ಚೈತ್ರಾಗೆ ಕುತಂತ್ರ ಬುದ್ಧಿಯ ರೋಗ ಇದೆ; ಬಿಗ್ ಬಾಸ್ ಮನೆಯಲ್ಲಿ ಮತ್ತೆ ಕಿರಿಕ್ ತೆಗೆದ ರಜತ್

Updated on: Dec 30, 2024 | 4:53 PM

ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಹಲವು ಬಾರಿ ಜಗಳ ಮಾಡಿದ್ದಾರೆ. ಆ ಜಗಳ ಈ ವಾರ ಕೂಡ ಮುಂದುವರಿಯುತ್ತಿದೆ. ಚೈತ್ರಾ ಅವರ ಗುಣಗಳನ್ನು ರಜತ್ ಮೊದಲಿನಿಂದಲೂ ಟೀಕಿಸುತ್ತಾ ಬಂದಿದ್ದಾರೆ. ಈಗ ‘ಕಲರ್ಸ್​ ಕನ್ನಡ’ ವಾಹಿನಿಯು ಹೊಸ ಪ್ರೋಮೋ ಬಿಡುಗಡೆ ಮಾಡಿದ್ದು, ಅದರಲ್ಲಿ ಕೂಡ ಅವರಿಬ್ಬರ ಜಟಾಪಟಿ ಕಾಣಿಸಿದೆ.

ಚೈತ್ರಾ ಕುಂದಾಪುರ ಮತ್ತು ರಜತ್ ಅವರ ನಡುವಿನ ಜಟಾಪಟಿ ಮುಂದುವರಿದಿದೆ. ಚೈತ್ರಾ ಅವರಿಗೆ ಕುತಂತ್ರ ಬುದ್ಧಿಯ ರೋಗ ಇದೆ ಎಂದು ರಜತ್ ಹೇಳಿದ್ದಾರೆ. ಬಿಗ್ ಬಾಸ್ ನೀಡಿದ ಟಾಸ್ಕ್​ನಲ್ಲಿ ಅವರು ಈ ಅಭಿಪ್ರಾಯ ತಿಳಿಸಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಬೇರೆ ಬೇರೆ ಕೆಟ್ಟ ಗುಣಗಳು ಯಾರಿಗೆ ಇದೆ ಎಂಬುದನ್ನು ಹೇಳಿದ್ದಾರೆ. ಡಿಸೆಂಬರ್​ 30ರ ಎಪಿಸೋಡ್​ನಲ್ಲಿ ಇದು ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More