AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ರಾಜಮನಾರ್​: ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು
TV9 Web
| Edited By: |

Updated on:Aug 23, 2021 | 11:06 AM

Share

ಪ್ರಭಾಸ್​ ನಟನೆಯ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗ ಚಿತ್ರತಂಡ ರಾಜಮನಾರ್​ ಪಾತ್ರವನ್ನು ಪರಿಚಯಿಸಿದೆ. ಇದರಲ್ಲಿ ಟಾಲಿವುಡ್​ನ ಖ್ಯಾತ ನಟ ಜಗಪತಿ ಬಾಬು ನಟಿಸುತ್ತಿದ್ದಾರೆ. 

ಜಗಪತಿ ಬಾಬು ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಸಲಾರ್​ಗೆ ವಿಲನ್​ ಆಗುತ್ತಾರೆ ಎನ್ನುವ ವಿಚಾರ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅವರ ಖಡಕ್​ ಲುಕ್​ ನೋಡಿ ಫ್ಯಾನ್ಸ್  ಸಾಕಷ್ಟು ಖುಷಿಪಟ್ಟಿದ್ದಾರೆ.

ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಅದೇ ದಿನಾಂಕದಲ್ಲೇ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ತೆರೆಕಾಣಲಿದೆ ಎಂದು ನಿರ್ಮಾಪಕರು ಮಾಹಿತಿ ಬಹಿರಂಗ ಮಾಡಿದ್ದಾರೆ. ಹಾಗಾಗಿ ‘ಸಲಾರ್​’ ರಿಲೀಸ್​ ಡೇಟ್​ ಬದಲಾಗುವುದು ಅನಿವಾರ್ಯ ಆಗಿದೆ.

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತ ಪ್ರಶಾಂತ್​ ನೀಲ್​ ಕೂಡ ಬ್ಯುಸಿ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಕೆಲಸಗಳು ಲಾಕ್​ಡೌನ್​ ಕಾರಣದಿಂದ ತಡವಾಗಿವೆ

ಇದನ್ನೂ ಓದಿ: KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 10:37 am, Mon, 23 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್