AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Raj Kaushal Funeral: ಪತಿ ರಾಜ್​ ಕೌಶಲ್​ ಅವರನ್ನು ಕಳೆದುಕೊಂಡ ನಟಿ ಮಂದಿರಾ ಬೇಡಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
TV9 Web
| Edited By: |

Updated on: Jul 01, 2021 | 9:50 AM

Share

ಬಾಲಿವುಡ್​ನ ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್​ ಅವರು ಬುಧವಾರ (ಜೂ.30) ನಿಧನರಾದರು. ಕೇವಲ 49ನೇ ವಯಸ್ಸಿಗೆ ಅವರು ಹೃದಯಾಘಾತದಿಂದ ಅಸುನೀಗಿದ ಸುದ್ದಿ ಕೇಳಿ ಇಡೀ ಚಿತ್ರರಂಗಕ್ಕೆ ಆಘಾತ ಆಗಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ. ಸಂಪ್ರದಾಯಕ್ಕೆ ಸೆಡ್ಡು ಹೊಡೆದ ಮಂದಿರಾ ಬೇಡಿ ಅವರು ಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸಾಮಾನ್ಯವಾಗಿ ಮಹಿಳೆಯರು ಚಟ್ಟವನ್ನು ಹೊರುವುದಿಲ್ಲ. ಕೆಲವರ ಸಂಪ್ರದಾಯದ ಪ್ರಕಾರ ಸ್ತ್ರೀಯರು ಸ್ಮಶಾನಕ್ಕೂ ಬರುವಂತಿಲ್ಲ. ಈ ಎಲ್ಲ ಸಂಪ್ರದಾಯಗಳನ್ನು ಮಂದಿರಾ ಬೇಡಿ ಮುರಿಯುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದಾರೆ. ಅಂತ್ಯ ಸಂಸ್ಕಾರದ ಸ್ಥಳಕ್ಕೆ ರಾಜ್​ ಕೌಶಲ್​ ಅವರ ಶವವನ್ನು ಸಾಗಿಸುವಾಗ ಮಂದಿರಾ ಕೂಡ ಪುರುಷರ ಜೊತೆ ಸೇರಿಕೊಂಡು ಪತಿಯ ಶವವನ್ನು ಹೊತ್ತು ಸಾಗಿದ್ದಾರೆ. ಅಲ್ಲದೆ, ತಾವೇ ನಿಂತು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ್ದಾರೆ. ಅವರ ಈ ದಿಟ್ಟತನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪತಿಯ ಅಗಲಿಕೆಯಿಂದ ತೀವ್ರ ದುಃಖ ಆವರಿಸಿದ್ದರೂ ಕೂಡ ಮಂದಿರಾ ಅವರು ಸ್ಟ್ರಾಂಗ್​ ಆಗಿದ್ದಂತೆ ಕಾಣಿಸಿದರು. ಅವರಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಅಕಾಲಿಕ ಮರಣಕ್ಕೆ ತುತ್ತಾದ ರಾಜ್​ ಕೌಶಲ್​ಗೆ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದ ರಾಜ್​ ಕೌಶಲ್​ ಜೊತೆ 1999ರಲ್ಲಿ ಮಂದಿರಾ ವಿವಾಹ ಆಗಿದ್ದರು. ಈ ದಂಪತಿಗೆ 2011ರಲ್ಲಿ ಗಂಡು ಮಗು ಜನಿಸಿತ್ತು. ಬಳಿಕ ಹೆಣ್ಣುಮಗುವೊಂದನ್ನು ದತ್ತು ಪಡೆದುಕೊಂಡಿದ್ದರು.

ನಿಧನರಾಗುವುದಕ್ಕೂ ಒಂದು ದಿನ ಮುಂಚೆ ನಟಿ ಮೌನಿ ರಾಯ್​ ಸೇರಿದಂತೆ ಚಿತ್ರರಂಗದ ಕೆಲವು ಸ್ನೇಹಿತರನ್ನು ರಾಜ್​ ಕೌಶಲ್​ ಭೇಟಿ ಮಾಡಿದ್ದರು. ನಿರ್ದೇಶಕ ಓನಿರ್​, ನಟಿಯರಾದ ನೇಹಾ ಧೂಪಿಯಾ, ಟಿಸ್ಕಾ ಚೋಪ್ರಾ, ನಟ ರೋಹಿತ್​ ಬೋಸ್​ ರಾಯ್​ ಸೇರಿದಂತೆ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕೌಶಲ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

Sanchari Vijay Final Rites : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ