AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನಲ್ಲಿ ರಾಜ್ ಶೆಟ್ಟಿ ಪವರ್​ಫುಲ್ ಮ್ಯಾನ್; ಗಮನ ಸೆಳೆದ ಮಮ್ಮೂಟಿ ನಟನೆಯ ‘ಟರ್ಬೋ’ ಟ್ರೇಲರ್

133 ಸೆಕೆಂಡ್​ಗಳ ಟ್ರೇಲರ್​ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮೂಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಆತ ಕೇವಲ ಜೋಸ್ ಅಲ್ಲ ಟರ್ಬೋ ಜೋಸ್. ಟ್ರೇಲರ್​ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜೊತೆಗೆ ಕಾಮಿಡಿ ಕೂಡ ಇದೆ. ಟ್ರೇಲರ್​ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ.

ಮಲಯಾಳಂನಲ್ಲಿ ರಾಜ್ ಶೆಟ್ಟಿ ಪವರ್​ಫುಲ್ ಮ್ಯಾನ್; ಗಮನ ಸೆಳೆದ ಮಮ್ಮೂಟಿ ನಟನೆಯ ‘ಟರ್ಬೋ’ ಟ್ರೇಲರ್
ಮಮ್ಮೂಟಿ-ರಾಜ್
ರಾಜೇಶ್ ದುಗ್ಗುಮನೆ
|

Updated on: May 13, 2024 | 9:11 AM

Share

ರಾಜ್ ಬಿ. ಶೆಟ್ಟಿ (Raj B Shetty) ಅವರು ಕನ್ನಡದಲ್ಲಿ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಈಗ ಪರಭಾಷೆಯಿಂದ ಬೇಡಿಕೆ ಸೃಷ್ಟಿ ಆಗಿದೆ. ರಾಜ್ ಬಿ ಶೆಟ್ಟಿ ಅವರು ಮಮ್ಮೂಟಿ ನಟನೆಯ ‘ಟರ್ಬೋ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ರಾಜ್ ಅವರು ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಟ್ರೇಲರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

133 ಸೆಕೆಂಡ್​ಗಳ ಟ್ರೇಲರ್​ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮೂಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಆತ ಕೇವಲ ಜೋಸ್ ಅಲ್ಲ ಟರ್ಬೋ ಜೋಸ್. ಟ್ರೇಲರ್​ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜೊತೆಗೆ ಕಾಮಿಡಿ ಕೂಡ ಇದೆ. ಟ್ರೇಲರ್​ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ. ರಾಜ್​ ಬಿ ಶೆಟ್ಟಿ ಓರ್ವ ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಎಂಟ್ರಿ ಸಖತ್ ಆಗಿದೆ. ರಾಜ್​ ಹಾಗೂ ಮಮ್ಮೂಟಿ ನಡುವಿನ ಮುಖಾಮುಖಿ ಗಮನ ಸೆಳೆದಿದೆ. ಮಲಯಾಳಂನಲ್ಲೂ ಅವರೇ ಡಬ್ ಮಾಡಿದ್ದಾರೆ ಅನ್ನೋದು ವಿಶೇಷ.

‘ಟರ್ಬೋ’ ಚಿತ್ರವನ್ನು ‘ಪುಲಿಮುರುಗನ್’ ಖ್ಯಾತಿಯ ವಿಶಾಕ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ‘ಅಬ್ರಾಮ್ ಓಜ್ಲರ್’ ನಿರ್ದೇಶಕ ಮುಥುನ್ ಮ್ಯಾನ್ಯುಯೆಲ್ ಅವರು ಕಥೆ ಬರೆದಿದ್ದಾರೆ. ಈ ಚಿತ್ರವನ್ನು ಸ್ವತಃ ಮಮ್ಮೂಟಿ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ದುಲ್ಕರ್ ಸಲ್ಮಾನ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ ಜೊತೆ ತೆಲುಗು ನಟ ಸುನಿಲ್​ ಕೂಡ ಇದ್ದಾರೆ. ಇಬ್ಬರಿಗೂ ಇದು ಮಲಯಾಳಂನಲ್ಲಿ ಮೊದಲ ಸಿನಿಮಾ. ಅಂಜನಾಜಯ ಪ್ರಕಾಶ್, ಕಬಿರ್ ದುಹಾನ್ ಸಿಂಗ್, ಸಿದ್ದಿಕಿ ಮೊದಲಾದವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ