AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಈಡೇರಿತು ರಘು ಗೌಡ ಆಸೆ

ಬಿಗ್​ ಬಾಸ್​ ಮನೆಯಲ್ಲಿ ಉತ್ತಮ ಹಾಗೂ ಕಳಪೆ ಎನ್ನುವ ಪಟ್ಟವನ್ನು ಪ್ರತಿ ವಾರವೂ ನೀಡಲಾಗುತ್ತದೆ. ಉತ್ತಮ ಎನಿಸಿಕೊಂಡವರಿಗೆ ಪದಕ ಸಿಗುತ್ತದೆ. ಕಳಪೆ ಪಟ್ಟ ಪಡೆದುಕೊಂಡವರು ಕೈದಿಯಂತೆ ಒಂದು ದಿನ ಜೈಲಿನಲ್ಲಿ ಕಳೆಯಬೇಕು.

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಈಡೇರಿತು ರಘು ಗೌಡ ಆಸೆ
ರಘು ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: May 09, 2021 | 2:31 PM

Share

ಬಿಗ್​ ಬಾಸ್​ ಮನೆ ಒಳಗೆ ಬಂದ ನಂತರದಲ್ಲಿ ಎಲ್ಲಾ ಸ್ಪರ್ಧಿಗಳು ಗೆಲ್ಲಬೇಕು ಎಂದು ಕನಸು ಇಟ್ಟುಕೊಂಡಿರುತ್ತಾರೆ. ಇದರ ಜತೆಗೆ ಪ್ರತೀ ಸ್ಪರ್ಧಿಗೆ ಒಂದಲ್ಲಾ ಒಂದು ಆಸೆ ಇದ್ದೇ ಇರುತ್ತದೆ. ದಿವ್ಯಾ ಸುರೇಶ್​ಗೆ ಕ್ಯಾಪ್ಟನ್​ ಆಗಬೇಕು ಎನ್ನುವ ಆಸೆ ಇತ್ತು. ಆದರೆ, ಆ ಆಸೆ ಕೊನೆಗೂ ಈಡೇರಲೇ ಇಲ್ಲ. ಈಗ ಮನೆಯವರೆಲ್ಲರೂ ಸೇರಿ ರಘು ಗೌಡ ಅವರ ಆಸೆಯನ್ನು ಈಡೇರಿಸಿದ್ದಾರೆ. ಅಷ್ಟಕ್ಕೂ ರಘು ಇಟ್ಟುಕೊಂಡಿದ್ದ ಆಸೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಮನೆಯಲ್ಲಿ ಉತ್ತಮ ಹಾಗೂ ಕಳಪೆ ಎನ್ನುವ ಪಟ್ಟವನ್ನು ಪ್ರತಿ ವಾರವೂ ನೀಡಲಾಗುತ್ತದೆ. ಉತ್ತಮ ಎನಿಸಿಕೊಂಡವರಿಗೆ ಪದಕ ಸಿಗುತ್ತದೆ. ಕಳಪೆ ಪಟ್ಟ ಪಡೆದುಕೊಂಡವರು ಕೈದಿಯಂತೆ ಒಂದು ದಿನ ಜೈಲಿನಲ್ಲಿ ಕಳೆಯಬೇಕು. ಪ್ರಶಾಂತ್​ ಸಂಬರಗಿ, ಶಮಂತ್​ ಸೇರಿ ಅನೇಕರು ಕಳಪೆ ಪಟ್ಟ ಪಡೆದುಕೊಂಡಿದ್ದಾರೆ. ಆದರೆ, ರಘು ಗೌಡ ಒಮ್ಮೆಯೂ ಕಳಪೆ ಎನಿಸಿಕೊಂಡಿರಲಿಲ್ಲ.

ಆರಂಭದಲ್ಲಿ ತುಂಬಾನೇ ಸೈಲೆಂಟ್ ಇದ್ದ ರಘು ನಂತರ ಸುದೀಪ್​ ಕಿವಿಮಾತು ಹೇಳಿದ ನಂತರದಲ್ಲಿ ಬದಲಾಗಿದ್ದರು. ಮನೆಯಲ್ಲಿ ಸಾಕಷ್ಟು ಆ್ಯಕ್ಟಿವ್​ ಇದ್ದಿದ್ದರಿಂದ ಅವರಿಗೆ ಕಳಪೆ ಪಟ್ಟ ಸಿಕ್ಕಿರಲಿಲ್ಲ. ಹೀಗಾಗಿ, ಕೆಲ ವಾರಗಳ ಹಿಂದೆ ಪ್ರತಿಯೊಬ್ಬ ಸ್ಪರ್ಧಿಯ ಬಳಿಯೂ ಹೋಗಿ, ನನಗೆ ಕಳಪೆ ನೀಡಿ. ಜೈಲು ವಾಸ ಹೇಗಿರುತ್ತದೆ ಎಂದು ನೋಡಿಬರಬೇಕು ಎಂದು ಹೇಳಿದ್ದರು. ಅದು ಕೊನೆಯ ವಾರ ಈಡೇರಿದಂತಾಗಿದೆ.

ಬಿಗ್​ ಬಾಸ್​ ಕ್ಯಾಪ್ಟನ್ಸಿ ಟಾಸ್ಕ್​ ಒಂದನ್ನು ನೀಡಿದ್ದರು. ನಿಯಮದ ಪ್ರಕಾರ ಟಾಸ್ಕ್​ ಮುಗಿದ ಮೇಲೆ ಐಟಮ್​ಗಳನ್ನು ಯಾರೂ ಮುಟ್ಟುವಂತಿರಲಿಲ್ಲ. ಈ ಸೂಚನೆ ಗೊತ್ತಿದ್ದೂ ರಘು ಹೋಗಿ ಟಾಸ್ಕ್​ ಉಪಕರಣಗಳನ್ನು ಮುಟ್ಟಿದ್ದರು. ಹೀಗಾಗಿ, ಮನೆಯವರಿಗೆ ಟೀ-ಕಾಫಿ ನೀಡುವುದನ್ನು ನಿಲ್ಲಿಸಲಾಗಿತ್ತು. ಎಲ್ಲರೂ ಕಳಪೆ ಪಟ್ಟವನ್ನು ರಘು ಗೌಡ ಅವರಿಗೆ ನೀಡಿದ್ದರಿಂದ ಕೊನೆಯ ವಾರ ಅವರು ಜೈಲಿಗೆ ಹೋದರು. ಈ ಮೂಲಕ ಅವರ ಆಸೆ ಈಡೇರಿದೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದರ ತಡೆಗೆ ಸರ್ಕಾರ ನಾನಾ ಕ್ರಮ ಕೈಗೊಂಡಿದೆ. ಅದೇ ರೀತಿ ಧಾರಾವಾಹಿ, ಸಿನಿಮಾ ಹಾಗೂ ರಿಯಾಲಿಟಿ ಶೋ ಶೂಟಿಂಗ್​ಗೆ ಸರ್ಕಾರ ಬ್ರೇಕ್​ ಹಾಕಿದೆ. ಪರಿಣಾಮ ಬಿಗ್​ ಬಾಸ್​ ಶೋ ಅರ್ಧಕ್ಕೆ ನಿಲ್ಲುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

Kichcha Sudeep: ಬಿಗ್​ ಬಾಸ್​ ಸ್ಪರ್ಧಿ ಸೋನು ಪಾಟೀಲ್​ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ. ನೀಡಿದ ಕಿಚ್ಚ ಸುದೀಪ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ