Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

ಅಕ್ಟೋಬರ್​ 13ರಂದು ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ.

ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ
ರಾಜಮೌಳಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 30, 2021 | 10:31 AM

ಕೊರೊನಾ ವೈರಸ್ ಎರಡನೇ ಅಲೆ​ಗೆ ಭಾರತದ ಚಿತ್ರರಂಗ ಮತ್ತೆ ತತ್ತರಿಸಿದೆ. ಅನೇಕ ಹೀರೋಗಳಿಗೆ ಕೊರೊನಾ ಪಾಸಿಟಿವ್​ ಆಗಿದ್ದು ಮಾತ್ರವಲ್ಲ, ಚಿತ್ರದ ಶೂಟಿಂಗ್​ ಕೂಡ ನಿಂತಿದೆ. ಇದರಿಂದ ಸಹಜವಾಗಿಯೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಕೊರೊನಾ ಕಾರಣದಿಂದ ಕೆಜಿಎಫ್​-2 ರಿಲೀಸ್​ ತಡವಾಗಲಿದೆ ಎನ್ನಲಾಗುತ್ತಿದೆ. ಈಗ ಎಸ್​.ಎಸ್​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ಸರದಿ.

ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್​ 13ರಂದು ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ.

ಮೊದಲಿನ ಲೆಕ್ಕಾಚಾರದಂತೆ ನಡೆದಿದ್ದರೆ ಆರ್​ಆರ್​ಆರ್​ ಚಿತ್ರತಂಡ ಈಗಾಗಲೇ ಶೂಟಿಂಗ್​ ಪೂರ್ಣ ಮಾಡಿರುತ್ತಿತ್ತು. ಆದರೆ, ಆಲಿಯಾ ಭಟ್​ಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಇನ್ನು, ರಾಮ್​​ ಚರಣ್​ ಮನೆಯ ಸಿಬ್ಬಂದಿಗೆ ಕೊವಿಡ್​ ತಗುಲಿತ್ತು. ಹೀಗಾಗಿ, ರಾಮ್​ ಚರಣ್​ ಹೋಂ ಕ್ವಾರಂಟೈನ್​ ಆಗುವ ಪರಿಸ್ಥಿತಿ ಬಂದೊದಗಿತ್ತು. ಇದರ ಜತೆ ಜತೆಗೆ ಎರಡನೇ ಅಲೆ ಅಬ್ಬರ ಜೋರಾಗಿದೆ. ಹೀಗಾಗಿ, ಸಿನಿಮಾ ಶೂಟಿಂಗ್​ ನಿಲ್ಲಿಸಲಾಗಿದೆ. ಇದರಿಂದ ರಾಜಮೌಳಿ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ.

ತಜ್ಞರ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಮಿತಿಮೀರಿ ಏರಿಕೆ ಕಾಣಲಿದ್ದು, ಮೇ ಅಂತ್ಯಕ್ಕೆ ಅಬ್ಬರ ಕೊಂಚ ಕಡಿಮೆ ಆಗಲಿದೆಯಂತೆ. ಕೊರೊನಾ ಹರಡುತ್ತಿರುವ ವೇಗ ನೋಡಿದರೆ, ಸದ್ಯಕ್ಕಂತೂ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ. ಒಂದೊಮ್ಮೆ ಜೂನ್​, ಜುಲೈ ವೇಳೆಗೆ ಕೊರೊನಾ ನಿಯಂತ್ರಣಕ್ಕೆ ಬಂದು ಚಿತ್ರಮಂದಿರಗಳು ಮತ್ತೆ ತೆರೆದುಕೊಂಡರೂ ಜನರು ಒಮ್ಮೆಲೇ ಸಿನಿಮಾ ನೋಡೋಕೆ ಆಸಕ್ತಿ ತೋರುವುದು ಅನುಮಾನವೇ. ಇದರ ಜತೆಗೆ ಆರ್​ಆರ್​ಆರ್​ ಚಿತ್ರದ ಸಾಕಷ್ಟು ಶೂಟಿಂಗ್​ ಬಾಕಿ ಇವೆ. ಹೀಗಾಗಿ ಸಿನಿಮಾ ರಿಲೀಸ್​ ದಿನಾಂಕ ವಿಳಂಬವಾಗುತ್ತಿದೆ.

ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ