AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Raj Kaushal Funeral: ಪತಿ ರಾಜ್​ ಕೌಶಲ್​ ಅವರನ್ನು ಕಳೆದುಕೊಂಡ ನಟಿ ಮಂದಿರಾ ಬೇಡಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
TV9 Web
| Edited By: |

Updated on: Jul 01, 2021 | 9:50 AM

Share

ಬಾಲಿವುಡ್​ನ ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್​ ಅವರು ಬುಧವಾರ (ಜೂ.30) ನಿಧನರಾದರು. ಕೇವಲ 49ನೇ ವಯಸ್ಸಿಗೆ ಅವರು ಹೃದಯಾಘಾತದಿಂದ ಅಸುನೀಗಿದ ಸುದ್ದಿ ಕೇಳಿ ಇಡೀ ಚಿತ್ರರಂಗಕ್ಕೆ ಆಘಾತ ಆಗಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ. ಸಂಪ್ರದಾಯಕ್ಕೆ ಸೆಡ್ಡು ಹೊಡೆದ ಮಂದಿರಾ ಬೇಡಿ ಅವರು ಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸಾಮಾನ್ಯವಾಗಿ ಮಹಿಳೆಯರು ಚಟ್ಟವನ್ನು ಹೊರುವುದಿಲ್ಲ. ಕೆಲವರ ಸಂಪ್ರದಾಯದ ಪ್ರಕಾರ ಸ್ತ್ರೀಯರು ಸ್ಮಶಾನಕ್ಕೂ ಬರುವಂತಿಲ್ಲ. ಈ ಎಲ್ಲ ಸಂಪ್ರದಾಯಗಳನ್ನು ಮಂದಿರಾ ಬೇಡಿ ಮುರಿಯುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದಾರೆ. ಅಂತ್ಯ ಸಂಸ್ಕಾರದ ಸ್ಥಳಕ್ಕೆ ರಾಜ್​ ಕೌಶಲ್​ ಅವರ ಶವವನ್ನು ಸಾಗಿಸುವಾಗ ಮಂದಿರಾ ಕೂಡ ಪುರುಷರ ಜೊತೆ ಸೇರಿಕೊಂಡು ಪತಿಯ ಶವವನ್ನು ಹೊತ್ತು ಸಾಗಿದ್ದಾರೆ. ಅಲ್ಲದೆ, ತಾವೇ ನಿಂತು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ್ದಾರೆ. ಅವರ ಈ ದಿಟ್ಟತನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪತಿಯ ಅಗಲಿಕೆಯಿಂದ ತೀವ್ರ ದುಃಖ ಆವರಿಸಿದ್ದರೂ ಕೂಡ ಮಂದಿರಾ ಅವರು ಸ್ಟ್ರಾಂಗ್​ ಆಗಿದ್ದಂತೆ ಕಾಣಿಸಿದರು. ಅವರಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಅಕಾಲಿಕ ಮರಣಕ್ಕೆ ತುತ್ತಾದ ರಾಜ್​ ಕೌಶಲ್​ಗೆ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದ ರಾಜ್​ ಕೌಶಲ್​ ಜೊತೆ 1999ರಲ್ಲಿ ಮಂದಿರಾ ವಿವಾಹ ಆಗಿದ್ದರು. ಈ ದಂಪತಿಗೆ 2011ರಲ್ಲಿ ಗಂಡು ಮಗು ಜನಿಸಿತ್ತು. ಬಳಿಕ ಹೆಣ್ಣುಮಗುವೊಂದನ್ನು ದತ್ತು ಪಡೆದುಕೊಂಡಿದ್ದರು.

ನಿಧನರಾಗುವುದಕ್ಕೂ ಒಂದು ದಿನ ಮುಂಚೆ ನಟಿ ಮೌನಿ ರಾಯ್​ ಸೇರಿದಂತೆ ಚಿತ್ರರಂಗದ ಕೆಲವು ಸ್ನೇಹಿತರನ್ನು ರಾಜ್​ ಕೌಶಲ್​ ಭೇಟಿ ಮಾಡಿದ್ದರು. ನಿರ್ದೇಶಕ ಓನಿರ್​, ನಟಿಯರಾದ ನೇಹಾ ಧೂಪಿಯಾ, ಟಿಸ್ಕಾ ಚೋಪ್ರಾ, ನಟ ರೋಹಿತ್​ ಬೋಸ್​ ರಾಯ್​ ಸೇರಿದಂತೆ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕೌಶಲ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

Sanchari Vijay Final Rites : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರ

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!