AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಬಾಲಿವುಡ್ ಸಿನಿಮಾದ ಟ್ರೈಲರ್ ಬಿಡುಗಡೆ

Raj B Shetty Hindi movie: ‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ ಬಿ ಶೆಟ್ಟಿ ಅವರು ನಟನಾಗಿ ಕನ್ನಡ ಮಾತ್ರವಲ್ಲದೇ ಪರ ಭಾಷೆಗಳಲ್ಲಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಮಲಯಾಳಂನ ಕೆಲ ಸಿನಿಮಾಗಳಲ್ಲಿ ನಟಿಸಿರುವ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಹಿಂದಿಗೆ ಕಾಲಿಟ್ಟಿದ್ದಾರೆ.

ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಬಾಲಿವುಡ್ ಸಿನಿಮಾದ ಟ್ರೈಲರ್ ಬಿಡುಗಡೆ
Boby Deol Raj B Shetty
ಮಂಜುನಾಥ ಸಿ.
|

Updated on:May 09, 2026 | 10:52 PM

Share

ರಾಜ್ ಬಿ ಶೆಟ್ಟಿ (Raj B Shetty) ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕರು. ನಿರ್ಮಾಪಕರಾಗಿಯೂ ದೊಡ್ಡ ಯಶಸ್ಸನ್ನು ‘ಸು ಫ್ರಂ ಸೋ’ ಸಿನಿಮಾದ ಮೂಲಕ ಗಳಿಸಿದ್ದಾರೆ. ‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ ಬಿ ಶೆಟ್ಟಿ ಅವರು ನಟನಾಗಿ ಕನ್ನಡ ಮಾತ್ರವಲ್ಲದೇ ಪರ ಭಾಷೆಗಳಲ್ಲಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಮಲಯಾಳಂನ ಕೆಲ ಸಿನಿಮಾಗಳಲ್ಲಿ ನಟಿಸಿರುವ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಹಿಂದಿಗೆ ಕಾಲಿಟ್ಟಿದ್ದಾರೆ.

ರಾಜ್ ಬಿ ಶೆಟ್ಟಿ ಅವರು ಹಿಂದಿಯಲ್ಲಿ ನಟಿಸಿರುವ ಮೊದಲ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಉತ್ತರ ಭಾರತದ ಸಿನಿಮಾ ಪ್ರೇಮಿ ಇನ್​ಫ್ಲ್ಯುಯೆನ್ಸರ್​​ಗಳು ರಾಜ್ ಬಿ ಶೆಟ್ಟಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ ಬಿ ಶೆಟ್ಟಿ, ‘ಬಂದರ್’ ಹೆಸರಿನ ಹಿಂದಿ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ನಲ್ಲಿ ರಾಜ್ ಬಿ ಶೆಟ್ಟಿ ಸಹ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

‘ಬಂದರ್’ ಭಿನ್ನ ಕತೆಯ ಸಿನಿಮಾ ಎಂಬುದು ಸಿನಿಮಾದ ಟ್ರೈಲರ್​​ನಿಂದಲೇ ತಿಳಿದು ಬರುತ್ತಿದೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಖ್ಯಾತ ಬಾಲಿವುಡ್ ನಟ ಬಾಬಿ ಡಿಯೋಲ್ ನಟಿಸಿದ್ದಾರೆ. ಟ್ರೈಲರ್​, ಕತೆಯ ಸುಳಿವುನ್ನು ಬಿಟ್ಟುಕೊಡುತ್ತಿಲ್ಲವಾದರೂ ಕತೆಯಂತೂ ಬಹಳ ಭಿನ್ನವಾಗಿರುವುದು ತಿಳಿದು ಬರುತ್ತಿದೆ. ಸೆಲೆಬ್ರಿಟಿ ಒಬ್ಬ ಡೇಟಿಂಗ್ ಆಪ್​​ನಿಂದಾಗಿ ಜೈಲು ಸೇರುವ ಕತೆಯನ್ನು ಸಿನಿಮಾ ಒಳಗೊಂಡಿದೆ.

ರಾಜ್ ಬಿ ಶೆಟ್ಟಿ ಅವರ ‘ಗರುಡ ಗಮನ’ ದಲ್ಲಿದ್ದ ರೀತಿಯ ಪಾತ್ರದಲ್ಲಿಯೇ ಕಾಣಿಸಿಕೊಂಡಿರುವಂತಿದೆ. ಶೆಟ್ಟರು ಜೈಲಿನಲ್ಲಿ ಸಹ ಖೈದಿಯೊಬ್ಬನ ಜೊತೆಗೆ ಖುಷಿಯಿಂದ ಡ್ಯಾನ್ಸ್ ಮಾಡುತ್ತಿರುವ ಸಣ್ಣ ದೃಶ್ಯದ ತುಣುಕು ಟ್ರೈಲರ್​​ನಲ್ಲಿದೆ. ವಿಲನ್ ಗುಂಪಿನ ಸದಸ್ಯರಾಗಿ ರಾಜ್ ಬಿ ಶೆಟ್ಟಿ ನಟಿಸಿದಂತಿದೆ.

ಸಿನಿಮಾವನ್ನು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ. ಸಹ ನಿರ್ದೇಶಕ ಸಾಕ್ಷಿ ಮೆಹ್ತಾ ಅವರದ್ದು. ಕತೆ ಬರೆದಿರುವುದು ಸುದೀಪ್ ಶರ್ಮಾ, ಅಭಿಷೇಕ್ ಬ್ಯಾನರ್ಜಿ. ಸಿನಿಮಾನಲ್ಲಿ ಬಾಬಿ ಡಿಯೋಲ್, ರಾಜ್ ಬಿ ಶೆಟ್ಟಿ, ‘ದಂಗಲ್’ ನಟಿ ಸಾನ್ಯಾ ಮಲ್ಹೋತ್ರಾ, ಇಂದ್ರಜಿತ್ ಸುಕುಮಾರನ್ ಇನ್ನೂ ಹಲವು ಪ್ರತಿಭಾವಂತ ನಟರು ನಟಿಸಿದ್ದಾರೆ. ಸಿನಿಮಾ ಜೂನ್ 5 ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sat, 9 May 26

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ