AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ
ರಘು ಗೌಡ-ವಿದ್ಯಾಶ್ರೀ
ರಾಜೇಶ್ ದುಗ್ಗುಮನೆ
|

Updated on: May 12, 2021 | 4:44 PM

Share

ಕೊರೊನಾ ವೈರಸ್​ ಕಾರಣದಿಂದ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡಲಾಗಿದೆ. ಕೊನೆಯ ಎಪಿಸೋಡ್​ನಲ್ಲಿ ರಘು ಗೌಡಗೆ ಹೆಂಡತಿ ಬಗ್ಗೆ ಭಯ ಕಾಡಿದೆ. ಈ ಬಗ್ಗೆ ಅವರು ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ.

ಕೆಲ ವಾರಗಳ ಹಿಂದೆ ರಘು ಗೌಡ ಕ್ಯಾಪ್ಟನ್​ ಆಗಿದ್ದರು. ಈ ವೇಳೆ ರಘು ಪತ್ನಿ ಅವರ ವಾಯ್ಸ್​ ಮೆಸೇಜ್​ ಬಂದಿತ್ತು. ಹಾಯ್ ರಘು ಹೇಗಿದ್ದೀಯಾ? ತುಂಬಾ ಚೆನ್ನಾಗಿ ಆಡುತ್ತಾ ಇದೀಯಾ. ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿಭಾಯಿಸು. ಕಿಚ್ಚನ ಚಪ್ಪಾಳೆ ಬಂದಿದ್ದು ಖುಷಿ ಆಯ್ತು. ನಿನ್ನ ಜತೆ ಜಗಳ ಆಡೋದನ್ನು ನಾನು ಮಿಸ್ ಮಾಡಿಕೊಳ್ಳುತ್ತಾ ಇದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದನ್ನು ನಾನು ಸ್ಪೋರ್ಟೀವ್ ಆಗಿ ತೆಗೆದುಕೊಳ್ಳುತ್ತಿದ್ದೇನೆ. ಮಜಾ ಮಾಡು. ಹಾಯಾಗಿರು. ಬೇರೆಯವರನ್ನು ನಗಿಸು ಎಂದು ರಘುಗೆ ಹೇಳಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ರಘು ಪತ್ನಿ ಹೇಳಿದ್ದರು ಎನ್ನಲಾಗಿತ್ತು. ಈ ವಿಚಾರ ಕೊನೆಯ ದಿನವೂ ಚರ್ಚೆಗೆ ಬಂದಿದೆ.

‘ನಾಳೆ ಎಲ್ಲರೂ ಏಳುವುದಕ್ಕೆ ಮುಂಚೆ ಅಡುಗೆ ಮನೆಯಲ್ಲಿ ಇರುತ್ತೀರಾ’’ ಎಂದು ರಘುವನ್ನು ಕಣ್ಮಣಿ ಕೊನೆಯ ದಿನ ಪ್ರಶ್ನೆ ಮಾಡಿದ್ದಾಳೆ. ‘ಅಡುಗೆ ಮನೆಯಲ್ಲಿರುತ್ತೇನೆ. ಆದರೆ, ಅಲ್ಲಿ ನನ್ನ ಹೆಂಡತಿ ಇರುತ್ತಾಳೆ’ ಎಂದು ರಘು ಮಾತು ಆರಂಭಿಸುತ್ತಿದ್ದಂತೆ ‘ಇವತ್ತು ಮನೆಯಲ್ಲಿ ಹೆಂಡತಿ ಬಿಟ್ಕೊಂಡ್ರೆ ತಾನೇ’ ಎಂದರು ಅರವಿಂದ್​.

‘ಹೆಂಡತಿ ಹೇಳಿದಂತೆ ನಾನು ಬಿಗ್​ ಬಾಸ್​ ಮನೆಯಲ್ಲಿ ಮಜಾ ಏನೋ ಮಾಡಿದೆ. ಈಗ ಮನೆಗೆ ಹೋಗಬೇಕೋ ಅಥವಾ ಬೇರೆಕಡೆ ಹೋಗಬೇಕೋ’ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ನಕ್ಕಿದ್ದಾರೆ. ಈ ಮಾತು ಕೇಳಿ ಮನೆಯವರೂ ಮನಸಾರೆ ನಕ್ಕಿದ್ದಾರೆ.

ಇದನ್ನೂ ಓದಿ: Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ