Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ಕ್ಕೆ ತೆರೆಗೆ ಬರಲಿದೆ ರಾಜಮೌಳಿ ಮುಂದಿನ ಸಿನಿಮಾ; ಮಾಹಿತಿ ಹಂಚಿಕೊಂಡ ಜ್ಯೂ.ಎನ್​ಟಿಆರ್​

ಮಹೇಶ್​ ಬಾಬು ಹಾಗೂ ನಿಮ್ಮ ಕಾಂಬಿನೇಷನ್​ ಸಿನಿಮಾದ ಕೆಲಸ ಆರಂಭವಾಗೋದು ಯಾವಾಗ ಎನ್ನುವ ಪ್ರಶ್ನೆಯನ್ನು ರಾಜಮೌಳಿಗೆ ಕೇಳಲಾಯಿತು. ಇದಕ್ಕೆ ಜ್ಯೂ.ಎನ್​ಟಿಆರ್​ ಉತ್ತರಿಸೋಕೆ ಮುಂದಾದರು.

2026ಕ್ಕೆ ತೆರೆಗೆ ಬರಲಿದೆ ರಾಜಮೌಳಿ ಮುಂದಿನ ಸಿನಿಮಾ; ಮಾಹಿತಿ ಹಂಚಿಕೊಂಡ ಜ್ಯೂ.ಎನ್​ಟಿಆರ್​
ರಾಜಮೌಳಿ
Follow us
TV9 Web
| Updated By: ಮದನ್​ ಕುಮಾರ್​

Updated on:Dec 28, 2021 | 12:12 AM

ಸ್ಟಾರ್​ ನಿರ್ದೇಶಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿದರೂ ಅಭಿಮಾನಿಗಳ ನಿರೀಕ್ಷೆ ಗಗನಕ್ಕೇರುತ್ತದೆ. ಈ ಹಿಂದೆ ಅವರು ಅಂಥ ಅದ್ದೂರಿ ಸಿನಿಮಾಗಳನ್ನು ನೀಡಿದ್ದೇ ಇದಕ್ಕೆ ಕಾರಣ. ಇನ್ನು, ಅವರ ಸಿನಿಮಾ ಅನೌನ್ಸ್​ ಆದ ದಿನದಿಂದಲೇ ಹೊಸ ಹೊಸ ಗಾಸಿಪ್​ಗಳು ಕೂಡ ಕೇಳಿಬರಲು ಆರಂಭಿಸುತ್ತವೆ. ‘ಆರ್​ಆರ್​ಆರ್’ ಸಿನಿಮಾ ತೆರೆಗೆ ಬರೋಕೆ ಕೆಲವೇ ದಿನಗಳು ಬಾಕಿ ಇವೆ. ಹೀಗಿರುವಾಗಲೇ ‘ಪ್ರಿನ್ಸ್​’ ಮಹೇಶ್​ ಬಾಬು ಜತೆ ಮಾಡಲಿರುವ ಚಿತ್ರದ ಬಗ್ಗೆಯೂ ಹಲವು ಗಾಸಿಪ್​ಗಳು ಹುಟ್ಟಿಕೊಂಡಿವೆ. ಈ ವಿಚಾರದ ಬಗ್ಗೆ ಜ್ಯೂ.ಎನ್​ಟಿಆರ್​ ಮಾಹಿತಿ ನೀಡಿದ್ದಾರೆ.

ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನಲ್ಲಿ ಸಿನಿಮಾ ಆಗುತ್ತಿರುವುದೇನೋ ನಿಜ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಕಥೆ ಬರೆಯಲು ಆರಂಭಿಸಿದ್ದಾರೆ ಎಂಬುದು ಬಿಟ್ಟರೆ ಸದ್ಯಕ್ಕಂತೂ ಬೇರೆ ಯಾವ ಕೆಲಸಗಳೂ ಶುರು ಆಗಿಲ್ಲ. ಪ್ರಸ್ತುತ ‘ಆರ್​ಆರ್​ಆರ್’ ಚಿತ್ರದ ಪ್ರಚಾರದ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಮಹೇಶ್​ ಬಾಬು ಜೊತೆಗಿನ ಚಿತ್ರದ ಕಥೆಯ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಿವೆ. ‘ಆರ್​ಆರ್​ಆರ್​’ ಪ್ರೆಸ್​ಮೀಟ್​ನಲ್ಲಿ ಕೇಳಲಾದ ಪ್ರಶ್ನೆಗೆ ಜ್ಯೂ.ಎನ್​ಟಿಆರ್​ ಉತ್ತರಿಸಿದ್ದಾರೆ.

ಮಹೇಶ್​ ಬಾಬು ಹಾಗೂ ನಿಮ್ಮ ಕಾಂಬಿನೇಷನ್​ ಸಿನಿಮಾದ ಕೆಲಸ ಆರಂಭವಾಗೋದು ಯಾವಾಗ ಎನ್ನುವ ಪ್ರಶ್ನೆಯನ್ನು ರಾಜಮೌಳಿಗೆ ಕೇಳಲಾಯಿತು. ಇದಕ್ಕೆ ಜ್ಯೂ.ಎನ್​ಟಿಆರ್​ ಉತ್ತರಿಸೋಕೆ ಮುಂದಾದರು. ನನಗೆ ಈ ಬಗ್ಗೆ ಸ್ವಲ್ಪ ಮಾಹಿತಿ ಸಿಕ್ಕಿದೆ ಎಂದು ಮೈಕ್​ ತೆಗೆದುಕೊಂಡರು. ಅವರು ಮಾತು ಕೇಳಿ ಎಲ್ಲರೂ ನಕ್ಕರು. ಏಕೆಂದರೆ ಅವರು ಹೇಳಿದ್ದು ಕೇವಲ ಜೋಕ್​ಗಾಗಿ ಮಾತ್ರ ಆಗಿತ್ತು.

‘ಈ ಚಿತ್ರಕ್ಕೆ ಸಂಬಂಧಿಸಿದ ಚರ್ಚೆಗಳು 2022ರಲ್ಲಿ ಪ್ರಾರಂಭವಾಗುತ್ತದೆ. ಚಿತ್ರೀಕರಣವು 2023 ರಲ್ಲಿ ಶುರುವಾಗಬಹುದು.  ಬಹುಶಃ 2026ರಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ನಕ್ಕರು ಜ್ಯೂ.ಎನ್​ಟಿಆರ್​. ಈ ವೇಳೆ ಮೈಕ್​ ಕಸಿದುಕೊಂಡ ರಾಮ್​ ಚರಣ್​, ‘ಸಾಂಕ್ರಾಮಿಕ ಇಲ್ಲದಿದ್ದರೆ ಈ ಚಿತ್ರ 2025ರಲ್ಲೇ ರಿಲೀಸ್​ ಆಗುತ್ತದೆ’ ಎಂದರು. ​ ಇದನ್ನು ಕೇಳಿ ಎಲ್ಲರೂ ಮತ್ತೊಮ್ಮೆ ನಕ್ಕರು.

ಇದನ್ನೂ ಓದಿ: ಮತ್ತೆ ಮುಂದೂಡಲ್ಪಡುತ್ತೆ ‘ಆರ್​ಆರ್​ಆರ್​’ ರಿಲೀಸ್ ದಿನಾಂಕ? ರಾಜಮೌಳಿ ತಂಡಕ್ಕೆ ಮೊದಲ ಹಿನ್ನಡೆ

Published On - 10:03 pm, Mon, 27 December 21

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ