AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಬಗ್ಗೆ ಬಾಲಿವುಡ್ ಮಂದಿಯ ಅಪಪ್ರಚಾರ; ಸಿನಿಮಾ ಮೂಲಕವೇ ಉತ್ತರಿಸುತ್ತಾರೆ ರಾಜಮೌಳಿ

ಮಹೇಶ್ ಬಾಬು-ರಾಜಮೌಳಿ ಕಾಂಬಿನೇಷನ್‌ನ 'ವಾರಣಾಸಿ' ಚಿತ್ರದ ಬಜೆಟ್ ಮತ್ತು ಒಟಿಟಿ ಡೀಲ್ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸುಳ್ಳು. ರಾಜಮೌಳಿಗೆ ಮಾರುಕಟ್ಟೆಯ ಪಲ್ಸ್ ಚೆನ್ನಾಗಿ ಗೊತ್ತಿದ್ದು, ಇದು ಭಾರತೀಯ ಮಾರುಕಟ್ಟೆ ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಪ್ರೀ-ರಿಲೀಸ್ ಬಿಸಿನೆಸ್ ಮೂಲಕವೇ ನಿರ್ಮಾಪಕರ ಹೂಡಿಕೆ ಸುರಕ್ಷಿತವಾಗಿದೆ ಎಂಬುದು ಅವರ ಲೆಕ್ಕಾಚಾರ.

‘ವಾರಣಾಸಿ’ ಬಗ್ಗೆ ಬಾಲಿವುಡ್ ಮಂದಿಯ ಅಪಪ್ರಚಾರ; ಸಿನಿಮಾ ಮೂಲಕವೇ ಉತ್ತರಿಸುತ್ತಾರೆ ರಾಜಮೌಳಿ
ರಾಜಮೌಳಿ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 16, 2026 | 7:06 AM

Share

ಟಾಲಿವುಡ್ ನಟ ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ ಕಾಂಬಿನೇಷನ್‌ನ ಮುಂಬರುವ ಸಿನಿಮಾ ‘ವಾರಣಾಸಿ’ (Varanasi) ಸದ್ಯ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ಚಿತ್ರ. ಚಿತ್ರತಂಡ ಸದ್ದಿಲ್ಲದೆ ತನ್ನ ಕೆಲಸದಲ್ಲಿ ಬ್ಯುಸಿಯಾಗಿದ್ದರೆ, ಸಿನಿಮಾ ರಂಗದಲ್ಲಿಮಾತ್ರ ಈ ಚಿತ್ರದ ಬಜೆಟ್ ಬಗ್ಗೆ ಇಲ್ಲಸಲ್ಲದ ವದಂತಿಗಳು ಹರಿದಾಡುತ್ತಿವೆ. ಅಲ್ಲದೆ, ಒಟಿಟಿ ಡೀಲ್​​ಗೆ ಬೇಡಿಕೆ ಇಲ್ಲ ಎಂದು ಬಾಲಿವುಡ್ ಮಂದಿ ಹೇಳುತ್ತಿದ್ದಾರೆ. ಆದರೆ, ಈ ಗೇಮ್ ರಾಜಮೌಳಿಗಿಂತ ಬೇರೆಯವರಿಗೆ ಚೆನ್ನಾಗಿ ಗೊತ್ತಿಲ್ಲ ಎಂದು ಅನೇಕರು ಹೇಳುತ್ತಿದ್ದಾರೆ.

‘ವಾರಣಾಸಿ’ ಚಿತ್ರದ ಬಜೆಟ್ ಅಂದುಕೊಂಡಿದ್ದಕ್ಕಿಂತ ಹೆಚ್ಚಾಗಿದೆ ಮತ್ತು ಬಜೆಟ್ ಕಂಟ್ರೋಲ್ ಮಾಡಲು ರಾಜಮೌಳಿ ಕಷ್ಟಪಡುತ್ತಿದ್ದಾರೆ ಎಂದೆಲ್ಲಾ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಇಂತಹ ಗೇಮ್‌ಗಳನ್ನು ರಾಜಮೌಳಿ ಸಾಕಷ್ಟು ನೋಡಿದ್ದಾರೆ ಮತ್ತು ಅವರಿಗೆ ಈ ಮಾರುಕಟ್ಟೆಯ ಪಲ್ಸ್ ಚೆನ್ನಾಗಿ ಗೊತ್ತಿದೆ ಎಂಬುದು ಅನೇಕರ ಅಭಿಪ್ರಾಯ. ರಾಜಮೌಳಿ ಅವರ ಸಿನಿಮಾಗಳಿಗೆ ಬಜೆಟ್ ಎಷ್ಟೇ ಆದರೂ, ಚಿತ್ರೀಕರಣದ ಒಂದು ಫ್ರೇಮ್ ಕೂಡ ರಿಲೀಸ್ ಆಗುವ ಮುನ್ನವೇ ಅವರ ಹೆಸರೊಂದಕ್ಕೇ ಕೋಟಿ ಕೋಟಿ ಬಿಸಿನೆಸ್ ಆಗುತ್ತದೆ. ಥಿಯೇಟ್ರಿಕಲ್ ರೈಟ್ಸ್, ಸ್ಯಾಟಲೈಟ್ ಡೀಲ್ಸ್, ಮತ್ತು ಆಡಿಯೋ ಹಕ್ಕುಗಳು ದಾಖಲೆ ಬೆಲೆಗೆ ಮಾರಾಟವಾಗುತ್ತವೆ.

‘ವಾರಣಾಸಿ’ ಚಿತ್ರದ ಟೀಸರ್ ಈಗಾಗಲೇ ಹುಟ್ಟುಹಾಕಿರುವ ಹೈಪ್ ನೋಡಿದರೆ, ಬಜೆಟ್ ಎಂಬುದು ಈ ಚಿತ್ರದ ಯಶಸ್ಸಿಗೆ ಯಾವುದೇ ಅಡ್ಡಿ ಉಂಟುಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ನಿರ್ಮಾಪಕರನ್ನು ಹೇಗೆ ಸೇಫ್ ಝೋನ್‌ನಲ್ಲಿ ಇಡಬೇಕು ಮತ್ತು ಹಾಕಿದ ಬಂಡವಾಳವನ್ನು ಹೇಗೆ ಲಾಭದೊಂದಿಗೆ ವಾಪಸ್ ತರಬೇಕು ಎಂಬ ಲೆಕ್ಕಾಚಾರ ರಾಜಮೌಳಿಗೆ ಚೆನ್ನಾಗಿ ಗೊತ್ತಿದೆ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಪ್ರಸ್ತುತ ಒಟಿಟಿ ಮಾರುಕಟ್ಟೆಯಲ್ಲಿ ಸಣ್ಣಮಟ್ಟದ ಕುಸಿತ ಇರಬಹುದು. ರಾಜಮೌಳಿ ಸಿನಿಮಾಗೆ ದೊಡ್ಡ ಮೊತ್ತ ಕೊಡಲು ಕೆಲವರು ರೆಡಿ ಇಲ್ಲದೆ ಇರಬಹುದು. ಆದರೆ ‘ವಾರಣಾಸಿ’ ಕೇವಲ ಭಾರತೀಯ ಮಾರುಕಟ್ಟೆಯನ್ನು ನಂಬಿ ಮಾಡುತ್ತಿರುವ ಸಿನಿಮಾವಲ್ಲ. ಇದು ವೆಸ್ಟರ್ನ್ ಮತ್ತು ಏಷ್ಯನ್ ಮಾರುಕಟ್ಟೆಗಳನ್ನು ಗುರಿಯಾಗಿಸಿಕೊಂಡು ಜಾಗತಿಕ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಹಾಗಾಗಿ, ಸಿನಿಮಾ ರಿಲೀಸ್ ಆಗುವ ಮುನ್ನವೇ ಪ್ರಿ-ರಿಲೀಸ್ ಬಿಸಿನೆಸ್ ಮೂಲಕವೇ ಹೂಡಿಕೆ ಮಾಡಿದ ಹಣ ನಿರ್ಮಾಪಕರ ಕೈ ಸೇರುವುದು ಗ್ಯಾರಂಟಿ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್