AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ ಎರಡು ಗಂಟೆ ಟ್ರೆಕ್ಕಿಂಗ್ ಮಾಡಿದ ರಜನಿಕಾಂತ್

ಆಗಸ್ಟ್ 15ರಂದು ಅವರು ಉತ್ತರಕಾಂಡದ ಮಹಾವತಾರ್ ಬಾಬಾಜಿ ಗುಹೆಗೆ ತೆರಳಲು ಎರಡು ಗಂಟೆಗಳ ಕಾಲ ಟ್ರೆಕ್ಕಿಂಗ್ ಮಾಡಿದ್ದಾರೆ. ಗುಹೆಯಲ್ಲಿ ರಜನಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧ್ಯಾನದಲ್ಲಿ ಮಗ್ನರಾದರು.  ಅವರ ಹಿಮಾಲಯ ಪ್ರವಾಸದ ವಿಡಿಯೋಗಳು ವೈರಲ್ ಆಗಿವೆ.

ಹಿಮಾಚಲ ಪ್ರದೇಶದಲ್ಲಿ ಎರಡು ಗಂಟೆ ಟ್ರೆಕ್ಕಿಂಗ್ ಮಾಡಿದ ರಜನಿಕಾಂತ್
ರಜನಿಕಾಂತ್
Follow us
ರಾಜೇಶ್ ದುಗ್ಗುಮನೆ
|

Updated on:Aug 16, 2023 | 12:13 PM

ರಜನಿಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಮತ್ತೊಂದು ಕಡೆ ರಜನಿಕಾಂತ್ ಅವರು ಮನಶಾಂತಿಯನ್ನು ಅರಸಿ ಹಿಮಾಲಯಕ್ಕೆ ತೆರಳಿದ್ದಾರೆ. ಹಲವು ಆಧ್ಯಾತ್ಮಿಕ ಗುರುಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ರಜನಿಕಾಂತ್ ಅವರು ಹಿಮಾಚಲ ಪ್ರದೇಶಕ್ಕೆ ತೆರಳಿ ವಾರದ ಮೇಲಾಗಿದೆ. ಇನ್ನೂ ಕೆಲವು ದಿನಗಳು ಅವರು ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರ ರಿಲೀಸ್​ಗೂ ಮೊದಲೇ ರಜನಿಕಾಂತ್ ಅವರು ಹಿಮಾಚಲ ಪ್ರದೇಶಕ್ಕೆ ತೆರಳಿದರು. ಮೊದಲು ಅವರು ಹೃಷಿಕೇಶಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ಸಮಯ ತಂಗಿ ಬೇರೆ ಕಡೆ ಹೊರಟಿದ್ದಾರೆ. ರಜನಿಕಾಂತ್ ಜೊತೆ ಅವರ ಗೆಳೆಯರು ಸಾಥ್ ನಿಡಿದ್ದಾರೆ. ಆಗಸ್ಟ್ 15ರಂದು ಅವರು ಉತ್ತರಕಾಂಡದ ಮಹಾವತಾರ್ ಬಾಬಾಜಿ ಗುಹೆಗೆ ತೆರಳಲು ಎರಡು ಗಂಟೆಗಳ ಕಾಲ ಟ್ರೆಕ್ಕಿಂಗ್ ಮಾಡಿದ್ದಾರೆ. ಗುಹೆಯಲ್ಲಿ ರಜನಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧ್ಯಾನದಲ್ಲಿ ಮಗ್ನರಾದರು.  ಅವರ ಹಿಮಾಲಯ ಪ್ರವಾಸದ ವಿಡಿಯೋಗಳು ವೈರಲ್ ಆಗಿವೆ.

ರಜನಿಕಾಂತ್ ಅವರು 1992ರಿಂದಲೂ ಹಿಮಾಲಯಕ್ಕೆ ತೆರಳುವ ರೂಢಿ ಇಟ್ಟುಕೊಂಡಿದ್ದಾರೆ. ಕೊವಿಡ್ ಬಂದಿದ್ದರಿಂದ ಕಳೆದ ನಾಲ್ಕು ವರ್ಷಗಳಿಂದ ಅವರಿಗೆ ಹಿಮಾಚಲ ಪ್ರದೇಶಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಈಗ ರಜನಿ ಮತ್ತೆ ಆಧ್ಯಾತ್ಮ ಗುರುಗಳನ್ನು ಭೇಟಿ ಮಾಡುವ ಕೆಲಸದಲ್ಲಿ ಮಗ್ನರಾಗಿದ್ದಾರೆ.

ಇದನ್ನೂ ಓದಿ: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್

‘ಜೈಲರ್’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಮಾಯಿ ಮಾಡುತ್ತಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದ ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಿದ್ದಾರೆ. ನೆಲ್ಸನ್ ದಿಲೀಪ್​ ಕುಮಾರ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:52 am, Wed, 16 August 23

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​