AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ.

ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​
ಅಬ್ಬಾ.. ನೀಲಿಚಿತ್ರಗಳಿಂದ ರಾಜ್​ ಕುಂದ್ರಾ ಗಳಿಸುತ್ತಿದ್ದ ಹಣ ಇಷ್ಟೊಂದಾ? ಲೀಕ್​ ಆಯ್ತು ವಾಟ್ಸಾಪ್​ ಚ್ಯಾಟ್​
TV9 Web
| Updated By: ಸುಷ್ಮಾ ಚಕ್ರೆ|

Updated on:Jul 20, 2021 | 5:16 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ. ಈಗ ಜುಲೈ 23ವರೆಗೆ ಪೊಲೀಸ್​ ಬಂಧನದಲ್ಲಿರಿಸಿ ಕೋರ್ಟ್​ ಆದೇಶ ಹೊರಡಿಸಿದೆ. ಈ ಮಧ್ಯೆ, ರಾಜ್​ ಕುಂದ್ರಾ ವಾಟ್ಸಾಪ್​ ಚಾಟ್​ ಲೀಕ್​ ಆಗಿದ್ದು, ಇದನ್ನು ಪೊಲೀಸರು ಮಹತ್ವದ ದಾಖಲೆ ಎಂದು ಪರಿಗಣಿಸಿದ್ದಾರೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ:ಪಾರ್ನ್​ ದಂಧೆ ಆರೋಪ; ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ ಕುಂದ್ರಾ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ

Published On - 5:05 pm, Tue, 20 July 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ