AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನ ಮಾಜಿ ಪ್ರಿಯತಮೆ ವಿರುದ್ಧ ನಾಯಕಿ ದೂರು

ಟಾಲಿವುಡ್ ನಟ ರಾಜ್ ತರುಣ್ ಮಾಜಿ ಪ್ರೇಯಸಿ ಲಾವಣ್ಯ ವಿರುದ್ಧ ನಟಿ ಮಾಳವಿ ಮಲ್ಹೋತ್ರಾ ಹೈದರಾಬಾದ್​ನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಲಾವಣ್ಯಾ ನನ್ನ ಕುಟುಂಬದವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನ್ನ ಸಹೋದರನಿಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ನಟನ ಮಾಜಿ ಪ್ರಿಯತಮೆ ವಿರುದ್ಧ ನಾಯಕಿ ದೂರು
ಮಂಜುನಾಥ ಸಿ.
|

Updated on: Jul 07, 2024 | 8:48 AM

Share

ಟಾಲಿವುಡ್ ನಟ ರಾಜ್ ತರುಣ್ ಪ್ರೇಮ ಪ್ರಕರಣ ವಿವಾದಕ್ಕೆ ಕಾರಣವಾಗಿದೆ. ರಾಜ್ ತರುಣ್​ರ ಮಾಜಿ ಪ್ರೇಯಸಿ ಎಂದು ಹೇಳಿಕೊಂಡಿರುವ ಲಾವಣ್ಯ ಎಂಬುವರು ನಟ ರಾಜ್ ತರುಣ್ ವಿರುದ್ಧ ದೂರು ನೀಡಿದ್ದಾರೆ. ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಈಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

ರಾಜ್ ತರುಣ್ ನಟಿಸುತ್ತಿರುವ ಹೊಸ ಸಿನಿಮಾ ‘ತಿರಗಬಡರಾ ಸಾಮಿ’ ಸಿನಿಮಾನಲ್ಲಿ ಮುಂಬೈ ಮೂಲದ ಮಾಳವಿ ಮಲ್ಹೋತ್ರಾ ನಾಯಕಿಯಾಗಿ ನಟಿಸುತ್ತಿದ್ದು, ಈಗ ಇದೇ ಮಾಳವಿ ಅವರು ರಾಜ್ ತರುಣ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಹೈದರಾಬಾದ್​ ಡಿಸಿಪಿ ಅವರನ್ನು ಭೇಟಿ ಆಗಿರುವ ಮಾಳವಿ ಮಲ್ಹೋತ್ರಾ, ‘ಲಾವಣ್ಯ ತಮ್ಮ ಮಾನಹಾನಿಗೆ ಯತ್ನಿಸುತ್ತಿದ್ದಾರೆ. ನನ್ನ ವಿರುದ್ಧ ಲಾವಣ್ಯ ಮಾಡಿರುವ ಆರೋಪ ಸುಳ್ಳು. ನಾನು ರಾಜ್ ತರುಣ್‌ ಜೊತೆಗೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ ಮತ್ತು ನಮ್ಮ ನಡುವೆ ಸ್ನೇಹವನ್ನು ಹೊರತುಪಡಿಸಿ ಯಾವುದೇ ಸಂಬಂಧ ಅಥವಾ ಯಾವುದೇ ರೀತಿಯ ವಿಷಯಗಳಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಚಿತ್ರಮಂದಿರಗಳ ಬಂದ್ ಬಗ್ಗೆ ನಿರ್ಧಾರ ಪ್ರಕಟಿಸಿದ ಫಿಲಂ ಚೇಂಬರ್

ದೂರಿನಲ್ಲಿ ಲಾವಣ್ಯ ವಿರುದ್ಧ ಬೆದರಿಕೆ ಆರೋಪವನ್ನೂ ಸಹ ಮಾಳವಿ ಮಾಡಿದ್ದಾರೆ, ‘ಹಿಮಾಚಲ ಪ್ರದೇಶದಲ್ಲಿ ನೆಲೆಸಿರುವ ನನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ನನ್ನ ಸಹೋದರನಿಗೂ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾಳೆ. ಲಾವಣ್ಯ ಹೇಗಿದ್ದಾಳೆ ಎಂದು ಸಹ ನನಗೆ ಗೊತ್ತಿಲ್ಲ. ನಾನು ಈ ವರೆಗೆ ಲಾವಣ್ಯಳನ್ನು ನೋಡಿಯೂ ಇಲ್ಲ. ಭೇಟಿ ಸಹ ಆಗಿಲ್ಲ. ಆದರೆ ರಾಜ್ ತರುಣ್, ಲಾವಣ್ಯ ತನ್ನ ಮಾಜಿ ಪ್ರೇಯಸಿ ಆಕೆಯಿಂದ ಎಚ್ಚರಿಕೆಯಿಂದಿರು ಎಂದು ಹೇಳಿದ್ದರು ಹಾಗಾಗಿ ಆಕೆಯ ನಂಬರ್ ಅನ್ನು ನಾನು ಬ್ಲಾಕ್ ಮಾಡಿದ್ದೇನೆ’ ಎಂದಿದ್ದಾರೆ.

‘ರಾಜ್ ತರುಣ್ ಬಳಿ ಸಹ ನನ್ನ ತಂದೆ, ತಾಯಿಯ ಮೊಬೈಲ್ ಸಂಖ್ಯೆ ಇಲ್ಲ. ಆದರೆ ಲಾವಣ್ಯಗೆ ಅದು ಹೇಗೆ ನಂಬರ್ ಸಿಕ್ಕಿತು. ನನ್ನ ಖಾಸಗಿ ಜೀವನದ ಮೇಲೆ ಆಕೆ ನಿಗಾ ಇರಿಸಿದ್ದಾಳೆ. ನನ್ನ ಖಾಸಗಿ ಜೀವನದಲ್ಲಿ ಮೂಗು ತೂರಿಸಿದ್ದಾಳೆ ಅದು ಅಪರಾಧ. ಪೊಲೀಸರು ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಲಾವಣ್ಯ ಬಿಡುಗಡೆ ಮಾಡಿರುವ ಆಡಿಯೋನಲ್ಲಿಯೂ ಸಹ ನಾನು ಸ್ಪಷ್ಟಪಡಿಸಿದ್ದೇನೆ ನನಗೂ ರಾಜ್​ಗೂ ಯಾವುದೇ ಸಂಬಂಧವಿಲ್ಲವೆಂದು ಎಂದು ನಟಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!