AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ರಾಜಮನಾರ್​: ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು
TV9 Web
| Edited By: |

Updated on:Aug 23, 2021 | 11:06 AM

Share

ಪ್ರಭಾಸ್​ ನಟನೆಯ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗ ಚಿತ್ರತಂಡ ರಾಜಮನಾರ್​ ಪಾತ್ರವನ್ನು ಪರಿಚಯಿಸಿದೆ. ಇದರಲ್ಲಿ ಟಾಲಿವುಡ್​ನ ಖ್ಯಾತ ನಟ ಜಗಪತಿ ಬಾಬು ನಟಿಸುತ್ತಿದ್ದಾರೆ. 

ಜಗಪತಿ ಬಾಬು ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಸಲಾರ್​ಗೆ ವಿಲನ್​ ಆಗುತ್ತಾರೆ ಎನ್ನುವ ವಿಚಾರ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅವರ ಖಡಕ್​ ಲುಕ್​ ನೋಡಿ ಫ್ಯಾನ್ಸ್  ಸಾಕಷ್ಟು ಖುಷಿಪಟ್ಟಿದ್ದಾರೆ.

ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಅದೇ ದಿನಾಂಕದಲ್ಲೇ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ತೆರೆಕಾಣಲಿದೆ ಎಂದು ನಿರ್ಮಾಪಕರು ಮಾಹಿತಿ ಬಹಿರಂಗ ಮಾಡಿದ್ದಾರೆ. ಹಾಗಾಗಿ ‘ಸಲಾರ್​’ ರಿಲೀಸ್​ ಡೇಟ್​ ಬದಲಾಗುವುದು ಅನಿವಾರ್ಯ ಆಗಿದೆ.

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತ ಪ್ರಶಾಂತ್​ ನೀಲ್​ ಕೂಡ ಬ್ಯುಸಿ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಕೆಲಸಗಳು ಲಾಕ್​ಡೌನ್​ ಕಾರಣದಿಂದ ತಡವಾಗಿವೆ

ಇದನ್ನೂ ಓದಿ: KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 10:37 am, Mon, 23 August 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?