AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ

Raj Kaushal Funeral: ಪತಿ ರಾಜ್​ ಕೌಶಲ್​ ಅವರನ್ನು ಕಳೆದುಕೊಂಡ ನಟಿ ಮಂದಿರಾ ಬೇಡಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ರಾಜ್​ ಕೌಶಲ್​ ಅಂತ್ಯಕ್ರಿಯೆ: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಗಂಡನ ಅಂತ್ಯಸಂಸ್ಕಾರ ಮಾಡಿದ ಮಂದಿರಾ ಬೇಡಿ
TV9 Web
| Edited By: |

Updated on: Jul 01, 2021 | 9:50 AM

Share

ಬಾಲಿವುಡ್​ನ ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್​ ಅವರು ಬುಧವಾರ (ಜೂ.30) ನಿಧನರಾದರು. ಕೇವಲ 49ನೇ ವಯಸ್ಸಿಗೆ ಅವರು ಹೃದಯಾಘಾತದಿಂದ ಅಸುನೀಗಿದ ಸುದ್ದಿ ಕೇಳಿ ಇಡೀ ಚಿತ್ರರಂಗಕ್ಕೆ ಆಘಾತ ಆಗಿದೆ. ಮುಂಬೈನಲ್ಲಿ ರಾಜ್​ ಕೌಶಲ್​ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ. ಸಂಪ್ರದಾಯಕ್ಕೆ ಸೆಡ್ಡು ಹೊಡೆದ ಮಂದಿರಾ ಬೇಡಿ ಅವರು ಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸಾಮಾನ್ಯವಾಗಿ ಮಹಿಳೆಯರು ಚಟ್ಟವನ್ನು ಹೊರುವುದಿಲ್ಲ. ಕೆಲವರ ಸಂಪ್ರದಾಯದ ಪ್ರಕಾರ ಸ್ತ್ರೀಯರು ಸ್ಮಶಾನಕ್ಕೂ ಬರುವಂತಿಲ್ಲ. ಈ ಎಲ್ಲ ಸಂಪ್ರದಾಯಗಳನ್ನು ಮಂದಿರಾ ಬೇಡಿ ಮುರಿಯುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದಾರೆ. ಅಂತ್ಯ ಸಂಸ್ಕಾರದ ಸ್ಥಳಕ್ಕೆ ರಾಜ್​ ಕೌಶಲ್​ ಅವರ ಶವವನ್ನು ಸಾಗಿಸುವಾಗ ಮಂದಿರಾ ಕೂಡ ಪುರುಷರ ಜೊತೆ ಸೇರಿಕೊಂಡು ಪತಿಯ ಶವವನ್ನು ಹೊತ್ತು ಸಾಗಿದ್ದಾರೆ. ಅಲ್ಲದೆ, ತಾವೇ ನಿಂತು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ್ದಾರೆ. ಅವರ ಈ ದಿಟ್ಟತನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪತಿಯ ಅಗಲಿಕೆಯಿಂದ ತೀವ್ರ ದುಃಖ ಆವರಿಸಿದ್ದರೂ ಕೂಡ ಮಂದಿರಾ ಅವರು ಸ್ಟ್ರಾಂಗ್​ ಆಗಿದ್ದಂತೆ ಕಾಣಿಸಿದರು. ಅವರಿಗೆ ಇಡೀ ಬಾಲಿವುಡ್​ ಬಳಗ ಸಮಾಧಾನದ ಮಾತುಗಳನ್ನು ಹೇಳುತ್ತಿದೆ. ಅಕಾಲಿಕ ಮರಣಕ್ಕೆ ತುತ್ತಾದ ರಾಜ್​ ಕೌಶಲ್​ಗೆ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದ ರಾಜ್​ ಕೌಶಲ್​ ಜೊತೆ 1999ರಲ್ಲಿ ಮಂದಿರಾ ವಿವಾಹ ಆಗಿದ್ದರು. ಈ ದಂಪತಿಗೆ 2011ರಲ್ಲಿ ಗಂಡು ಮಗು ಜನಿಸಿತ್ತು. ಬಳಿಕ ಹೆಣ್ಣುಮಗುವೊಂದನ್ನು ದತ್ತು ಪಡೆದುಕೊಂಡಿದ್ದರು.

ನಿಧನರಾಗುವುದಕ್ಕೂ ಒಂದು ದಿನ ಮುಂಚೆ ನಟಿ ಮೌನಿ ರಾಯ್​ ಸೇರಿದಂತೆ ಚಿತ್ರರಂಗದ ಕೆಲವು ಸ್ನೇಹಿತರನ್ನು ರಾಜ್​ ಕೌಶಲ್​ ಭೇಟಿ ಮಾಡಿದ್ದರು. ನಿರ್ದೇಶಕ ಓನಿರ್​, ನಟಿಯರಾದ ನೇಹಾ ಧೂಪಿಯಾ, ಟಿಸ್ಕಾ ಚೋಪ್ರಾ, ನಟ ರೋಹಿತ್​ ಬೋಸ್​ ರಾಯ್​ ಸೇರಿದಂತೆ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕೌಶಲ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಇದನ್ನೂ ಓದಿ:

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್​ ನಿಧನ; 49 ವರ್ಷಕ್ಕೇ ಬದುಕು ಮುಗಿಸಿದ ಬಾಲಿವುಡ್ ಸಿನಿಮಾ ನಿರ್ಮಾಪಕ

Sanchari Vijay Final Rites : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?