AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ
ರಘು ಗೌಡ-ವಿದ್ಯಾಶ್ರೀ
ರಾಜೇಶ್ ದುಗ್ಗುಮನೆ
|

Updated on: May 12, 2021 | 4:44 PM

Share

ಕೊರೊನಾ ವೈರಸ್​ ಕಾರಣದಿಂದ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡಲಾಗಿದೆ. ಕೊನೆಯ ಎಪಿಸೋಡ್​ನಲ್ಲಿ ರಘು ಗೌಡಗೆ ಹೆಂಡತಿ ಬಗ್ಗೆ ಭಯ ಕಾಡಿದೆ. ಈ ಬಗ್ಗೆ ಅವರು ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ.

ಕೆಲ ವಾರಗಳ ಹಿಂದೆ ರಘು ಗೌಡ ಕ್ಯಾಪ್ಟನ್​ ಆಗಿದ್ದರು. ಈ ವೇಳೆ ರಘು ಪತ್ನಿ ಅವರ ವಾಯ್ಸ್​ ಮೆಸೇಜ್​ ಬಂದಿತ್ತು. ಹಾಯ್ ರಘು ಹೇಗಿದ್ದೀಯಾ? ತುಂಬಾ ಚೆನ್ನಾಗಿ ಆಡುತ್ತಾ ಇದೀಯಾ. ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿಭಾಯಿಸು. ಕಿಚ್ಚನ ಚಪ್ಪಾಳೆ ಬಂದಿದ್ದು ಖುಷಿ ಆಯ್ತು. ನಿನ್ನ ಜತೆ ಜಗಳ ಆಡೋದನ್ನು ನಾನು ಮಿಸ್ ಮಾಡಿಕೊಳ್ಳುತ್ತಾ ಇದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದನ್ನು ನಾನು ಸ್ಪೋರ್ಟೀವ್ ಆಗಿ ತೆಗೆದುಕೊಳ್ಳುತ್ತಿದ್ದೇನೆ. ಮಜಾ ಮಾಡು. ಹಾಯಾಗಿರು. ಬೇರೆಯವರನ್ನು ನಗಿಸು ಎಂದು ರಘುಗೆ ಹೇಳಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ರಘು ಪತ್ನಿ ಹೇಳಿದ್ದರು ಎನ್ನಲಾಗಿತ್ತು. ಈ ವಿಚಾರ ಕೊನೆಯ ದಿನವೂ ಚರ್ಚೆಗೆ ಬಂದಿದೆ.

‘ನಾಳೆ ಎಲ್ಲರೂ ಏಳುವುದಕ್ಕೆ ಮುಂಚೆ ಅಡುಗೆ ಮನೆಯಲ್ಲಿ ಇರುತ್ತೀರಾ’’ ಎಂದು ರಘುವನ್ನು ಕಣ್ಮಣಿ ಕೊನೆಯ ದಿನ ಪ್ರಶ್ನೆ ಮಾಡಿದ್ದಾಳೆ. ‘ಅಡುಗೆ ಮನೆಯಲ್ಲಿರುತ್ತೇನೆ. ಆದರೆ, ಅಲ್ಲಿ ನನ್ನ ಹೆಂಡತಿ ಇರುತ್ತಾಳೆ’ ಎಂದು ರಘು ಮಾತು ಆರಂಭಿಸುತ್ತಿದ್ದಂತೆ ‘ಇವತ್ತು ಮನೆಯಲ್ಲಿ ಹೆಂಡತಿ ಬಿಟ್ಕೊಂಡ್ರೆ ತಾನೇ’ ಎಂದರು ಅರವಿಂದ್​.

‘ಹೆಂಡತಿ ಹೇಳಿದಂತೆ ನಾನು ಬಿಗ್​ ಬಾಸ್​ ಮನೆಯಲ್ಲಿ ಮಜಾ ಏನೋ ಮಾಡಿದೆ. ಈಗ ಮನೆಗೆ ಹೋಗಬೇಕೋ ಅಥವಾ ಬೇರೆಕಡೆ ಹೋಗಬೇಕೋ’ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ನಕ್ಕಿದ್ದಾರೆ. ಈ ಮಾತು ಕೇಳಿ ಮನೆಯವರೂ ಮನಸಾರೆ ನಕ್ಕಿದ್ದಾರೆ.

ಇದನ್ನೂ ಓದಿ: Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!