ಮತ್ತೊಂದು ಹಾಡಿನ ಮೂಲಕ ಸೌಂಡು ಮಾಡಲು ಸಜ್ಜಾದ ‘ಆರ್​ಆರ್​ಆರ್​’: ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಕಾತರ

Revolt Of BHEEM: ‘ಆರ್​ಆರ್​ಆರ್’ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಅವರು ಕೊಮರಾಮ್​ ಭೀಮ್ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರವನ್ನು ವಿವರಿಸುವ ಹಾಡು ಡಿ.24ರಂದು ಸಂಜೆ ನಾಲ್ಕು ಗಂಟೆಗೆ ಬಿಡುಗಡೆ ಆಗಲಿದೆ.

ಮತ್ತೊಂದು ಹಾಡಿನ ಮೂಲಕ ಸೌಂಡು ಮಾಡಲು ಸಜ್ಜಾದ ‘ಆರ್​ಆರ್​ಆರ್​’: ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಕಾತರ
ಜ್ಯೂ. ಎನ್​ಟಿಆರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 23, 2021 | 1:36 PM

ಬಹುನಿರೀಕ್ಷಿತ ‘ಆರ್​ಆರ್​ಆರ್​’ (RRR Movie) ಸಿನಿಮಾ ಈಗಾಗಲೇ ಅನೇಕ ಕಾರಣಗಳಿಂದಾಗಿ ಹೈಪ್​ ಸೃಷ್ಟಿ ಮಾಡಿದೆ. ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ ಎಂಬ ಒಂದೇ ಕಾರಣ ಸಾಕು ‘ಆರ್​ಆರ್​ಆರ್​’ ಬಗ್ಗೆ ನಿರೀಕ್ಷೆ ಮೂಡಲು. ಅದರ ಜೊತೆಗೆ ಜ್ಯೂ. ಎನ್​ಟಿಆರ್​ (Jr NTR) ಮತ್ತು ರಾಮ್​ ಚರಣ್​ ಅವರ ಭರ್ಜರಿ ಕಾಂಬಿನೇಷನ್​ನಿಂದಾಗಿ ಸಿನಿಮಾದ ಚಾರ್ಮ್​ ಹೆಚ್ಚಿದೆ. ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ಆರ್​ಆರ್​ಆರ್​’ ಹಾಡುಗಳು ಈಗಾಗಲೇ ಜನಮನ ಗೆದ್ದಿವೆ. ಅದರಲ್ಲೂ ‘ಹಳ್ಳಿ ನಾಟು..’ ಹಾಡು ಸಖತ್​ ವೈರಲ್​ ಆಗಿದೆ. ಈಗ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲು ಸಮಯ ನಿಗದಿ ಆಗಿದೆ. ಚಿಕ್ಕದೊಂದು ಟೀಸರ್​ ಮೂಲಕ ಆ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಆರ್​ಆರ್​ಆರ್​ ತಂಡ.

ಈ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಅವರು ಕೊಮರಾಮ್​ ಭೀಮ್ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರ ಹೇಗಿದೆ ಎಂಬುದಕ್ಕೆ ಈಗಾಗಲೇ ಸಾಕ್ಷಿ ಸಿಕ್ಕಿದೆ. ವಿವಿಧ ಗೆಟಪ್​ನಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಂಡಿದ್ದಾರೆ. ಆ ಪಾತ್ರವನ್ನು ವಿವರಿಸುವ ಹಾಡು ಡಿ.24ರಂದು ಸಂಜೆ ನಾಲ್ಕು ಗಂಟೆಗೆ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ವರ್ಷನ್​ನಲ್ಲಿ ಈ ಗೀತೆ ಬಿಡುಗಡೆ ಆಗಲಿದೆ. ಇಂದು (ಡಿ.23) ಈ ಹಾಡಿನ ಚಿಕ್ಕ ಪ್ರೋಮೋ ರಿಲೀಸ್​ ಆಗಿದ್ದು, ಜ್ಯೂ, ಎನ್​ಟಿಆರ್​ ಅಭಿಮಾನಿಗಳ ಕಾತರ ಹೆಚ್ಚಿಸಿದೆ.

ಜ.7ರಂದು ವಿಶ್ವಾದ್ಯಂತ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ ಆಗಲಿದೆ. ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಜನನಿ..’ ಹಾಡು ಕೂಡ ಗಮನ ಸೆಳೆದಿದೆ.

ಟ್ರೇಲರ್​ನಲ್ಲಿ ಎಲ್ಲಾ ಪಾತ್ರಗಳ ಪರಿಚಯವಾಗಿದೆ. ಸಿನಿಮಾ ಎಷ್ಟು ಅದ್ದೂರಿಯಾಗಿ ಇರಲಿದೆ ಎನ್ನುವುದರ ಸಣ್ಣ ಝಲಕ್​ ಟ್ರೇಲರ್​ನಲ್ಲಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾ ಮೇಕಿಂಗ್​ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ಹಲವು ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿಗೂ ಚಿತ್ರತಂಡ ಆಗಮಿಸಿತ್ತು. ರಾಮ್​ ಚರಣ್​, ಆಲಿಯಾ ಭಟ್​, ಜ್ಯೂ. ಎನ್​ಟಿಆರ್​ ಅವರು ಮಾಧ್ಯಮಗೋಷ್ಠಿ ನಡೆಸಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ:

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

Jr NTR: ಆರ್​ಆರ್​ಆರ್​ ಪತ್ರಿಕಾಗೋಷ್ಠಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಜೂ. ಎನ್​ಟಿಆರ್

Published On - 1:21 pm, Thu, 23 December 21

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ