AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

Indira Nagar Ka Gunda: ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!
ರಾಹುಲ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 10, 2021 | 5:36 PM

Share

ಶುಕ್ರವಾರದಿಂದ ಎಲ್ಲೆಲ್ಲೂ ಒಂದೇ ಚರ್ಚೆ. ಅದು ರಾಹುಲ್​ ದ್ರಾವಿಡ್​ ಅವರ ವಿಡಿಯೋ. ಜಾಹೀರಾತಿಗಾಗಿ ಅವರು ಭಿನ್ನ ಅವತಾರ ತಾಳಿದ್ದು ಎಲ್ಲರಿಗೂ ಇಷ್ಟವಾಗಿತ್ತು. ಅಷ್ಟೇ ಅಲ್ಲ, ಈ ಆ್ಯಡ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಈಗ ದೀಪಿಕಾ ಪಡುಕೋಣೆ ಕೂಡ ದ್ರಾವಿಡ್​ ನಡೆದ ಹಾದಿಯನ್ನೇ ಅನುಸರಿಸಿದ್ದಾರೆ! ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ವಿಶೇಷ ಜಾಹೀರಾತಿನೊಂದಿಗೆ ಕ್ರೆಡ್​ ಬಂದಿದೆ. ಜಾಹೀರಾತಿನಲ್ಲಿ ಕಾಣಿಸುವಂತೆ, ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿ, ಪಕ್ಕದಲ್ಲಿ ನಿಂತಿರುವ ಕಾರಿನ ಕನ್ನಡಿ ಒಡೆದು ಹಾಕುತ್ತಾರೆ. ಕೊನೆಯಲ್ಲಿ ನಾನು ಇಂದಿರಾ ನಗರದ ಗೂಂಡಾ ಎಂದು ಉದ್ಘರಿಸಿದ್ದಾರೆ.

ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು. ಇದಕ್ಕೆ ದೀಪಿಕಾ ಪಡುಕೋಣೆ ಕೂಡ ಹೊರತಾಗಿಲ್ಲ. ಚಿಕ್ಕ ವಯಸ್ಸಿನ ಫೋಟೋ ಒಂದನ್ನು ಪೋಸ್ಟ್ ಮಾಡಿರುವ ದೀಪಿಕಾ, ಇಂದಿರಾ ನಗರದ ಗೂಂಡಾ ನಾನು ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid: ರಾಹುಲ್​ ದ್ರಾವಿಡ್​ಗೆ ಚಿತ್ರರಂಗದಿಂದ ಬಂತು ಬೇಡಿಕೆ! ಒಂದೇ ದಿನದಲ್ಲಿ ಇದೆಂಥಾ ಮ್ಯಾಜಿಕ್​

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ