AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪ್ರಾಣ ಬಿಡುವುದಕ್ಕೂ ಮುನ್ನ ವಿಡಿಯೋ ಮೂಲಕ ದಾರುಣ ಸ್ಥಿತಿ ವಿವರಿಸಿದ್ದ ನಟ ರಾಹುಲ್​

Rahul Vohra: ರಾಹುಲ್​ ನಿಧನರಾದ ಮರುದಿನವೇ ಅವರ ಪತ್ನಿ ಜ್ಯೋತಿ ತಿವಾರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಆಕ್ಸಿಜನ್​ ಇಲ್ಲದೇ ಆಸ್ಪತ್ರೆಯ ಬೆಡ್​ನಲ್ಲಿ ಮಲಗಿಕೊಂಡು ಕರುಣಾಜನಕ ಸ್ಥಿತಿಯನ್ನು ರಾಹುಲ್​ ವಿವರಿಸುತ್ತಿರುವ ದೃಶ್ಯ ಆ ವಿಡಿಯೋದಲ್ಲಿದೆ.

ಕೊರೊನಾದಿಂದ ಪ್ರಾಣ ಬಿಡುವುದಕ್ಕೂ ಮುನ್ನ ವಿಡಿಯೋ ಮೂಲಕ ದಾರುಣ ಸ್ಥಿತಿ ವಿವರಿಸಿದ್ದ ನಟ ರಾಹುಲ್​
ರಾಹುಲ್ ವೋಹ್ರಾ
ಮದನ್​ ಕುಮಾರ್​
|

Updated on: May 11, 2021 | 1:16 PM

Share

ಕೊರೊನಾ ವೈರಸ್ ಸೋಂಕು ತಗುಲಿದವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ಅನೇಕರು ಸಾವಿಗೆ ಈಡಾಗುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಕೂಡ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ (ಮೇ 9) ಜನಪ್ರಿಯ ನಟ ರಾಹುಲ್​ ವೋಹ್ರಾ ನಿಧನರಾದ ಕಹಿ ಸುದ್ದಿ ಕೇಳಿಬಂದಿತ್ತು. ದೆಹಲಿಯ ದೆಹಲಿಯ ರಾಜೀವ್​ ಗಾಂಧಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದರು. ಅವರು ಸಾಯುವುದಕ್ಕೂ ಮುನ್ನ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಈಗ ವೈರಲ್​ ಆಗಿದೆ.

ರಾಹುಲ್​ ನಿಧನರಾದ ಮರುದಿನವೇ ಅವರ ಪತ್ನಿ ಜ್ಯೋತಿ ತಿವಾರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಆಕ್ಸಿಜನ್​ ಇಲ್ಲದೇ ಆಸ್ಪತ್ರೆಯ ಬೆಡ್​ನಲ್ಲಿ ಮಲಗಿಕೊಂಡು ಕರುಣಾಜನಕ ಸ್ಥಿತಿಯನ್ನು ರಾಹುಲ್​ ವಿವರಿಸುತ್ತಿರುವ ದೃಶ್ಯ ಆ ವಿಡಿಯೋದಲ್ಲಿದೆ. ‘ರಾಹುಲ್​ ನಿಧನರಾದರು ಎಂಬುದು ಎಲ್ಲರಿಗೂ ಗೊತ್ತು. ಆದರೆ ಹೇಗೆ ಸತ್ತರು ಎಂಬುದು ಯಾರಿಗೂ ಗೊತ್ತಿಲ್ಲ. ಇದು ರಾಜೀವ್​ ಗಾಂಧಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ. ಇಲ್ಲಿ ರೋಗಿಗಳನ್ನು ಈ ರೀತಿ ನೋಡಿಕೊಳ್ಳಲಾಗುತ್ತದೆ’ ಎಂಬ ಕ್ಯಾಪ್ಷನ್ ಜೊತೆ ಜ್ಯೋತಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ನಿಧನರಾಗುವುದಕ್ಕೂ ಮುನ್ನ ರಾಹುಲ್​ ಅವರು ಸಹಾಯಕ್ಕಾಗಿ ​ಅಂಗಲಾಚಿದ್ದರು. ‘ಇಂದು ಆಕ್ಸಿಜನ್​ ಮಾಸ್ಕ್​ ತುಂಬ ಅವಶ್ಯಕವಾಗಿದೆ. ನನಗೆ ಇದನ್ನು ಕೊಟ್ಟಿದ್ದಾರೆ. ಆದರೆ ಇದರಿಂದ ಆಕ್ಸಿಜನ್​ ಕಿಂಚಿತ್ತೂ ಬರುತ್ತಿಲ್ಲ. ಸಹಾಯಕ್ಕಾಗಿ ಎಷ್ಟೇ ಬಾರಿ ಕರೆದರೂ ಯಾರೂ ಬರುತ್ತಿಲ್ಲ. ಒಂದು ನಿಮಿಷ ಎಂದು ಹೇಳಿ ಹೋದವರು 2 ಗಂಟೆ ಆದಮೇಲೆ ಬರುತ್ತಾರೆ’ ಎಂದು ಈ ವಿಡಿಯೋ ಮೂಲಕ ರಾಹುಲ್​ ನೋವು ತೋಡಿಕೊಂಡಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

View this post on Instagram

A post shared by Jyoti Tiwari (@ijyotitiwari)

ಆಸ್ಪತ್ರೆಯಲ್ಲಿ ಇದ್ದಾಗಲೇ ಅವರು ಸಹಾಯಕ್ಕಾಗಿ ಫೇಸ್​ಬುಕ್​ನಲ್ಲಿ ಅಂಗಲಾಜಿದ್ದರು. ‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ತಾವಿರುವ ಆಸ್ಪತ್ರೆಯ ಹೆಸರು, ತಮ್ಮ ವಯಸ್ಸು, ಬೆಡ್ ಸಂಖ್ಯೆ ಮುಂತಾದ ವಿವರಗಳನ್ನು ಈ ಪೋಸ್ಟ್​ನಲ್ಲಿ ಬರೆದು, ದಯವಿಟ್ಟು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್​ ವೋಹ್ರಾ ಟ್ಯಾಗ್​ ಮಾಡಿದ್ದರು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ.

ಇದನ್ನೂ ಓದಿ:

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ