AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’

‘ಧುರಂಧರ್ 2’ ಸಿನೆಮಾದ ಭಾರಿ ಯಶಸ್ಸು ರಾಜಮೌಳಿ ಅವರ ನಿರ್ಧಾರವನ್ನು ಬದಲಿಸಿದೆ. ಈ ಹಿಂದೆ ‘ವಾರಣಾಸಿ’ ಚಿತ್ರವನ್ನು ಒಂದೇ ಭಾಗದಲ್ಲಿ ತೆರೆಗೆ ತರಲು ರಾಜಮೌಳಿ ಯೋಜಿಸಿದ್ದರು. ಆದರೆ, ‘ಧುರಂಧರ್ 2’ ಹಣ ಮಾಡಿದ ರೀತಿಯನ್ನು ನೋಡಿ, ಈಗ ‘ವಾರಣಾಸಿ’ಯನ್ನು ಎರಡು ಭಾಗಗಳಲ್ಲಿ ನಿರ್ಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’
ರಣವೀರ್-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Mar 28, 2026 | 7:40 AM

Share

‘ಧುರಂಧರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಮೊದಲ ಭಾಗ ಅಬ್ಬರಿಸಿತ್ತು. ಇದು ಎರಡನೇ ಪಾರ್ಟ್​​ ಹಿಟ್ ಆಗು ಸಹಕಾರಿ ಆಗಿದೆ. ಇಷ್ಟು ದಿನಗಳ ಕಾಲ ಮೊದಲ ಪಾರ್ಟ್ ರಿಲೀಸ್ ಆಗಿ ಬಹು ಸಮಯದ ಬಳಿಕ ಎರಡನೇ ಪಾರ್ಟ್ ಬರುತ್ತಿತ್ತು. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗಿಲ್ಲ. ‘ಧುರಂಧರ್’ ರಿಲೀಸ್ ಆಗಿ ಕೇವಲ ಮೂರೇ ತಿಂಗಳಲ್ಲಿ ‘ಧುರಂಧರ್ 2’ ಸಿನಿಮಾ ತೆರೆಗೆ ಬಂದಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈಗ ಇದರಿಂದ ರಾಜಮೌಳಿ ಪ್ಲ್ಯಾನ್ ಬದಲಿಸಿದ್ದಾರೆ ಎಂದು ವರದಿ ಆಗಿದೆ.

‘ಬಾಹುಬಲಿ’ ಚಿತ್ರವನ್ನು ರಾಜಮೌಳಿ ಎರಡು ಪಾರ್ಟ್​ ಅಲ್ಲಿ ತಂದರು. ಅಲ್ಲಿಂದ ಎರಡು ಪಾರ್ಟ್​ಗಳಲ್ಲಿ ಸಿನಿಮಾ ಮಾಡುವ ಟ್ರೆಂಡ್ ಜೋರಾಯಿತು. ಭಾರತದಲ್ಲಿ ಅನೇಕ ಭಾಷೆಗಳಲ್ಲಿ ಅನೇಕ ಸಿನಿಮಾಗಳು ಎರಡು ಪಾರ್ಟ್​​ ಅಲ್ಲಿ ತರಲಾಯಿತು. ಆದರೆ, ಕೊನೆ ಕೊನೆಗೆ ಇದಕ್ಕೆ ಅರ್ಥವೇ ಇಲ್ಲದಂತೆ ಆಯಿತು. ದುಡ್ಡು ಮಾಡುವ ಉದ್ದೇಶದಿಂದ ಸಿನಿಮಾಗಳನ್ನು ಎರಡು ಪಾರ್ಟ್​​​ಗಳಲ್ಲಿ ತರಲಾಗುತ್ತಾ ಬಂತು. ಇದು ರಾಜಮೌಳಿಗೆ ಬೇಸರ ತರಿಸಿತ್ತು.

ಧುರಂಧರ್ ಸಿನಿಮಾ ರಿಲೀಸ್​ಗೂ ಮೊದಲಿನ ವರದಿ ಪ್ರಕಾರ, ‘ವಾರಣಾಸಿ’ ಚಿತ್ರವನ್ನು ಒಂದೇ ಪಾರ್ಟ್​​ ಅಲ್ಲಿ ತೆರೆಗೆ ತರೋ ಪ್ಲ್ಯಾನ್ ಅಲ್ಲಿ ರಾಜಮೌಳಿ ಇದ್ದರು. ಎರಡು ಪಾರ್ಟ್​​ನ ಜನರು ಇಷ್ಟಪಡೋದಿಲ್ಲ ಎಂಬುದು ಅವರ ಊಹೆ ಆಗಿತ್ತು. ಆದರೆ, ಯಾವಾಗ ‘ಧುರಂಧರ್ 2’ ಸಿನಿಮಾ ಹಿಟ್ ಆಯಿತೋ ಅವರು ಮತ್ತೆ ಪ್ಲ್ಯಾನ್ ಬದಲಿಸಿದ್ದಾರೆ ಎನ್ನಲಾಗಿದೆ.

‘ಧುರಂಧರ್ 2’ ಸಿನಿಮಾ ಹಣ ಮಾಡುತ್ತಿರುವ ರೀತಿ ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ಮೊದಲ ಭಾಗಕ್ಕೂ, ಎರಡನೇ ಪಾರ್ಟ್​​ಗೆ ಲಿಂಕ್ ಇತ್ತು. ರಾಜಮೌಳಿ ಸಿನಿಮಾಗಳಲ್ಲಿ ಸಸ್ಪೆನ್ಸ್ ಯಾವ ರೀತಿಯಲ್ಲಿ ಇಡುತ್ತಾರೆ ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಅವರು ಈಗ ‘ವಾರಣಾಸಿ’ ಚಿತ್ರವನ್ನು ಎರಡು ಪಾರ್ಟ್​​​ನಲ್ಲಿ ತರೋ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ತೇ ದಿನದಲ್ಲಿ ‘KGF 2’ ಲೈಫ್​​ ಟೈಮ್ ಕಲೆಕ್ಷನ್ ಬ್ರೇಕ್ ಮಾಡಲಿದೆ ‘ಧುರಂಧರ್ 2’ 

ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್​ ಸುಕುಮಾರನ್ ಮೊದಲಾದವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್​​ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಮುಂದಿನ ವರ್ಷ ಏಪ್ರಿಲ್​​ನಲ್ಲಿ ಸಿನಿಮಾ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು
ಕೊವಿಡ್ ರೀತಿ ಹೋರಾಟ: ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ
ಕೊವಿಡ್ ರೀತಿ ಹೋರಾಟ: ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?