ವೈಷ್ಣವಿ ಜತೆ ರಘು ಗೌಡ ಕ್ಲೋಸ್​ ಆಗಿರೋ ಬಗ್ಗೆ ಅವರ ಪತ್ನಿ ವಿದ್ಯಾಶ್ರೀ ಹೇಳಿದ್ದೇನು?

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದಾರೆ. ಅವರ ನಡುವೆ ಉತ್ತಮ ಗೆಳೆತನವಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿದೆ.

ವೈಷ್ಣವಿ ಜತೆ ರಘು ಗೌಡ ಕ್ಲೋಸ್​ ಆಗಿರೋ ಬಗ್ಗೆ ಅವರ ಪತ್ನಿ ವಿದ್ಯಾಶ್ರೀ ಹೇಳಿದ್ದೇನು?
ರಘು ಗೌಡ-ವಿದ್ಯಾಶ್ರೀ
Follow us
| Updated By: ಮದನ್​ ಕುಮಾರ್​

Updated on: Apr 25, 2021 | 4:00 PM

ರಘು ಗೌಡ ಬಿಗ್​ ಬಾಸ್​ ಮನೆಯಲ್ಲಿ ಹಾಯಾಗಿದ್ದಾರೆ. ಆರಂಭದಲ್ಲಿ ಮನೆಯನ್ನು ನೆನಪು ಮಾಡಿಕೊಂಡು ಅಳುತ್ತಿದ್ದ ಅವರು ನಂತರ ಸಂಪೂರ್ಣ ಬದಲಾಗಿದ್ದಾರೆ. ಇತ್ತೀಚೆಗೆ ಅವರು ಹೆಂಡತಿ ಹೆಸರನ್ನೇ ಮರೆತು ಹೋಗಿದ್ದರು ಎಂಬ ವಿಚಾರ ಹೇಳಿಕೊಂಡು ಶುಭಾ ಪೂಂಜಾ ನಕ್ಕಿದ್ದರು. ಈಗ ಎಂಟನೇ ವಾರದ ಕ್ಯಾಪ್ಟನ್​ ಆಗಿರುವುದಕ್ಕೆ ರಘುಗೆ ಹೆಂಡತಿ ವಿದ್ಯಾಶ್ರೀ ವಾಯ್ಸ್​ ಕೇಳಿಸಿದೆ. ಈ ವೇಳೆ ರಘುಗೆ ಮಾತಲ್ಲೇ ಅವರು ತಿವಿದಿದ್ದಾರೆ.

ಎಂಟನೇ ವಾರದ ಕ್ಯಾಪ್ಟನ್ಸಿ ಟಾಸ್ಕ್ ಶನಿವಾರ (ಎಪ್ರಿಲ್​ 24) ನಡೆದಿದೆ. ಗಾರ್ಡನ್ ಏರಿಯಾದಲ್ಲಿ ಹೂವಿನ ಮಳೆ ಆಗುತ್ತದೆ. ಸ್ಪರ್ಧಿಗಳು ಹೂವನ್ನು ಸಂಗ್ರಹಿಸಬೇಕು, ಹೆಚ್ಚು ಹೂವಿದ್ದವರು ಕ್ಯಾಪ್ಟನ್ ಆಗುತ್ತಾರೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿದ್ದ ಮಂಜು, ರಾಜೀವ್, ರಘು ಗೌಡ ಹಾಗೂ ಪ್ರಶಾಂತ್ ಹೂವನ್ನು ಸಂಗ್ರಹಿಸೋಕೆ ಮುಂದಾದರು. ನಂತರ ಇದಕ್ಕೆ ಮನೆಯವರ ಸಹಾಯ ಕೂಡ ಪಡೆಯಬಹುದು ಎನ್ನುವ ಆದೇಶ ಬಂತು. ಆಗ ಅರವಿಂದ್, ವೈಷ್ಣವಿ ಮೊದಲಾದವರು ರಘುಗೆ ಸಹಾಯ ಮಾಡಿದರು. ಕೊನೆಯಲ್ಲಿ ಅಚ್ಚರಿ ಎಂಬಂತೆ ಪ್ರಶಾಂತ್ ತಾವು ಸಂಗ್ರಹಿಸಿದ್ದ ಹೂವನ್ನು ರಘು ಗೌಡಗೆ ನೀಡಿದರು. ಈ ಮೂಲಕ ರಘು ಕ್ಯಾಪ್ಟನ್ ಆದರು.

ಕ್ಯಾಪ್ಟನ್​ ಆದ ಕೆಲವೇ ಹೊತ್ತಿಗೆ ರಘು ಪತ್ನಿ ಅವರ ವಾಯ್ಸ್​ ಮೆಸೇಜ್​ ಬಂತು. ಹಾಯ್ ರಘು ಹೇಗಿದ್ದೀಯಾ? ತುಂಬಾ ಚೆನ್ನಾಗಿ ಆಡುತ್ತಾ ಇದೀಯಾ. ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿಭಾಯಿಸು. ಕಿಚ್ಚನ ಚಪ್ಪಾಳೆ ಬಂದಿದ್ದು ಖುಷಿ ಆಯ್ತು. ನಿನ್ನ ಜತೆ ಜಗಳ ಆಡೋದನ್ನು ನಾನು ಮಿಸ್ ಮಾಡಿಕೊಳ್ಳುತ್ತಾ ಇದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ನಡೆಯುವುದನ್ನು ನಾನು ಸ್ಪೋರ್ಟೀವ್ ಆಗಿ ತೆಗೆದುಕೊಳ್ಳುತ್ತಿದ್ದೇನೆ. ಮಜಾ ಮಾಡು. ಹಾಯಾಗಿರು. ಬೇರೆಯವರನ್ನು ನಗಿಸು ಎಂದು ರಘುಗೆ ಹೇಳಿದರು.

ಕೊನೆಯಲ್ಲಿ ಮಜಾ ಮಾಡ್ಕೊಂಡು ಬಾ ಏನು ಅಭ್ಯಂತರವಿಲ್ಲ ಎಂದು ಹೇಳುವಾಗ ಅವರ ಟೋನ್​ ಸಂಪೂರ್ಣ ಬದಲಾಗಿತ್ತು. ಅದರಲ್ಲಿ ಸಣ್ಣ ಎಚ್ಚರಿಕೆ ಕೂಡ ಇತ್ತು. ಇದನ್ನು ಕೇಳಿದ ಮನೆಯವರು ನಕ್ಕರು.

ಬಿಗ್​ ಬಾಸ್​ ಮನೆಯಲ್ಲಿ ರಘು ಗೌಡ ಹಾಗೂ ವೈಷ್ಣವಿ ಗೌಡ ಹೆಚ್ಚು ಆಪ್ತರಾಗಿದ್ದಾರೆ. ಅವರ ನಡುವೆ ಉತ್ತಮ ಗೆಳೆತನವಿದೆ. ಈ ವಿಚಾರ ಮನೆಯಲ್ಲಿ ಅನೇಕ ಬಾರಿ ಚರ್ಚೆ ಕೂಡ ಆಗಿದೆ. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ರಘು ಪತ್ನಿ ಹೀಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಂಗೆ ಮರ್ಯಾದೆ ಇಲ್ವಾ, ನನ್ ಹಿಂದೆ ಬರಬೇಡ; ಬಿಗ್​ ಬಾಸ್​ ಚೆಲುವೆಗೆ ಮಂಜು ಹೀಗೆ ಹೇಳಿದ್ದೇಕೆ?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ