AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನ ಮಾಜಿ ಪ್ರಿಯತಮೆ ವಿರುದ್ಧ ನಾಯಕಿ ದೂರು

ಟಾಲಿವುಡ್ ನಟ ರಾಜ್ ತರುಣ್ ಮಾಜಿ ಪ್ರೇಯಸಿ ಲಾವಣ್ಯ ವಿರುದ್ಧ ನಟಿ ಮಾಳವಿ ಮಲ್ಹೋತ್ರಾ ಹೈದರಾಬಾದ್​ನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಲಾವಣ್ಯಾ ನನ್ನ ಕುಟುಂಬದವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನ್ನ ಸಹೋದರನಿಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ನಟನ ಮಾಜಿ ಪ್ರಿಯತಮೆ ವಿರುದ್ಧ ನಾಯಕಿ ದೂರು
ಮಂಜುನಾಥ ಸಿ.
|

Updated on: Jul 07, 2024 | 8:48 AM

Share

ಟಾಲಿವುಡ್ ನಟ ರಾಜ್ ತರುಣ್ ಪ್ರೇಮ ಪ್ರಕರಣ ವಿವಾದಕ್ಕೆ ಕಾರಣವಾಗಿದೆ. ರಾಜ್ ತರುಣ್​ರ ಮಾಜಿ ಪ್ರೇಯಸಿ ಎಂದು ಹೇಳಿಕೊಂಡಿರುವ ಲಾವಣ್ಯ ಎಂಬುವರು ನಟ ರಾಜ್ ತರುಣ್ ವಿರುದ್ಧ ದೂರು ನೀಡಿದ್ದಾರೆ. ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಈಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

ರಾಜ್ ತರುಣ್ ನಟಿಸುತ್ತಿರುವ ಹೊಸ ಸಿನಿಮಾ ‘ತಿರಗಬಡರಾ ಸಾಮಿ’ ಸಿನಿಮಾನಲ್ಲಿ ಮುಂಬೈ ಮೂಲದ ಮಾಳವಿ ಮಲ್ಹೋತ್ರಾ ನಾಯಕಿಯಾಗಿ ನಟಿಸುತ್ತಿದ್ದು, ಈಗ ಇದೇ ಮಾಳವಿ ಅವರು ರಾಜ್ ತರುಣ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಹೈದರಾಬಾದ್​ ಡಿಸಿಪಿ ಅವರನ್ನು ಭೇಟಿ ಆಗಿರುವ ಮಾಳವಿ ಮಲ್ಹೋತ್ರಾ, ‘ಲಾವಣ್ಯ ತಮ್ಮ ಮಾನಹಾನಿಗೆ ಯತ್ನಿಸುತ್ತಿದ್ದಾರೆ. ನನ್ನ ವಿರುದ್ಧ ಲಾವಣ್ಯ ಮಾಡಿರುವ ಆರೋಪ ಸುಳ್ಳು. ನಾನು ರಾಜ್ ತರುಣ್‌ ಜೊತೆಗೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ ಮತ್ತು ನಮ್ಮ ನಡುವೆ ಸ್ನೇಹವನ್ನು ಹೊರತುಪಡಿಸಿ ಯಾವುದೇ ಸಂಬಂಧ ಅಥವಾ ಯಾವುದೇ ರೀತಿಯ ವಿಷಯಗಳಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಚಿತ್ರಮಂದಿರಗಳ ಬಂದ್ ಬಗ್ಗೆ ನಿರ್ಧಾರ ಪ್ರಕಟಿಸಿದ ಫಿಲಂ ಚೇಂಬರ್

ದೂರಿನಲ್ಲಿ ಲಾವಣ್ಯ ವಿರುದ್ಧ ಬೆದರಿಕೆ ಆರೋಪವನ್ನೂ ಸಹ ಮಾಳವಿ ಮಾಡಿದ್ದಾರೆ, ‘ಹಿಮಾಚಲ ಪ್ರದೇಶದಲ್ಲಿ ನೆಲೆಸಿರುವ ನನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ನನ್ನ ಸಹೋದರನಿಗೂ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾಳೆ. ಲಾವಣ್ಯ ಹೇಗಿದ್ದಾಳೆ ಎಂದು ಸಹ ನನಗೆ ಗೊತ್ತಿಲ್ಲ. ನಾನು ಈ ವರೆಗೆ ಲಾವಣ್ಯಳನ್ನು ನೋಡಿಯೂ ಇಲ್ಲ. ಭೇಟಿ ಸಹ ಆಗಿಲ್ಲ. ಆದರೆ ರಾಜ್ ತರುಣ್, ಲಾವಣ್ಯ ತನ್ನ ಮಾಜಿ ಪ್ರೇಯಸಿ ಆಕೆಯಿಂದ ಎಚ್ಚರಿಕೆಯಿಂದಿರು ಎಂದು ಹೇಳಿದ್ದರು ಹಾಗಾಗಿ ಆಕೆಯ ನಂಬರ್ ಅನ್ನು ನಾನು ಬ್ಲಾಕ್ ಮಾಡಿದ್ದೇನೆ’ ಎಂದಿದ್ದಾರೆ.

‘ರಾಜ್ ತರುಣ್ ಬಳಿ ಸಹ ನನ್ನ ತಂದೆ, ತಾಯಿಯ ಮೊಬೈಲ್ ಸಂಖ್ಯೆ ಇಲ್ಲ. ಆದರೆ ಲಾವಣ್ಯಗೆ ಅದು ಹೇಗೆ ನಂಬರ್ ಸಿಕ್ಕಿತು. ನನ್ನ ಖಾಸಗಿ ಜೀವನದ ಮೇಲೆ ಆಕೆ ನಿಗಾ ಇರಿಸಿದ್ದಾಳೆ. ನನ್ನ ಖಾಸಗಿ ಜೀವನದಲ್ಲಿ ಮೂಗು ತೂರಿಸಿದ್ದಾಳೆ ಅದು ಅಪರಾಧ. ಪೊಲೀಸರು ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಲಾವಣ್ಯ ಬಿಡುಗಡೆ ಮಾಡಿರುವ ಆಡಿಯೋನಲ್ಲಿಯೂ ಸಹ ನಾನು ಸ್ಪಷ್ಟಪಡಿಸಿದ್ದೇನೆ ನನಗೂ ರಾಜ್​ಗೂ ಯಾವುದೇ ಸಂಬಂಧವಿಲ್ಲವೆಂದು ಎಂದು ನಟಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ