AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?

ರಾಜ್ ಬಿ ಶೆಟ್ಟಿ ಅವರ 'ಸು ಫ್ರಮ್ ಸೋ' ಚಿತ್ರ ಅಪಾರ ಯಶಸ್ಸು ಕಂಡಿದೆ. ಈ ಯಶಸ್ಸಿನ ನಂತರ, ಅವರು ಸೋಷಿಯಲ್ ಮೀಡಿಯಾ ಬಳಕೆಯಿಂದ ವಿರಾಮ ತೆಗೆದುಕೊಂಡಿದ್ದಾರೆ.ಅವರ ತಂಡ ಸೋಷಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಿಸಲಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
ರಾಜ್
ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:27 PM

Share

ರಾಜ್ ಬಿ. ಶೆಟ್ಟಿ (Raj B Shetty) ಅವರು ‘ಸು ಫ್ರಮ್ ಸೋ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಅವರನ್ನು ಪರಭಾಷೆಗೂ ಕರೆದುಕೊಂಡು ಹೋಯಿತು. ಅಲ್ಲಿಯೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಹೀಗಿರುವಾಗಲೇ ರಾಜ್ ಅವರು ಸೋಶಿಯಲ್ ಮೀಡಿಯಾ​ಗೆ ಗುಡ್ ಬೈ ಹೇಳಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ಕೂಡ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜ್ ಬಿ ಶೆಟ್ಟಿ ನಿರ್ಮಿಸಿ, ನಟಿಸಿರೋ ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆಯಿತು. ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಸಿನಿಮಾ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಪರಭಾಷೆಯ ಮಂದಿಯ ಮೆಚ್ಚುಗೆಯನ್ನೂ ಪಡೆದಿದೆ. ತಮಿಳು ಹಾಗೂ ಹಿಂದಿ ಭಾಷೆಗೆ ರಿಮೇಕ್ ಹಕ್ಕು ಮಾರಾಟ ಆಗಿದೆ.

ಇದನ್ನೂ ಓದಿ
Image
ಧೂಳೆಬ್ಬಿಸಿದ ರಾಜ್ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್
Image
ಅನುಶ್ರೀ ಮದುವೆಯಲ್ಲಿ ‘ಬಾವ ಬಂದರು’ ಎಂದು ರೋಷನ್ ಕಾಲೆಳೆದ ರಾಜ್ ಬಿ. ಶೆಟ್ಟಿ
Image
ಅಪರೂಪದಲ್ಲೇ ಅಪರೂಪದ ಫೋಟೋ ಹಂಚಿಕೊಂಡ ರಾಜ್ ಬಿ. ಶೆಟ್ಟಿ; ಇದರ ವಿಶೇಷತೆ ಏನು?
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಈಗ ರಾಜ್ ಅವರು ತಮ್ಮ ಮುಂದಿನ ಸಿನಿಮಾ ಕೆಲಸಗಳ ಮೇಲೆ ಗಮನ ಹರಿಸುವವರಿದ್ದಾರೆ. ಕೆಲಸದ ಮೇಲೆ ಗಮನ ಹರಿಸಬೇಕಿರುವ ಕಾರಣದಿಂದ ಅವರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಿಲ್ಲ. ಹಾಗಂತ ಅದರಲ್ಲಿ ಯಾವುದೇ ಪೋಸ್ಟ್​ಗಳು ಬರೋದಿಲ್ಲ ಎಂದರ್ಥವಲ್ಲ. ರಾಜ್ ಅವರ ತಂಡದವರು ಸೋಶಿಯಲ್ ಮೀಡಿಯಾ​ನ ಹ್ಯಾಂಡಲ್ ಮಾಡಲಿದ್ದಾರೆ. ಮತ್ತೆ ಸಿನಿಮಾ ಪ್ರಚಾರದ ವೇಳೆ ಇದನ್ನು ಅವರು ಬಳಕೆ ಮಾಡಲಿದ್ದಾರೆ.

ರಾಜ್ ಬಿ ಶೆಟ್ಟಿ ಪೋಸ್ಟ್

View this post on Instagram

A post shared by Raj B Shetty (@rajbshetty)

ರಾಜ್ ಅವರು ಒಂದು ಥ್ರಿಲ್ಲರ್ ಕಥೆಯನ್ನು ಬರೆಯುತ್ತಿರುವುದಾಗಿ ಈ ಮೊದಲು ಹೇಳಿದ್ದರು. ಅದೇ ಚಿತ್ರದ ಮೇಲೆ ಅವರು ಗಮನ ಹರಿಸುವ ಸಾಧ್ಯತೆ ಇದೆ. ಮತ್ತೆ ಅವರಿಂದ ಹಾಸ್ಯದ ಕಥೆ ನಿರೀಕ್ಷೆ ಮಾಡಬಾರದು ಎಂದು ಈ ಮೊದಲೇ ಹೇಳಿದ್ದಾರೆ. ಅವರು ನಾನಾ ರೀತಿಯ ಸಿನಿಮಾಗಳನ್ನು ನೀಡುವ ಉದ್ದೇಶ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಧೂಳೆಬ್ಬಿಸಿದ ರಾಜ್ ಬಿ. ಶೆಟ್ಟಿ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್

ರಾಜ್ ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡುತ್ತಿರುವ ಮಲಯಾಳಂನ ‘ಲೋಕಃ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಈಗಾಗಲೇ 2 ದಿನಕ್ಕೆ 6.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Sat, 30 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ