AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​​ನಲ್ಲಿ ಬರುತ್ತಿರುವ ‘ವಾರಾಣಸಿ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಹೈದರಾಬಾದ್​​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಕೆಲವರು ಡ್ರೋನ್ ತಂದು ಹಾರಿಸಿದ್ದಾರೆ. ಇದರಿಂದಾಗಿ ದೊಡ್ಡ ಪರದೆಯಲ್ಲಿ ಟೈಟಲ್ ಟೀಸರ್ ಪ್ಲೇ ಮಾಡುವುದು ತಡವಾಯಿತು. ಈ ಬಗ್ಗೆ ರಾಜಮೌಳಿ ಮಾತನಾಡಿದರು.

Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು
Mahesh Babu
ಮದನ್​ ಕುಮಾರ್​
|

Updated on: Nov 16, 2025 | 7:31 AM

Share

ನಿರ್ದೇಶಕ ರಾಜಮೌಳಿ (Rajamouli) ಅವರು ಏನೇ ಮಾಡಿದರೂ ಪರ್ಫೆಕ್ಟ್ ಆಗಿ ಮಾಡುತ್ತಾರೆ. ವರ್ಷಗಟ್ಟಲೆ ಶ್ರಮಹಾಕಿ ಅವರು ಸಿನಿಮಾ ನಿರ್ದೇಶಿಸುತ್ತಾರೆ. ಆದರೆ ಅವರ ಶ್ರಮವನ್ನು ಕ್ಷಣಾರ್ಧದಲ್ಲಿ ಹಾಳು ಮಾಡಲು ಕೆಲವು ಕಿಡಿಗೇಡಿಗಳು ಕಾದಿರುತ್ತಾರೆ. ರಾಜಮೌಳಿ ಅವರ ಹೊಸ ಸಿನಿಮಾ ‘ವಾರಾಣಸಿ’ (Varanasi) ವಿಚಾರದಲ್ಲೂ ಹಾಗೆಯೇ ಆಗಿದೆ. ಮಹೇಶ್ ಬಾಬು ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಲು ಕೆಲವು ಕಿಡಿಗೇಡಿಗಳು ಅಡ್ಡಿಪಡಿಸಿದರು. ಇದರಿಂದ ರಾಜಮೌಳಿ ಅವರು ಅಭಿಮಾನಿಗಳ ಬಳಿ ಕ್ಷಮೆ ಕೇಳುವಂತಾಯಿತು.

ಹೈದರಾಬಾದ್​​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಗ್ಲೋಬ್ ಟ್ರಾಟರ್ ಇವೆಂಟ್ ಮಾಡಲಾಗಿದೆ. ಇದರಲ್ಲಿ ಅಂದಾಜು 50 ಸಾವಿರ ಜನರು ಭಾಗಿ ಆಗಿರುವ ಸಾಧ್ಯತೆ ಇದೆ. ಇಷ್ಟು ಜನರ ಎದುರಿನಲ್ಲಿ ದೊಡ್ಡ ಎಲ್​ಡಿಡಿ ಪರದೆ ಮೂಲಕ ‘ವಾರಾಣಸಿ’ ಟೈಟಲ್ ಟೀಸರ್ ಪ್ರದರ್ಶನ ಮಾಡಬೇಕು ಎಂಬುದು ರಾಜಮೌಳಿ ಅವರ ಪ್ಲ್ಯಾನ್ ಆಗಿತ್ತು. ಆದರೆ ಅದಕ್ಕೆ ತಾಂತ್ರಿಕ ಸಮಸ್ಯೆ ಉಂಟಾಯಿತು! ಅದಕ್ಕಾಗಿ ರಾಜಮೌಳಿ ಕ್ಷಮೆ ಕೇಳಿದರು. ಅಲ್ಲದೇ, ಅಸಲಿ ವಿಷಯ ಏನೆಂಬುದನ್ನು ವಿವರಿಸಿದರು.

‘ಕಳೆದ ರಾತ್ರಿ ನಾವು ಈ ದೊಡ್ಡ ಪರದೆಯಲ್ಲಿ ಗ್ಲಿಂಪ್ಸ್ ಪ್ಲೇ ಮಾಡಿ ಪರೀಕ್ಷಿಸಲಿಲ್ಲ. ಯಾಕೆಂದರೆ ಅದನ್ನು ಲೀಕ್ ಮಾಡಲು, ನಮ್ಮ ಒಂದು ವರ್ಷದ ಶ್ರಮವನ್ನು ಹಾಳು ಮಾಡಲು ಇಲ್ಲೊಂದು ಡ್ರೋನ್ ಹಾರಾಡುತ್ತಿತ್ತು. ಅದಕ್ಕಾಗಿ ನಾವು ಟೆಸ್ಟ್ ಮಾಡದೆಯೇ ರಿಸ್ಕ್ ತೆಗೆದುಕೊಂಡೆವು. ಆದರೆ ಈಗ ಗ್ಲಿಂಪ್ಟ್ ಪ್ಲೇ ಮಾಡಲು ವಿದ್ಯುತ್ ಶಕ್ತಿ ಸಾಕಾಗುತ್ತಿಲ್ಲ. ಅದಕ್ಕಾಗಿ ಇನ್ನೂ 10 ನಿಮಿಷ ಹಿಡಿಯಬಹುದು’ ಎಂದು ರಾಜಮೌಳಿ ಹೇಳಿದರು.

‘ಈ ಸ್ಕ್ರೀನ್​ಗೆ ವಿದ್ಯುತ್ ನೀಡಲು 45 ಜನರೇಟರ್ ಬೇಕು. ನಾವು ನಿನ್ನೆ ರಾತ್ರಿಯೇ ವಿಡಿಯೋ ಟೆಸ್ಟ್ ಮಾಡಬೇಕಿತ್ತು. ಮಧ್ಯರಾತ್ರಿ 2 ಗಂಟೆ ತನಕ ನಾವು ಕೆಲಸ ಮಾಡಿದೆವು. ಜನರು ಎಲ್ಲಿಂದ ಬಂದರೋ ಗೊತ್ತಿಲ್ಲ. ಡ್ರೋನ್ ಹಾರಿಸಿ, ವಿಡಿಯೋ ಚಿತ್ರಿಸಿ ಲೀಕ್ ಮಾಡಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಸಾವಿರಾರು ಜನರು ಕೆಲಸ ಮಾಡಿರುವ ಒಂದು ವರ್ಷದ ಶ್ರಮ ಇದು. ಇದು ಪರ್ಫೆಕ್ಟ್ ಆಗಿರಬೇಕೆಂದು ನಾವು ಬಯಸಿದ್ದೆವು’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾಗಲ್ಲ, ರಾಜಮೌಳಿ ಮೊದಲು ಆಫರ್ ಕೊಟ್ಟಿದ್ದು ಐಶ್ವರ್ಯಾಗೆ

2027ರಲ್ಲಿ ‘ವಾರಾಣಸಿ’ ಸಿನಿಮಾ ಬಿಡುಗಡೆ ಆಗಲಿದೆ. ಇಷ್ಟು ದಿನ ಈ ಸಿನಿಮಾಗೆ ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿತ್ತು. ಈ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರೆಲ್ಲರ ಫಸ್ಟ್ ಲುಕ್ ಗಮನ ಸೆಳೆದಿದೆ. ಮಹೇಶ್ ಬಾಬು ಅವರು ರುದ್ರ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ