AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ನಿರ್ದೇಶನದ ಚಿತ್ರಕ್ಕೆ ಮಹೇಶ್​ ಬಾಬು ನಿರ್ಮಾಣ; ಹಾಗಾದ್ರೆ ನಟನೆ?

ರಾಜಮೌಳಿ ಅವರು ಈ ಸಿನಿಮಾಗೆ ನಿರ್ಮಾಪಕ ಅಲ್ಲ. ಹಾಗಿದ್ದರೂ ಕೂಡ ಅವರು ನಿರ್ಮಾಣದ ವಿಚಾರದಲ್ಲಿ ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಕಾರಣದಿಂದಲೇ ಅವರು ಮಹೇಶ್​ ಬಾಬುಗೆ ಈ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಜಮೌಳಿ ನಿರ್ದೇಶನದ ಚಿತ್ರಕ್ಕೆ ಮಹೇಶ್​ ಬಾಬು ನಿರ್ಮಾಣ; ಹಾಗಾದ್ರೆ ನಟನೆ?
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 27, 2024 | 12:40 PM

Share

ನಟ ಮಹೇಶ್​ ಬಾಬು (Mahesh Babu) ಅವರು ‘ಗುಂಟೂರು ಖಾರಂ’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆದ ಆ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈಗ ಮಹೇಶ್ ಬಾಬು ಅವರು ನಿರ್ದೇಶಕ ರಾಜಮೌಳಿ (SS Rajamouli) ಜೊತೆ ಕೈ ಜೋಡಿಸುತ್ತಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಮಹೇಶ್ ಬಾಬು ಬಂಡವಾಳ ಹೂಡಲಿ ಎಂದು ರಾಜಮೌಳಿ ಸಲಹೆ ನೀಡಿದ್ದಾರೆ ಎಂದು ಸುದ್ದಿ ಆಗಿದೆ. ಹಾಗಾದ್ರೆ ಮಹೇಶ್​ ಬಾಬು ನಟಿಸುವುದಿಲ್ಲವೇ ಎಂಬ ಪ್ರಶ್ನೆ ಮೂಡುವುದು ಸಹಜ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಮಹೇಶ್​ ಬಾಬು ಅವರು ವರ್ಷಕ್ಕೊಂದು ಸಿನಿಮಾ ಮಾಡುತ್ತಾರೆ. ಆದರೆ ರಾಜಮೌಳಿ ಅವರು ಇಷ್ಟು ವೇಗವಾಗಿ ಸಿನಿಮಾದ ಕೆಲಸ ಮುಗಿಸಲ್ಲ. ಅವರು 2-3 ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಾರೆ. ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಮಹೇಶ್ ಬಾಬು ಕೂಡ 2ರಿಂದ 3 ವರ್ಷ ಸಮಯ ಮೀಸಲಿಡಬೇಕಿದೆ. 3 ವರ್ಷಗಳ ಕಾಲ್​ಶೀಟ್​ಗೆ ಸಂಭಾವನೆ ಪಡೆಯುವ ಬದಲು ನಟನೆಯ ಜೊತೆಗೆ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದುವುದು ಉತ್ತಮ ಎಂದು ಮಹೇಶ್​ ಬಾಬುಗೆ ರಾಜಮೌಳಿ ಸಲಹೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಮಾಡಿವೆ.

ಇದನ್ನೂ ಓದಿ: Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ

ರಾಜಮೌಳಿ ಅವರು ಈ ಸಿನಿಮಾಗೆ ನಿರ್ಮಾಪಕ ಅಲ್ಲ. ಹಾಗಿದ್ದರೂ ಕೂಡ ಅವರು ನಿರ್ಮಾಣದ ವಿಚಾರದಲ್ಲಿ ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಕಾರಣದಿಂದಲೇ ಅವರು ಮಹೇಶ್​ ಬಾಬುಗೆ ಈ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ರಾಜಮೌಳಿ ಕೈಗೆ ಸಿಗುತ್ತಿಲ್ಲ, ಫೋನ್ ಕೂಡ ಸ್ವಿಚ್​ ಆಫ್​’; ಎಂಎಂ ಕೀರವಾಣಿ

‘ಗಂಟೂರು ಖಾರಂ’ ಬಿಡುಗಡೆ ಆದ ಬಳಿಕ ಮಹೇಶ್ ಬಾಬು ಅವರು ವಿದೇಶಕ್ಕೆ ತೆರಳಿದ್ದಾರೆ. ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಒಂದಷ್ಟು ತಯಾರಿ ಮಾಡಿಕೊಳ್ಳುವ ಸಲುವಾಗಿಯೇ ಅವರು ಜರ್ಮನಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ವೃತ್ತಿ ಜೀವನದ ದಿ ಬೆಸ್ಟ್​ ಸಿನಿಮಾವಾಗಿ ಇದು ಮೂಡಿಬರಬೇಕು ಎಂಬ ಆಸೆ ಅವರಿಗೆ ಇದೆ. ಹಾಗಾಗಿ ಅವರು ಇಷ್ಟೆಲ್ಲ ಡೆಡಿಕೇಷನ್​ ತೋರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ