AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

ವಿಜಯೇಂದ್ರ ಪ್ರಸಾದ್​ ಅವರು ಹೇಳಿರುವ ಮಾತು ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಪುರಿ ಜಗನ್ನಾಥ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?
ವಿಜಯೇಂದ್ರ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: May 28, 2021 | 7:21 AM

Share

ಎಸ್​.ಎಸ್​. ರಾಜಮೌಳಿ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್​ ಹಿರಿಯ ಸಿನಿಮಾ ಕಥೆ ಬರಹಗಾರರು. ಬಾಹುಬಲಿ ಸಿನಿಮಾ ಕಲ್ಪನೆ ಮೂಡಿ ಬಂದಿದ್ದು ಅವರಿಂದಲೇ. ಅಚ್ಚರಿ ಎಂದರೆ ವಿಜಯೇಂದ್ರ ಪ್ರಸಾದ್​ ಅವರ ಮೊಬೈಲ್​ ವಾಲ್​ಪೇಪರ್​ನಲ್ಲಿ ಅವರ ಫೋಟೋ ಹಾಕಿಕೊಂಡಿಲ್ಲ. ಬದಲಿಗೆ ಟಾಲಿವುಡ್​ ನಿರ್ದೇಶಕ ಪುರಿ ಜಗನ್ನಾಥ್​ ಅವರ ಫೋಟೋ ಇದೆ.

ವಿಜಯೇಂದ್ರ ಪ್ರಸಾದ್ ಇತ್ತೀಚೆಗೆ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರಿಗೆ ರಾಜಮೌಳಿ ಹೊರತುಪಡಿಸಿ ನಿಮ್ಮ ಫೇವರಿಟ್​ ನಿರ್ದೇಶಕರು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಈ ವೇಳೆ ಅವರು ಮೊಬೈಲ್​ ವಾಲ್​ಪೇಪರ್​ ಬಗ್ಗೆ ಮಾತನಾಡಿದ್ದಾರೆ. ನನಗೆ ಪುರಿ ಜಗನ್ನಾಥ್​ ಇಷ್ಟ. ಅವರ ಬಗ್ಗೆ ನಾನು ಅಸೂಯೆಪಟ್ಟುಕೊಳ್ಳುತ್ತೇನೆ. ಅವರಿಂದ ನಾನು ಸ್ಪೂರ್ತಿ ಪಡೆದುಕೊಂಡಿದ್ದೇನೆ. ಹೀಗಾಗಿ, ನನ್ನ ಮೊಬೈಲ್​ ವಾಲ್​ಪೇಪರ್​ನಲ್ಲಿ ಅವರ ಫೋಟೋ ಇದೆ ಎಂದಿದ್ದಾರೆ ರಾಜಮೌಳಿ.

ರಾಜಮೌಳಿ ಕುಟುಂಬ ಅನೇಕ ಬಾರಿ ಪುರಿ ಅವರನನ್ನು ಹೊಗಳಿದೆ. ರಾಜಮೌಳಿ ಸಿನಿಮಾಗಳನ್ನು ಮಾಡೋಕೆ ತುಂಬಾ ಸಮಯ ತೆಗೆದುಕೊಳ್ಳುತ್ತಾರೆ. ಆ ರೀತಿ ಮಾಡದೇ ವೇಗವಾಗಿ ಸಿನಿಮಾ ಮಾಡೋದು ಹೇಗೆ ಎಂಬುದನ್ನು ಪುರಿಯಿಂದ ಕಲಿಯುವಂತೆ ರಾಜಮೌಳಿ ಹೆಂಡತಿ, ಕಾಸ್ಟ್ಯೂಮ್​ ಡಿಸೈನರ್​ ರಮಾ ಅವರು ರಾಜಮೌಳಿಗೆ ಹೇಳಿದ್ದರಂತೆ.

ವಿಜಯೇಂದ್ರ ಪ್ರಸಾದ್​ ಅವರು ಹೇಳಿರುವ ಮಾತು ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಪುರಿ ಜಗನ್ನಾಥ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ರಾಜಮೌಳಿ ಸದ್ಯ ಆರ್​ಆರ್​ಆರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿವೆ. ಈ ಸಿನಿಮಾದ ಕತೆ ಹೆಣೆದಿದ್ದು ವಿಜಯೇಂದ್ರ ಪ್ರಸಾದ್​ ಅವರೇ. ಇನ್ನು ಪುರಿ ಜಗನ್ನಾಥ್​ ವಿಜಯ್​ ದೇವರಕೊಂಡ ನಟನೆಯ ಲೈಗರ್​ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

RRR Ott Rights: 325 ಕೋಟಿ ರೂ.ಗೆ ಸೇಲ್​ ಆಯ್ತು ಆರ್​ಆರ್​ಆರ್ ಚಿತ್ರ; ಯಾವ ಓಟಿಟಿಯಲ್ಲಿ ಪ್ರಸಾರ?

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ