AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dwarakish: ಸಿಂಗಾಪುರದಲ್ಲಿ ರಾಜ ಕುಳ್ಳ, ಆಫ್ರಿಕಾದಲ್ಲಿ ಶೀಲಾ, ಕನ್ನಡ ಚಿತ್ರರಂಗಕ್ಕೆ ವಿದೇಶಿ ಲೊಕೇಶನ್ ಪರಿಚಯಿಸಿದ್ದ ದ್ವಾರಕೀಶ್  

Dwarakish death: ಸ್ಯಾಂಡಲ್ವುಡ್ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ   ದ್ವಾರಕೀಶ್ (81) ಹೃದಯಾಘಾತದಿಂದ  ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಡಾ. ವಿಷ್ಣುವರ್ಧನ್ ಅವರೊಂದಿಗೆ ಹಲವು ಚಿತ್ರಗಳಲ್ಲಿ ನಟಿಸಿದ್ದ ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟರ ಚಿತ್ರಗಳನ್ನೂ ನಿರ್ಮಿಸಿ ಸೈ ಎಣಿಸಿಕೊಂಡಿದ್ದಾರೆ. ಸ್ಟುಡಿಯೋಗಳಲ್ಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡುತ್ತಿದ್ದ ಒಂದು ಕಾಲದಲ್ಲಿ ದ್ವಾರಕೀಶ್ ಅವರು ಮೊದಲ ಬಾರಿಗೆ  ಸಿಂಗಾಪುರದಲ್ಲಿ ರಾಜ ಕುಳ್ಳ ಸಿನಿಮಾವನ್ನು ವಿದೇಶದಲ್ಲಿ ಚಿತ್ರೀಕರಣ ಮಾಡುವ ಮೂಲಕ ಹೊಸ ದಾಖಲೆಯನ್ನು ಬರೆದರು. 

Dwarakish: ಸಿಂಗಾಪುರದಲ್ಲಿ ರಾಜ ಕುಳ್ಳ, ಆಫ್ರಿಕಾದಲ್ಲಿ ಶೀಲಾ, ಕನ್ನಡ ಚಿತ್ರರಂಗಕ್ಕೆ ವಿದೇಶಿ ಲೊಕೇಶನ್ ಪರಿಚಯಿಸಿದ್ದ ದ್ವಾರಕೀಶ್  
ಮಾಲಾಶ್ರೀ ಅಂಚನ್​
| Edited By: |

Updated on:Apr 16, 2024 | 3:14 PM

Share

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಕಾಯಿಯಿಂದ ಬಳಲುತ್ತಿದ್ದ ಲೆಜೆಂಡ್ ನಟ ಇಂದು ಬೆಳಗ್ಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.  ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟ ಛಾಪನ್ನು ಮೂಡಿಸಿದ್ದ ದ್ವಾರಕೀಶ್ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ತಮ್ಮ ಸಿನಿಮಾಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುವ ಕರ್ನಾಟಕದ ಕುಳ್ಳ ಮೊದಲ ಬಾರಿಗೆ ಸಿಂಗಾಪೂರದಲ್ಲಿ ರಾಜ ಕುಳ್ಳ  ಸಿನಿಮಾವನ್ನು ವಿದೇಶದಲ್ಲಿ ಚಿತ್ರೀಕರಣ ಮಾಡಿದರು. ಈ ಚಲನಚಿತ್ರ ವಿದೇಶದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

1942  ಆಗಸ್ಟ್ 19 ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ ನಟ ದ್ವಾರಕೀಶ್ 1964 ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ನಟನೆಯಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದ ದ್ವಾರಕೀಶ್ ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟರಾಗಿ ನೂರಾರು ಸಿನೆಮಾಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ನಿರ್ದೇಶಕ ಹಾಗೂ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.

ಒಂದು ಕಾಲದಲ್ಲಿ  ಕನ್ನಡ ಚಲನಚಿತ್ರಗಳನ್ನು  ಸ್ಟುಡಿಯೋಗಳಲ್ಲಿ, ದೇಶದ ಒಳಗೆ ವಿವಿಧ ರಾಜ್ಯಗಳಲ್ಲಿ ಹೊರಾಂಗಣ ಚಿತ್ರೀಕರಣ ಮಾಡಲಾಗುತ್ತಿತ್ತು. ಕನ್ನಡ ಸಿನೆಮಾವನ್ನು ಬೇರೆ ದೇಶಕ್ಕೆ ಹೋಗಿ ಚಿತ್ರೀಕರಿಸುವ ಸಾಹಸವನ್ನು ಯಾರೂ ಮಾಡಿರಲಿಲ್ಲ. ಆದರೆ ಇಂಥಹದೊಂದು ಹೊಸ ಸಾಹಸ ಮಾಡಿ ದಾಖಲೆ ಬರೆದಿದ್ದು ʼಸಿಂಗಾಪುರದಲ್ಲಿ ರಾಜ ಕುಳ್ಳʼ ಸಿನೆಮಾ. 1978 ರಲ್ಲಿ  ಈ ಚಿತ್ರವು ಸಿಂಗಾಪುರದಲ್ಲಿ ಚಿತ್ರೀಕರಣಗೊಂಡಿತ್ತು. ಈ ಸಾಹಸಕ್ಕೆ ಕೈ ಹಾಕಿದ್ದು, ನಟ, ನಿರ್ಮಾಪಕ ದ್ವಾರಕೀಶ್ ಅವರು. ಸಂಪೂರ್ಣ ಆಕ್ಷನ್ ಸಸ್ಪೆನ್ಸ್ ಡ್ರಾಮಾ ಕಥೆಯನ್ನು ಹೊಂದಿದ್ದ ಚಿತ್ರದಲ್ಲಿ ವಿಷ್ಣುವರ್ಧನ್, ಮಂಜುಳಾ, ದ್ವಾರಕೀಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.  ಇದು ಅಂದಿನ ಕಾಲದ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದಾಗಿದ್ದು, ಈ ಸಿನಿಮಾ ವಿದೇಶದಲ್ಲಿ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಹಾಸ್ಯಮಯ ಪಾತ್ರಗಳಲ್ಲಿ ಸಿನಿರಸಿಕರ ಮನಸ್ಸು ಗೆದ್ದಿದ್ದ ಪ್ರಪಂಡ ಕುಳ್ಳನ ಸಿನಿಮಾಗಳಿವು!

ನಂತರ 1986 ರಲ್ಲಿ ವಿಭಿನ್ನ ಕಥಾ ಹಂದರವನ್ನು ಹೊಂದಿದ್ದ ಆಫ್ರಿಕಾದಲ್ಲಿ ಶೀಲಾ ಸಿನಿಮಾವನ್ನು ದ್ವಾರಕೀಶ್ ಅವರು ಆಫ್ರಿಕಾದ ಕಾಡುಗಳಲ್ಲಿ ಚಿತ್ರೀಕರಣ ಮಾಡಿದ್ದರು. ಹೀಗೆ  ಮೇಯರ್ ಮುತ್ತಣ್ಣ, ಭಾಗ್ಯವಂತರು, ಗುರುಶಿಷ್ಯರು ಸೇರಿದಂತೆ  ತಮ್ಮ ಹಿಟ್ ಸಿನಿಮಾಗಳ ಮೂಲಕ ದ್ವಾರಕೀಶ್ ಅವರು ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Tue, 16 April 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ