AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್​ನಿಂದ ಹೊರ ಬಂದ ರಘು ಗೌಡ ಗತಿ ನೋಡಿ ನಕ್ಕ ಶೈನ್​ ಶೆಟ್ಟಿ

ರಘು ಗೌಡ ಹೊಸ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಘು ಮುಖಕ್ಕೆ ಏಟುಗಳು ಬಿದ್ದಿವೆ.

ಕನ್ನಡ ಬಿಗ್ ಬಾಸ್​ನಿಂದ ಹೊರ ಬಂದ ರಘು ಗೌಡ ಗತಿ ನೋಡಿ ನಕ್ಕ ಶೈನ್​ ಶೆಟ್ಟಿ
ವಿದ್ಯಶ್ರೀ ಜತೆ ರಘು ಗೌಡ
ರಾಜೇಶ್ ದುಗ್ಗುಮನೆ
|

Updated on:May 14, 2021 | 7:19 PM

Share

ರಘು ಗೌಡ-ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಒಳ್ಳೆಯ ಗೆಳೆಯರಾಗಿದ್ದರು. ಇದೇ ವಿಚಾರ ಇಟ್ಟುಕೊಂಡು ಕಿಚ್ಚ ಸುದೀಪ್​ ಹಾಗೂ ಕಣ್ಮಣಿ ಕಾಲೆಳೆದಿದ್ದರು. ಬಿಗ್​ ಬಾಸ್​ ಮನೆಯಲ್ಲಿ ರಘು ಕ್ಯಾಪ್ಟನ್​ ಆದಾಗ ಅವರ ಪತ್ನಿ ವಿದ್ಯಶ್ರೀ ವಾಯ್ಸ್​ನೋಟ್ ಬಂದಿತ್ತು. ಈ ವಾಯ್ಸ್​ ನೋಟ್​ನಲ್ಲಿ ರಘುಗೆ ಹಿತವಾದ ಎಚ್ಚರಿಕೆಯೂ ಇತ್ತು. ಹಾಗಾದರೆ, ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೆ ರಘು ಗೌಡ ಕಥೆ ಏನಾಯ್ತು? ಈ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ.

ವೈಷ್ಣವಿ ಜತೆ ಸಲಿಗೆಯಿಂದ ಇರೋದಕ್ಕೆ ರಘುಗೆ ಅವರ ಹೆಂಡತಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಮನೆ ಮಂದಿ ಮಾತನಾಡಿಕೊಂಡಿದ್ದರು. ಕೆಲವರು, ರಘು ಅವರನ್ನು ಹೆಂಡತಿ ಮನೆ ಒಳಗೇ ಬಿಟ್ಟುಕೊಳ್ಳುವುದಿಲ್ಲ ಎಂದು ಬಣ್ಣಿಸಿದ್ದರು. ಆದರೆ, ಅದೃಷ್ಟವಶಾತ್​ ಆರೀತಿ ಏನು ಆಗಿಲ್ಲ ಎಂದು ಕಲರ್ಸ್​ ಕನ್ನಡ ವಾಹಿನಿ ಲೈವ್​ನಲ್ಲಿ ರಘು ಹೇಳಿದ್ದರು. ಇದಾದ ಮರುದಿನವೇ ರಘು ಮುಖದ ಶೇಪ್​ ಬದಲಾಗಿದೆ!

ರಘು ಗೌಡ ಹೊಸ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಘು ಮುಖಕ್ಕೆ ಏಟುಗಳು ಬಿದ್ದಿವೆ. ವಿದ್ಯಾಶ್ರೀ ಕೈನಲ್ಲಿ ಸೌಟು ಹಾಗೂ ಲಟ್ಟಣಿಗೆ ಹಿಡಿದು ನಿಂತಿದ್ದಾರೆ. ಇದಕ್ಕೆ ರಘು, ನಾನು ಸೇಫ್​ ಆಗಿದ್ದೇನೆ. ಅವಳು ಎಲ್ಲವನ್ನೂ ಸ್ಪೋರ್ಟಿವ್​ ಆಗಿ ತೆಗೆದುಕೊಂಡಿದ್ದಾಳೆ ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಇದನ್ನು ನೋಡಿ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್​ 7 ವಿನ್ನರ್ ಶೈನ್​ ಶೆಟ್ಟಿ ಇದಕ್ಕೆ ಪ್ರತಿಕ್ರಿಯಿಸಿದ್ದು, ‘ಇದೇ ರೀತಿ ಗಂಡ-ಹೆಂಡತಿ ಸ್ಪೋರ್ಟಿವ್​ ಆಗಿರಿ’ ಎಂದು ನಕ್ಕಿದ್ದಾರೆ. ‘ವಿದ್ಯಾ ಸ್ಪೋರ್ಟಿವ್​ ಆಗೇ ತಗೊಂಡಿದಾರೆ’ ಎಂದು ನಟಿ, ಬಿಗ್​ ಬಾಸ್​ ಸೀಸನ್​ 8 ಸ್ಪರ್ಧಿ ನಿಧಿ ಸುಬ್ಬಯ್ಯ ಕಮೆಂಟ್​ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಕ್ಯಾಪ್ಟನ್​ ಆಗಿದ್ದರು. ಈ ವೇಳೆ ರಘು ಪತ್ನಿ ಅವರ ವಾಯ್ಸ್​ ಮೆಸೇಜ್​ ಬಂದಿತ್ತು. ‘ಹಾಯ್ ರಘು ಹೇಗಿದ್ದೀಯಾ? ತುಂಬಾ ಚೆನ್ನಾಗಿ ಆಡುತ್ತಾ ಇದೀಯಾ. ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿಭಾಯಿಸು. ಕಿಚ್ಚನ ಚಪ್ಪಾಳೆ ಬಂದಿದ್ದು ಖುಷಿ ಆಯ್ತು. ನಿನ್ನ ಜತೆ ಜಗಳ ಆಡೋದನ್ನು ನಾನು ಮಿಸ್ ಮಾಡಿಕೊಳ್ಳುತ್ತಾ ಇದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದನ್ನು ನಾನು ಸ್ಪೋರ್ಟೀವ್ ಆಗಿ ತೆಗೆದುಕೊಳ್ಳುತ್ತಿದ್ದೇನೆ. ಮಜಾ ಮಾಡು. ಹಾಯಾಗಿರು. ಬೇರೆಯವರನ್ನು ನಗಿಸು’ ಎಂದು ರಘುಗೆ ಹೇಳಿದ್ದರು. ಇದನ್ನು ರಘು ಕಾಲೆಳೆಯಲು ಮನೆ ಮಂದಿ ಬಳಕೆ ಮಾಡಿಕೊಂಡಿದ್ದರು.

ಇದನ್ನೂ ಓದಿ: Bigg Boss Kannada: ಇನ್ನೂ ಮುಗಿದಿಲ್ಲ ಬಿಗ್​ ಬಾಸ್ ಮನರಂಜನೆ; ವೀಕೆಂಡ್​ನಲ್ಲಿ ಪ್ರೇಕ್ಷಕರಿಗಾಗಿ ಕಾದಿದೆ ಸ್ಪೆಷಲ್​ ಎಪಿಸೋಡ್​

Published On - 7:11 pm, Fri, 14 May 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ