AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪ್ರಾಣ ಬಿಡುವುದಕ್ಕೂ ಮುನ್ನ ವಿಡಿಯೋ ಮೂಲಕ ದಾರುಣ ಸ್ಥಿತಿ ವಿವರಿಸಿದ್ದ ನಟ ರಾಹುಲ್​

Rahul Vohra: ರಾಹುಲ್​ ನಿಧನರಾದ ಮರುದಿನವೇ ಅವರ ಪತ್ನಿ ಜ್ಯೋತಿ ತಿವಾರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಆಕ್ಸಿಜನ್​ ಇಲ್ಲದೇ ಆಸ್ಪತ್ರೆಯ ಬೆಡ್​ನಲ್ಲಿ ಮಲಗಿಕೊಂಡು ಕರುಣಾಜನಕ ಸ್ಥಿತಿಯನ್ನು ರಾಹುಲ್​ ವಿವರಿಸುತ್ತಿರುವ ದೃಶ್ಯ ಆ ವಿಡಿಯೋದಲ್ಲಿದೆ.

ಕೊರೊನಾದಿಂದ ಪ್ರಾಣ ಬಿಡುವುದಕ್ಕೂ ಮುನ್ನ ವಿಡಿಯೋ ಮೂಲಕ ದಾರುಣ ಸ್ಥಿತಿ ವಿವರಿಸಿದ್ದ ನಟ ರಾಹುಲ್​
ರಾಹುಲ್ ವೋಹ್ರಾ
ಮದನ್​ ಕುಮಾರ್​
|

Updated on: May 11, 2021 | 1:16 PM

Share

ಕೊರೊನಾ ವೈರಸ್ ಸೋಂಕು ತಗುಲಿದವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ಅನೇಕರು ಸಾವಿಗೆ ಈಡಾಗುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಕೂಡ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ (ಮೇ 9) ಜನಪ್ರಿಯ ನಟ ರಾಹುಲ್​ ವೋಹ್ರಾ ನಿಧನರಾದ ಕಹಿ ಸುದ್ದಿ ಕೇಳಿಬಂದಿತ್ತು. ದೆಹಲಿಯ ದೆಹಲಿಯ ರಾಜೀವ್​ ಗಾಂಧಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದರು. ಅವರು ಸಾಯುವುದಕ್ಕೂ ಮುನ್ನ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಈಗ ವೈರಲ್​ ಆಗಿದೆ.

ರಾಹುಲ್​ ನಿಧನರಾದ ಮರುದಿನವೇ ಅವರ ಪತ್ನಿ ಜ್ಯೋತಿ ತಿವಾರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಆಕ್ಸಿಜನ್​ ಇಲ್ಲದೇ ಆಸ್ಪತ್ರೆಯ ಬೆಡ್​ನಲ್ಲಿ ಮಲಗಿಕೊಂಡು ಕರುಣಾಜನಕ ಸ್ಥಿತಿಯನ್ನು ರಾಹುಲ್​ ವಿವರಿಸುತ್ತಿರುವ ದೃಶ್ಯ ಆ ವಿಡಿಯೋದಲ್ಲಿದೆ. ‘ರಾಹುಲ್​ ನಿಧನರಾದರು ಎಂಬುದು ಎಲ್ಲರಿಗೂ ಗೊತ್ತು. ಆದರೆ ಹೇಗೆ ಸತ್ತರು ಎಂಬುದು ಯಾರಿಗೂ ಗೊತ್ತಿಲ್ಲ. ಇದು ರಾಜೀವ್​ ಗಾಂಧಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ. ಇಲ್ಲಿ ರೋಗಿಗಳನ್ನು ಈ ರೀತಿ ನೋಡಿಕೊಳ್ಳಲಾಗುತ್ತದೆ’ ಎಂಬ ಕ್ಯಾಪ್ಷನ್ ಜೊತೆ ಜ್ಯೋತಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ನಿಧನರಾಗುವುದಕ್ಕೂ ಮುನ್ನ ರಾಹುಲ್​ ಅವರು ಸಹಾಯಕ್ಕಾಗಿ ​ಅಂಗಲಾಚಿದ್ದರು. ‘ಇಂದು ಆಕ್ಸಿಜನ್​ ಮಾಸ್ಕ್​ ತುಂಬ ಅವಶ್ಯಕವಾಗಿದೆ. ನನಗೆ ಇದನ್ನು ಕೊಟ್ಟಿದ್ದಾರೆ. ಆದರೆ ಇದರಿಂದ ಆಕ್ಸಿಜನ್​ ಕಿಂಚಿತ್ತೂ ಬರುತ್ತಿಲ್ಲ. ಸಹಾಯಕ್ಕಾಗಿ ಎಷ್ಟೇ ಬಾರಿ ಕರೆದರೂ ಯಾರೂ ಬರುತ್ತಿಲ್ಲ. ಒಂದು ನಿಮಿಷ ಎಂದು ಹೇಳಿ ಹೋದವರು 2 ಗಂಟೆ ಆದಮೇಲೆ ಬರುತ್ತಾರೆ’ ಎಂದು ಈ ವಿಡಿಯೋ ಮೂಲಕ ರಾಹುಲ್​ ನೋವು ತೋಡಿಕೊಂಡಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

View this post on Instagram

A post shared by Jyoti Tiwari (@ijyotitiwari)

ಆಸ್ಪತ್ರೆಯಲ್ಲಿ ಇದ್ದಾಗಲೇ ಅವರು ಸಹಾಯಕ್ಕಾಗಿ ಫೇಸ್​ಬುಕ್​ನಲ್ಲಿ ಅಂಗಲಾಜಿದ್ದರು. ‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ತಾವಿರುವ ಆಸ್ಪತ್ರೆಯ ಹೆಸರು, ತಮ್ಮ ವಯಸ್ಸು, ಬೆಡ್ ಸಂಖ್ಯೆ ಮುಂತಾದ ವಿವರಗಳನ್ನು ಈ ಪೋಸ್ಟ್​ನಲ್ಲಿ ಬರೆದು, ದಯವಿಟ್ಟು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್​ ವೋಹ್ರಾ ಟ್ಯಾಗ್​ ಮಾಡಿದ್ದರು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ.

ಇದನ್ನೂ ಓದಿ:

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು