AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ

ರಾಜಮೌಳಿ ಜೊತೆ ಸಿನಿಮಾ ಮಾಡುವ ಹೀರೋಗಳು ಹಗಲಿರುಳು ಕಷ್ಟಪಡಲು ಸಿದ್ಧವಾಗಿರಬೇಕು. ಕಠಿಣ ನಿಯಮಗಳನ್ನು ಪಾಲಿಸಬೇಕು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನ ಸಿನಿಮಾಗೆ ಸಕಲ ತಯಾರಿ ನಡೆಯುತ್ತಿದೆ. ತಯಾರಿಯ ಹಂತದಲ್ಲೇ ಮಹೇಶ್​ ಬಾಬುಗೆ ರಾಜಮೌಳಿ ಅವರು ಒಂದಷ್ಟು ನಿಯಮಗಳನ್ನು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on:Feb 22, 2024 | 8:50 AM

Share

ನಟ ಮಹೇಶ್​ ಬಾಬು (Mahesh Babu) ಅವರನ್ನು ಕಂಡರೆ ಅಭಿಮಾನಿಗಳಿಗೆ ತುಂಬ ಪ್ರೀತಿ. ಅವರನ್ನು ನೇರವಾಗಿ ನೋಡಬೇಕು ಎಂಬುದು ಲಕ್ಷಾಂತರ ಮಂದಿಯ ಬಯಕೆ. ಆದರೆ ಇನ್ಮುಂದೆ ಮಹೇಶ್​ ಬಾಬು ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅನುಮಾನ. ಯಾವುದೇ ಸಭೆ, ಸಮಾರಂಭಗಳಿಗೆ ಅವರು ಹಾಜರಿ ಹಾಕಬಾರದು ಎಂದು ಆದೇಶ ಹೊರಡಿಸಲಾಗಿದೆ. ಹಾಗಂತ ಇದು, ಸರ್ಕಾರದ ಆದೇಶ ಅಲ್ಲ. ಬದಲಿಗೆ, ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಹಾಕಿರುವ ನಿಯಮ. ಹೀಗೊಂದು ಸುದ್ದಿ ಟಾಲಿವುಡ್ (Tollywood)​ ಅಂಗಳಲ್ಲಿ ಹರಿದಾಡುತ್ತಿದೆ. ಮಹೇಶ್​ ಬಾಬು ಅವರು ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು ಎಂದು ರಾಜಮೌಳಿ (SS Rajamouli) ಅವರು ಹೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಒಂದು ಕಾರಣ ಕೂಡ ಇದೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಮತ್ತು ರಾಜಮೌಳಿ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ. ಅದರ ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾದ ಪಾತ್ರಕ್ಕಾಗಿ ಮಹೇಶ್​ ಬಾಬು ಅವರು ಗೆಟಪ್​ ಬದಲಿಸಿಕೊಳ್ಳಲಿದ್ದಾರೆ. ಅಲ್ಲದೇ ಅವರು ಬಾಡಿ ಬಿಲ್ಡ್​ ಮಾಡಲಿದ್ದಾರೆ. ಅವರ ಹೊಸ ಗೆಟಪ್​ ಹೇಗಿದೆ ಎಂಬುದು ಜನರಿಗೆ ಗೊತ್ತಾಗಬಾರದು. ಆ ಕಾರಣದಿಂದ ಮಹೇಶ್​ ಬಾಬು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು ಎಂದು ರಾಜಮೌಳಿ ಸೂಚಿಸಿದ್ದಾರೆ ಎಂದು ಸುದ್ದಿ ಆಗಿದೆ.

ಬೇರೆ ನಿರ್ದೇಶಕರಿಗೆ ಹೋಲಿಸಿದರೆ ರಾಜಮೌಳಿ ಅವರು ಕೆಲಸ ಮಾಡುವ ವಿಧಾನವೇ ಬೇರೆ. ತುಂಬ ಶ್ರಮವಹಿಸಿ, ಸಾಕಷ್ಟು ಸಮಯ ತೆಗೆದುಕೊಂಡು ಅವರು ಸಿನಿಮಾ ಮಾಡುತ್ತಾರೆ. ಅದಕ್ಕೆ ತಕ್ಕಂತೆ ಹೀರೋಗಳು ಸ್ಪಂದಿಸಬೇಕು. ಮುಖ್ಯವಾಗಿ ಅವರ ಸಿನಿಮಾಗಳಲ್ಲಿ ಹೀರೋ ಗೆಟಪ್​ ಬದಲಾಗುತ್ತದೆ. ಅದಕ್ಕೆ ಮಹೇಶ್​ ಬಾಬು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿದೇಶದ ಟ್ರೇನರ್​ಗಳಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಹಾಗಾಗಿ ಮುಂದಿನ ಸಿನಿಮಾದಲ್ಲಿ ಅವರು ಭರ್ಜರಿ ಯಶಸ್ಸು ಪಡೆಯಬೇಕಾದ ಅನಿವಾರ್ಯತೆ ಇದೆ. ರಾಜಮೌಳಿ ಜೊತೆ ಅವರು ಕೈ ಜೋಡಿಸಿರುವುದರಿಂದ ಸಕ್ಸಸ್​ ಗ್ಯಾರಂಟಿ. ಆದರೆ ಆ ಗೆಲುವು ಸುಲಭವಾಗಿ ಧಕ್ಕುವುದಿಲ್ಲ. ಅದಕ್ಕಾಗಿ ಹಗಲಿರುಳು ಕಷ್ಟಪಡಬೇಕು. ಅದೆಲ್ಲದಕ್ಕೂ ಸಿದ್ಧರಾಗಿಯೇ ಮಹೇಶ್​ ಬಾಬು ಅವರು ರಾಜಮೌಳಿ ಜೊತೆ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ರಾಜಮೌಳಿ ನಿರ್ದೇಶನದ ಚಿತ್ರಕ್ಕೆ ಮಹೇಶ್​ ಬಾಬು ನಿರ್ಮಾಣ; ಹಾಗಾದ್ರೆ ನಟನೆ?

ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಮಹೇಶ್​ ಬಾಬು ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ. ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಈ ಬಾರಿ ರಾಜಮೌಳಿ ಅವರು ತಮ್ಮ ತಾಂತ್ರಿಕ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆ ಕಾರಣದಿಂದಲೂ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:36 am, Thu, 22 February 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?