ದಾರೆ.

ಎರಡನೇ ಇನ್ನಿಂಗ್ಸ್​ಗಾಗಿ ಬಿಗ್​ ಬಾಸ್​ ವೇದಿಕೆ ಏರಿದ ರೌಘು, ‘ನಾನು ಅನಾವಶ್ಯಕ ಡೌಟ್​ ಪಡೋದಿಲ್ಲ. ಹಳೆಯ ಎಪಿಸೋಡ್​ಗಳನ್ನು ನೋಡುವಾಗ ಹೆಂಡತಿ ನನಗೆ ಬೈದಿದ್ದರು. ಸುಮ್ಮನೆ ಅಳ್ತೀಯಲ್ಲ ಎಂದಿದ್ದರು. ಈ ಬಾರಿ ಸ್ಯಾಡ್​ ಸಂತೋಷ್​ ಆಗೋ ಸೀನ್​ ಇಲ್ಲ. ಪಾಸಿಟಿವ್​ ಅಂಶಗಳನ್ನು ಮಾತ್ರ ತೆಗೆದುಕೊಂಡು, ಕೆಟ್ಟ ಅಂಶಗಳನ್ನು ಬಿಟ್ಟು ಬಿಡ್ತೀನಿ’ ಎಂದರು.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Published On - 9:33 pm, Wed, 23 June 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್