AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು.

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ
ರಘು ಗೌಡ-ವಿದ್ಯಾಶ್ರೀ
ರಾಜೇಶ್ ದುಗ್ಗುಮನೆ
|

Updated on: May 12, 2021 | 4:44 PM

Share

ಕೊರೊನಾ ವೈರಸ್​ ಕಾರಣದಿಂದ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡಲಾಗಿದೆ. ಕೊನೆಯ ಎಪಿಸೋಡ್​ನಲ್ಲಿ ರಘು ಗೌಡಗೆ ಹೆಂಡತಿ ಬಗ್ಗೆ ಭಯ ಕಾಡಿದೆ. ಈ ಬಗ್ಗೆ ಅವರು ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ.

ಕೆಲ ವಾರಗಳ ಹಿಂದೆ ರಘು ಗೌಡ ಕ್ಯಾಪ್ಟನ್​ ಆಗಿದ್ದರು. ಈ ವೇಳೆ ರಘು ಪತ್ನಿ ಅವರ ವಾಯ್ಸ್​ ಮೆಸೇಜ್​ ಬಂದಿತ್ತು. ಹಾಯ್ ರಘು ಹೇಗಿದ್ದೀಯಾ? ತುಂಬಾ ಚೆನ್ನಾಗಿ ಆಡುತ್ತಾ ಇದೀಯಾ. ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿಭಾಯಿಸು. ಕಿಚ್ಚನ ಚಪ್ಪಾಳೆ ಬಂದಿದ್ದು ಖುಷಿ ಆಯ್ತು. ನಿನ್ನ ಜತೆ ಜಗಳ ಆಡೋದನ್ನು ನಾನು ಮಿಸ್ ಮಾಡಿಕೊಳ್ಳುತ್ತಾ ಇದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದನ್ನು ನಾನು ಸ್ಪೋರ್ಟೀವ್ ಆಗಿ ತೆಗೆದುಕೊಳ್ಳುತ್ತಿದ್ದೇನೆ. ಮಜಾ ಮಾಡು. ಹಾಯಾಗಿರು. ಬೇರೆಯವರನ್ನು ನಗಿಸು ಎಂದು ರಘುಗೆ ಹೇಳಿದ್ದರು.

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದರು. ಅವರ ನಡುವೆ ಉತ್ತಮ ಗೆಳೆತನ ಬೆಳೆದಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿತ್ತು. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ರಘು ಪತ್ನಿ ಹೇಳಿದ್ದರು ಎನ್ನಲಾಗಿತ್ತು. ಈ ವಿಚಾರ ಕೊನೆಯ ದಿನವೂ ಚರ್ಚೆಗೆ ಬಂದಿದೆ.

‘ನಾಳೆ ಎಲ್ಲರೂ ಏಳುವುದಕ್ಕೆ ಮುಂಚೆ ಅಡುಗೆ ಮನೆಯಲ್ಲಿ ಇರುತ್ತೀರಾ’’ ಎಂದು ರಘುವನ್ನು ಕಣ್ಮಣಿ ಕೊನೆಯ ದಿನ ಪ್ರಶ್ನೆ ಮಾಡಿದ್ದಾಳೆ. ‘ಅಡುಗೆ ಮನೆಯಲ್ಲಿರುತ್ತೇನೆ. ಆದರೆ, ಅಲ್ಲಿ ನನ್ನ ಹೆಂಡತಿ ಇರುತ್ತಾಳೆ’ ಎಂದು ರಘು ಮಾತು ಆರಂಭಿಸುತ್ತಿದ್ದಂತೆ ‘ಇವತ್ತು ಮನೆಯಲ್ಲಿ ಹೆಂಡತಿ ಬಿಟ್ಕೊಂಡ್ರೆ ತಾನೇ’ ಎಂದರು ಅರವಿಂದ್​.

‘ಹೆಂಡತಿ ಹೇಳಿದಂತೆ ನಾನು ಬಿಗ್​ ಬಾಸ್​ ಮನೆಯಲ್ಲಿ ಮಜಾ ಏನೋ ಮಾಡಿದೆ. ಈಗ ಮನೆಗೆ ಹೋಗಬೇಕೋ ಅಥವಾ ಬೇರೆಕಡೆ ಹೋಗಬೇಕೋ’ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ನಕ್ಕಿದ್ದಾರೆ. ಈ ಮಾತು ಕೇಳಿ ಮನೆಯವರೂ ಮನಸಾರೆ ನಕ್ಕಿದ್ದಾರೆ.

ಇದನ್ನೂ ಓದಿ: Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ