ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

| Updated By: ganapathi bhat

Updated on: Apr 03, 2021 | 9:37 PM

ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ
ರಘು ಗೌಡ - ಬಿಗ್​ ಬಾಸ್
Follow us on

ಬಿಗ್​ ಬಾಸ್​ ಮನೆ ಸೇರಿರುವ ರಘು ಗೌಡ ಅವರು ತಮ್ಮ ಜೀವನದಲ್ಲಿ ತುಂಬಾನೇ ನೊಂದಿದ್ದಾರೆ. ಇದನ್ನು ಬಿಗ್​ ಬಾಸ್​ ಮನೆಯಲ್ಲಿ ಅನೇಕರ ಬಾರಿ ಹೇಳಿಕೊಂಡಿದ್ದಾರೆ. ಇದು ಮಾರ್ಕೆಟಿಂಗ್​ ತಂತ್ರ ಎಂದು ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಅಭಿಪ್ರಾಯಪಟ್ಟಿದ್ದಾರೆ.

ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಅವರಿಗೆ ಆಘಾತ ತಂದಿತ್ತು. ಆರಂಭದಲ್ಲಿ ಈ ವಿಚಾರದ ಬಗ್ಗೆ ರಘು ಹೇಳಿ ಅತ್ತುಕೊಂಡಿದ್ದಾರೆ. ಶುಕ್ರವಾರ (ಮಾರ್ಚ್​ 3) ವೈಷ್ಣವಿಯಲ್ಲಿ ರಘು ತಾಯಿಯನ್ನು ಕಂಡಿದ್ದರು. ಅಷ್ಟೇ ಅಲ್ಲ, ಕೆಲವೇ ಹೊತ್ತಿನಲ್ಲಿ ಗಳಗಳನೆ ಅತ್ತಿದ್ದರು. ಇದೊಂದು ಮಾರ್ಕೆಟಿಂಗ್​ ತಂತ್ರ ಎನ್ನುವ ಮಾತು ಕೇಳಿ ಬಂದಿದೆ.

ಪ್ರಶಾಂತ್ ಹಾಗೂ ಚಂದ್ರಚೂಡ್​ ತಮ್ಮ ತಂಡಕ್ಕೆ ಕೆಲ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎನ್ನುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಯಾರ ಯಾವ ಟೀಂ ಎನ್ನುವ ಬಗ್ಗೆ ಚಂದ್ರಚೂಡ್​ಗೆ ಪ್ರಶಾಂತ್ ಲೆಕ್ಕಾಚಾರ ಒಪ್ಪಿಸಿದ್ದಾರೆ. ಆಗ ರಘು ಬಗ್ಗೆ ಚಂದ್ರಚೂಡ್​ ಮಾತನಾಡಿದ್ದಾರೆ.

ರಘು ಒಳ್ಳೆಯ ವ್ಯಕ್ತಿ. ಆದರೆ, ಅವರು ತಮ್ಮ ನೋವು ಹಾಗೂ ದುಃಖವನ್ನೇ ಹೇಳಿಕೊಂಡು ಓಡಾಡುತ್ತಿದ್ದಾರೆ. ತಮ್ಮ ನೋವನ್ನು ಮಾರ್ಕೆಟಿಂಗ್​ ತಂತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರು ಹೊರ ಬರಬೇಕಿದೆ ಎಂದು ಚಂದ್ರಚೂಡ್​ ಅಭಿಪ್ರಾಯಪಟ್ಟರು. ಅದೇನೆ ಇರಲಿ, ಆತ ನನ್ನ ಪಾಲಿಗೆ ಒಳ್ಳೆಯ ಹುಡುಗ. ಅವನಿಗೆ ನಮ್ಮ ಟೀಂಗೆ ಬರಬೇಕೆಂದಿದೆ. ಆದರೆ, ಒಮ್ಮೊಮ್ಮೆ ಅವರು ತಮ್ಮ ನಿರ್ಧಾರ ಬದಲಿಸುತ್ತಾರೆ. ಆದರೆ, ಆತ ಎಲ್ಲವನ್ನೂ ನೇರ ನೇರ ಹೇಳ್ತಾರೆ ಎಂದರು.

ಇದನ್ನೂ ಓದಿ: ಒಮ್ಮೊಮ್ಮೆ ಹುಟ್ಟಲೇ ಬಾರದಿತ್ತು ಅನಿಸುತ್ತೆ; ವೈಷ್ಣವಿಯಲ್ಲಿ ತಾಯಿಯನ್ನು ಕಂಡು ಅತ್ತ ರಘು!

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Published On - 9:36 pm, Sat, 3 April 21