AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ.

ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​
ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​
TV9 Web
| Edited By: |

Updated on:Jul 20, 2021 | 5:16 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ. ಈಗ ಜುಲೈ 23ವರೆಗೆ ಪೊಲೀಸ್​ ಬಂಧನದಲ್ಲಿರಿಸಿ ಕೋರ್ಟ್​ ಆದೇಶ ಹೊರಡಿಸಿದೆ. ಈ ಮಧ್ಯೆ, ರಾಜ್​ ಕುಂದ್ರಾ ವಾಟ್ಸಾಪ್​ ಚಾಟ್​ ಲೀಕ್​ ಆಗಿದ್ದು, ಇದನ್ನು ಪೊಲೀಸರು ಮಹತ್ವದ ದಾಖಲೆ ಎಂದು ಪರಿಗಣಿಸಿದ್ದಾರೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ:ಪಾರ್ನ್​ ದಂಧೆ ಆರೋಪ; ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ ಕುಂದ್ರಾ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ

Published On - 5:05 pm, Tue, 20 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ