‘ಬಿಗ್​ ಬಾಸ್​ ಮನೆಯಲ್ಲಿ ನಾನು ನಾಗವಲ್ಲಿ ತರ ಆಗಿದ್ದೆ’; ಮನೆಯಿಂದ ಹೊರಬಂದ ರಘು ಹೇಳಿದ್ದಿಷ್ಟು

ಕಲರ್ಸ್ ಕನ್ನಡ ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ರಘು ಲೈವ್ ಬಂದಿದ್ದಾರೆ. ಈ ವೇಳೆ ಒಂದಷ್ಟು ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ನಾನು ನಾಗವಲ್ಲಿ ತರ ಆಗಿದ್ದೆ’; ಮನೆಯಿಂದ ಹೊರಬಂದ ರಘು ಹೇಳಿದ್ದಿಷ್ಟು
ರಘು ಗೌಡ
Follow us
|

Updated on:May 13, 2021 | 6:05 PM

ರಘು ಗೌಡ ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಅರ್ಥವಾಗಿಲ್ಲ. ಆರಂಭದಲ್ಲಿ ತುಂಬಾನೇ ಕೊರಗಿದ್ದ ಅವರು, ಕಿಚ್ಚ ಸುದೀಪ್ ವಾರ್ನಿಂಗ್ ನೀಡಿದ ನಂತರ ತಿದ್ದಿಕೊಂಡರು. ಆದರೆ, ಕೊನೆಕೊನೆಗೆ ಮತ್ತೆ ಮೊದಲಿನಂತಾಗಿದ್ದರು. ಸಣ್ಣಸಣ್ಣ ವಿಚಾರಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿದ್ದರು. ಈಗ ಅವರು ಮನೆಯಿಂದ ಹೊರ ಬಂದಮೇಲೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾನು ನಾಗವಲ್ಲಿ ರೀತಿ ಆಗಿದ್ದೆ’ ಎಂದು ರಘು ಹೇಳಿಕೊಂಡಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ರಘು ಲೈವ್ ಬಂದಿದ್ದಾರೆ. ಈ ವೇಳೆ ಒಂದಷ್ಟು ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೆ. ನೀವು ಬಿಗ್ ಬಾಸ್ ಮನೆಯಲ್ಲಿ ಗೊಂದಲದಲ್ಲಿದ್ದಿರಿ. ನಿಮಗೆ ಕ್ಲ್ಯಾರಿಟಿ ಇತ್ತೇ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ರಘು, ‘ನನಗೆ ಜೀವನದಲ್ಲಿ ಕ್ಲ್ಯಾರಿಟಿ ಇದೆ. ನಾನು 8 ವರ್ಷ ಕೆಲಸ ಮಾಡಿದ್ದೇನೆ. 3 ವರ್ಷ ಎಂಟರ್ಟೇನ್ಮೆಂಟ್ ಫೀಲ್ಡ್​ನಲ್ಲೇ ಇದ್ದೆ. ಲೈಫ್​ನಲ್ಲಿ ಏನ್ ಮಾಡಬೇಕು ಅನ್ನೋದು ಕ್ಲಿಯರ್ ಆಗಿ ತಿಳಿದಿದೆ. ಬಿಗ್ ಬಾಸ್​ನಲ್ಲಿ ಮೇನ್ ನಾನು ನಾಗವಲ್ಲಿ ರೀತಿಯಲ್ಲಿ ಇದ್ದೆ. ರಘು ಆಗಿರಬೇಕೋ ಅಥವಾ ರಘು ವೈನ್ ಸ್ಟೋರ್ ಆಗಿರಬೇಕು ಎನ್ನುವ ದ್ವಂದ್ವದಲ್ಲೇ ಕಳೆದ’ ಎಂದರು.

‘ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನರು ಸೈಕೋ ಎಂದು ಕಮೆಂಟ್ ಮಾಡಿದ್ದರು. ಇದನ್ನು ನೋಡಿ ಬೇಸರವಾಗಿತ್ತು. ಬಿಗ್ ಬಾಸ್ ಮನೆಯಲ್ಲಿ ಗೊಂದಲ ಇತ್ತು. ಮೂಡ್ ಸ್ವಿಂಗ್ಸ್ ಜಾಸ್ತಿ ಇತ್ತು. ಅದಕ್ಕಾಗಿ ಸೈಕೋ ಎಂದು ಹೇಳುವುದು ಸರಿ ಅಲ್ಲ. ಈ ವಿಚಾರ ನನ್ನ ಮನೆಯವರ ಮೇಲೆ ಹೆಚ್ಚು ಇಂಪ್ಯಾಕ್ಟ್ ಮಾಡಿದೆ’ ಎಂದರು ರಘು.

ಬಿಗ್​ ಬಾಸ್​ ವೇದಿಕೆ ಏರಿಬಂದ ಮೇಲೆ ಅದೃಷ್ಟ ಬದಲಾಗುತ್ತದೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಮೊದಲ ಏಳು ಸೀಸನ್​ಗಳಲ್ಲಿ ಕಾಣಿಸಿಕೊಂಡ ಸಾಕಷ್ಟು ಮಂದಿಯ ಲಕ್​ ಬದಲಾಗಿದೆ. ಈ ಬಾರಿಯ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದ್ದರಿಂದ ಮನೆಯಲ್ಲಿದ್ದ 11 ಸ್ಪರ್ಧಿಗಳು ತಮ್ಮ ಮನೆ ಸೇರಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಬೆನ್ನಲ್ಲೇ ರಘು ಗೌಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ ಎಂದು ಘೋಷಣೆ ಮಾಡಿದ್ದರು. ಅವರು ‘ದ್ವಿಪಾತ್ರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

ಹೆಂಡತಿ ಮಾತು ಕೇಳಿ ಬಿಗ್​ ಬಾಸ್​ ಮನೆಯಲ್ಲಿ ಮಜಾ ಮಾಡಿದೆ, ಆದರೆ; ರಘುಗೆ ಸ್ಟಾರ್ಟ್​ ಆಯ್ತು ಆತಂಕ

Published On - 5:33 pm, Thu, 13 May 21

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​