AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

ವಿಜಯೇಂದ್ರ ಪ್ರಸಾದ್​ ಅವರು ಹೇಳಿರುವ ಮಾತು ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಪುರಿ ಜಗನ್ನಾಥ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?
ವಿಜಯೇಂದ್ರ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: May 28, 2021 | 7:21 AM

Share

ಎಸ್​.ಎಸ್​. ರಾಜಮೌಳಿ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್​ ಹಿರಿಯ ಸಿನಿಮಾ ಕಥೆ ಬರಹಗಾರರು. ಬಾಹುಬಲಿ ಸಿನಿಮಾ ಕಲ್ಪನೆ ಮೂಡಿ ಬಂದಿದ್ದು ಅವರಿಂದಲೇ. ಅಚ್ಚರಿ ಎಂದರೆ ವಿಜಯೇಂದ್ರ ಪ್ರಸಾದ್​ ಅವರ ಮೊಬೈಲ್​ ವಾಲ್​ಪೇಪರ್​ನಲ್ಲಿ ಅವರ ಫೋಟೋ ಹಾಕಿಕೊಂಡಿಲ್ಲ. ಬದಲಿಗೆ ಟಾಲಿವುಡ್​ ನಿರ್ದೇಶಕ ಪುರಿ ಜಗನ್ನಾಥ್​ ಅವರ ಫೋಟೋ ಇದೆ.

ವಿಜಯೇಂದ್ರ ಪ್ರಸಾದ್ ಇತ್ತೀಚೆಗೆ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರಿಗೆ ರಾಜಮೌಳಿ ಹೊರತುಪಡಿಸಿ ನಿಮ್ಮ ಫೇವರಿಟ್​ ನಿರ್ದೇಶಕರು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಈ ವೇಳೆ ಅವರು ಮೊಬೈಲ್​ ವಾಲ್​ಪೇಪರ್​ ಬಗ್ಗೆ ಮಾತನಾಡಿದ್ದಾರೆ. ನನಗೆ ಪುರಿ ಜಗನ್ನಾಥ್​ ಇಷ್ಟ. ಅವರ ಬಗ್ಗೆ ನಾನು ಅಸೂಯೆಪಟ್ಟುಕೊಳ್ಳುತ್ತೇನೆ. ಅವರಿಂದ ನಾನು ಸ್ಪೂರ್ತಿ ಪಡೆದುಕೊಂಡಿದ್ದೇನೆ. ಹೀಗಾಗಿ, ನನ್ನ ಮೊಬೈಲ್​ ವಾಲ್​ಪೇಪರ್​ನಲ್ಲಿ ಅವರ ಫೋಟೋ ಇದೆ ಎಂದಿದ್ದಾರೆ ರಾಜಮೌಳಿ.

ರಾಜಮೌಳಿ ಕುಟುಂಬ ಅನೇಕ ಬಾರಿ ಪುರಿ ಅವರನನ್ನು ಹೊಗಳಿದೆ. ರಾಜಮೌಳಿ ಸಿನಿಮಾಗಳನ್ನು ಮಾಡೋಕೆ ತುಂಬಾ ಸಮಯ ತೆಗೆದುಕೊಳ್ಳುತ್ತಾರೆ. ಆ ರೀತಿ ಮಾಡದೇ ವೇಗವಾಗಿ ಸಿನಿಮಾ ಮಾಡೋದು ಹೇಗೆ ಎಂಬುದನ್ನು ಪುರಿಯಿಂದ ಕಲಿಯುವಂತೆ ರಾಜಮೌಳಿ ಹೆಂಡತಿ, ಕಾಸ್ಟ್ಯೂಮ್​ ಡಿಸೈನರ್​ ರಮಾ ಅವರು ರಾಜಮೌಳಿಗೆ ಹೇಳಿದ್ದರಂತೆ.

ವಿಜಯೇಂದ್ರ ಪ್ರಸಾದ್​ ಅವರು ಹೇಳಿರುವ ಮಾತು ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಪುರಿ ಜಗನ್ನಾಥ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ರಾಜಮೌಳಿ ಸದ್ಯ ಆರ್​ಆರ್​ಆರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿವೆ. ಈ ಸಿನಿಮಾದ ಕತೆ ಹೆಣೆದಿದ್ದು ವಿಜಯೇಂದ್ರ ಪ್ರಸಾದ್​ ಅವರೇ. ಇನ್ನು ಪುರಿ ಜಗನ್ನಾಥ್​ ವಿಜಯ್​ ದೇವರಕೊಂಡ ನಟನೆಯ ಲೈಗರ್​ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

RRR Ott Rights: 325 ಕೋಟಿ ರೂ.ಗೆ ಸೇಲ್​ ಆಯ್ತು ಆರ್​ಆರ್​ಆರ್ ಚಿತ್ರ; ಯಾವ ಓಟಿಟಿಯಲ್ಲಿ ಪ್ರಸಾರ?

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ