AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂತಕದ ಮನೆಯಲ್ಲೂ ಸೆಲ್ಫಿ ಹುಚ್ಚು; ತಾಳ್ಮೆ ಕಳೆದುಕೊಂಡು ಕೂಗಾಡಿದ ರಾಜಮೌಳಿ

ಪ್ರಸಿದ್ಧ ನಟ ಕೋಟಾ ಶ್ರೀನಿವಾಸ್ ರಾವ್ ಅವರ ನಿಧನದಿಂದ ತೆಲುಗು ಚಿತ್ರರಂಗಕ್ಕೆ ಭಾರೀ ನಷ್ಟ ಉಂಟು ಮಾಡಿದೆ. ಅವರ ಅಂತಿಮ ದರ್ಶನದ ಸಮಯದಲ್ಲಿ ಅಭಿಮಾನಿಗಳು ಸೆಲ್ಫಿ ತೆಗೆಯಲು ಮುಗಿಬಿದ್ದಿದ್ದರಿಂದ ನಿರ್ದೇಶಕ ಎಸ್.ಎಸ್. ರಾಜಮೌಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೂತಕದ ಮನೆಯಲ್ಲಿ ಈ ರೀತಿಯ ವರ್ತನೆ ಸರಿಯಲ್ಲ ಎಂದು ಅನೇಕರು ಹೇಳಿದ್ದಾರೆ.

ಸೂತಕದ ಮನೆಯಲ್ಲೂ ಸೆಲ್ಫಿ ಹುಚ್ಚು; ತಾಳ್ಮೆ ಕಳೆದುಕೊಂಡು ಕೂಗಾಡಿದ ರಾಜಮೌಳಿ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Jul 14, 2025 | 7:04 AM

Share

ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಕೋಟಾ ಶ್ರೀನಿವಾಸ್ ರಾವ್ (Kota Srinivas Rao) ಅವರು ನಿಧನ ಹೊಂದಿದ್ದಾರೆ. ಇದರಿಂದ ತೆಲುಗು ಚಿತ್ರರಂಗಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರನ್ನು ಕಳೆದುಕೊಂಡ ಬೆನ್ನಲ್ಲೇ ಅನೇಕ ಸೆಲೆಬ್ರಿಟಿಗಳು ಆಗಮಿಸಿ ನಟನ ಅಂತಿಮ ದರ್ಶನ ಪಡೆದಿದ್ದಾರೆ. ಕೇವಲ ಚಿತ್ರರಂಗಕ್ಕೆ ಸೀಮಿತವಾಗದೆ ರಾಜಕಾರಣಿಗಳು ಕೂಡ ಇಲ್ಲಿಗೆ ಆಗಮಿಸಿದ್ದರು. ನಿರ್ದೇಶಕ ಎಸ್​ಎಸ್​ ರಾಜಮೌಳಿ ಆಗಮಿಸಿ ಸಂತಾಪ ಸೂಚಿಸಿದರು. ಆಗ ನಡೆದ ಘಟನೆಯೊಂದು ಚರ್ಚೆಗೆ ಕಾರಣ ಆಗಿದೆ. ರಾಜಮೌಳಿ ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ.

ಶ್ರೀನಿವಾಸ್ ರಾವ್ ಅವರ ಹೈದರಾಬಾದ್ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸೆಲೆಬ್ರಿಟಿಗಳು ಆಗಮಿಸುತ್ತಾರೆ ಎಂದು ತಿಳಿದ ಒಂದಷ್ಟು ಮಂದಿ ಇದೇ ಸದಾವಕಾಶ ಎಂದು ಭಾವಿಸಿ ಅವರ ಮನೆಯ ಮುಂದೆ ನೆರೆದರು. ಹೋಗಿ ಬರೋ ಸೆಲೆಬ್ರಿಟಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸಿದರು. ಸೂತಕದ ಮನೆಯಲ್ಲಿ ಈ ರೀತಿ ಮಾಡಿರೋದು ಚರ್ಚೆಯ ಕೇಂದ್ರ ಬಿಂದು ಆಗಿದೆ. ಅಲ್ಲದೆ, ಅನೇಕರ ಕೋಪಕ್ಕೂ ಕಾರಣ ಆಗಿದೆ.

ಇದನ್ನೂ ಓದಿ
Image
ಕೋಟಾ ಶ್ರೀನಿವಾಸ್ ರಾವ್ ಕನ್ನಡದಲ್ಲಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?
Image
ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಅನಾರೋಗ್ಯದಿಂದ ವಿಧಿವಶ
Image
ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​
Image
ದಳಪತಿ ವಿಜಯ್ ಚಿತ್ರದಲ್ಲಿ ನನ್ನ ಪಾತ್ರ ವೇಸ್ಟ್ ಮಾಡಿದರು; ಸಂಜಯ್ ದತ್ ಬೇಸರ

ವೈರಲ್ ಆದ ಪೋಸ್ಟ್

ರಾಜಮೌಳಿ ಅವರು ಶ್ರೀನಿವಾಸ್ ರಾವ್ ಅಂತಿಮ ದರ್ಶನ ಪಡೆದು ದುಖಃದಲ್ಲಿ ಮನೆಯಿಂದ ಹೊರಡುತ್ತಿದ್ದರು. ಈ ವೇಳೆ ಕೆಲವರು ಸೆಲ್ಫಿ ಕೇಳಿದ್ದಾರೆ. ಆದರೆ, ಅವರಿಗೆ ಸೆಲ್ಫಿ ಕೊಡೋಕೆ ಇಷ್ಟವೇ ಇರಲಿಲ್ಲ. ರಾಜಮೌಳಿ ಅವರು ಈ ವಿಚಾರಕ್ಕೆ ಬೇಸರ ಮಾಡಿಕೊಂಡರು. ಹೀಗಾಗಿ, ಅವರು ಸಿಟ್ಟಾಗಿ ಅಭಿಮಾನಿಗಳ ಮೇಲೆ ಕೂಗಾಡಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳ ಹುಚ್ಚುತನವನ್ನು ಅನೇಕರು ಖಂಡಿಸಿದ್ದಾರೆ.

ಇದನ್ನೂ ಓದಿ: ಕೋಟಾ ಶ್ರೀನಿವಾಸ್ ರಾವ್ ಕನ್ನಡದಲ್ಲಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?

ನಟನಿಗೆ ಏನಾಗಿತ್ತು?

ಕೋಟಾ ಶ್ರೀನಿವಾಸ್ ರಾವ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್​ನಲ್ಲಿ ಅವರು ನಿಧನ ಹೊಂದಿದರು. ಅವರಿಗೆ 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಅನುಭವ ಇತ್ತು. ಅವರು ತೆಲುಗು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇದರ ಜೊತೆಗೆ ಕನ್ನಡದಲ್ಲೂ ಅವರು ನಟಿಸಿದ್ದಾರೆ. 1997 ರಲ್ಲಿ ಕೋಟಾ ಶ್ರೀನಿವಾಸ್ ರಾವ್ ಅವರು ‘ಲೇಡಿ ಕಮಿಷನರ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೆ, ‘ರಕ್ತ ಕಣ್ಣೀರು’,  ‘ಲವ್’,  ‘ನಮ್ಮ ಬಸವ’, ‘ನಮ್ಮಣ್ಣ’ ‘ಮಸ್ತಿ’,  ‘ಶ್ರೀಮತಿ’, ‘ಕಬ್ಜ’ ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Mon, 14 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ