AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನಲ್ಲಿ ರಾಜ್ ಶೆಟ್ಟಿ ಪವರ್​ಫುಲ್ ಮ್ಯಾನ್; ಗಮನ ಸೆಳೆದ ಮಮ್ಮೂಟಿ ನಟನೆಯ ‘ಟರ್ಬೋ’ ಟ್ರೇಲರ್

133 ಸೆಕೆಂಡ್​ಗಳ ಟ್ರೇಲರ್​ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮೂಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಆತ ಕೇವಲ ಜೋಸ್ ಅಲ್ಲ ಟರ್ಬೋ ಜೋಸ್. ಟ್ರೇಲರ್​ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜೊತೆಗೆ ಕಾಮಿಡಿ ಕೂಡ ಇದೆ. ಟ್ರೇಲರ್​ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ.

ಮಲಯಾಳಂನಲ್ಲಿ ರಾಜ್ ಶೆಟ್ಟಿ ಪವರ್​ಫುಲ್ ಮ್ಯಾನ್; ಗಮನ ಸೆಳೆದ ಮಮ್ಮೂಟಿ ನಟನೆಯ ‘ಟರ್ಬೋ’ ಟ್ರೇಲರ್
ಮಮ್ಮೂಟಿ-ರಾಜ್
ರಾಜೇಶ್ ದುಗ್ಗುಮನೆ
|

Updated on: May 13, 2024 | 9:11 AM

Share

ರಾಜ್ ಬಿ. ಶೆಟ್ಟಿ (Raj B Shetty) ಅವರು ಕನ್ನಡದಲ್ಲಿ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಈಗ ಪರಭಾಷೆಯಿಂದ ಬೇಡಿಕೆ ಸೃಷ್ಟಿ ಆಗಿದೆ. ರಾಜ್ ಬಿ ಶೆಟ್ಟಿ ಅವರು ಮಮ್ಮೂಟಿ ನಟನೆಯ ‘ಟರ್ಬೋ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ರಾಜ್ ಅವರು ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಟ್ರೇಲರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

133 ಸೆಕೆಂಡ್​ಗಳ ಟ್ರೇಲರ್​ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮೂಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಆತ ಕೇವಲ ಜೋಸ್ ಅಲ್ಲ ಟರ್ಬೋ ಜೋಸ್. ಟ್ರೇಲರ್​ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜೊತೆಗೆ ಕಾಮಿಡಿ ಕೂಡ ಇದೆ. ಟ್ರೇಲರ್​ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ. ರಾಜ್​ ಬಿ ಶೆಟ್ಟಿ ಓರ್ವ ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಎಂಟ್ರಿ ಸಖತ್ ಆಗಿದೆ. ರಾಜ್​ ಹಾಗೂ ಮಮ್ಮೂಟಿ ನಡುವಿನ ಮುಖಾಮುಖಿ ಗಮನ ಸೆಳೆದಿದೆ. ಮಲಯಾಳಂನಲ್ಲೂ ಅವರೇ ಡಬ್ ಮಾಡಿದ್ದಾರೆ ಅನ್ನೋದು ವಿಶೇಷ.

‘ಟರ್ಬೋ’ ಚಿತ್ರವನ್ನು ‘ಪುಲಿಮುರುಗನ್’ ಖ್ಯಾತಿಯ ವಿಶಾಕ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ‘ಅಬ್ರಾಮ್ ಓಜ್ಲರ್’ ನಿರ್ದೇಶಕ ಮುಥುನ್ ಮ್ಯಾನ್ಯುಯೆಲ್ ಅವರು ಕಥೆ ಬರೆದಿದ್ದಾರೆ. ಈ ಚಿತ್ರವನ್ನು ಸ್ವತಃ ಮಮ್ಮೂಟಿ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ದುಲ್ಕರ್ ಸಲ್ಮಾನ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ ಜೊತೆ ತೆಲುಗು ನಟ ಸುನಿಲ್​ ಕೂಡ ಇದ್ದಾರೆ. ಇಬ್ಬರಿಗೂ ಇದು ಮಲಯಾಳಂನಲ್ಲಿ ಮೊದಲ ಸಿನಿಮಾ. ಅಂಜನಾಜಯ ಪ್ರಕಾಶ್, ಕಬಿರ್ ದುಹಾನ್ ಸಿಂಗ್, ಸಿದ್ದಿಕಿ ಮೊದಲಾದವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ