AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಕಿಶನ್ ಪತ್ನಿಗೆ ಬೆದರಿಕೆ ಸಂದೇಶ: ಪೂರ್ತಿ ಮಾಹಿತಿ ತೆರೆದಿಟ್ಟ ಅಕ್ಷಿತಾ

ನಟ ರಜತ್ ಕಿಶನ್ ಅವರು ಇತ್ತೀಚೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆ ಬಳಿಕ ಕೆಲವರಿಂದ ಬೆದರಿಕೆ ಬಂದಿದೆ. ರಜತ್ ಕಿಶನ್ ಪತ್ನಿ ಅಕ್ಷಿತಾ ಅವರಿಗೂ ಬೆದರಿಕೆ ಸಂದೇಶಗಳನ್ನು ಕಳಿಸಲಾಗಿದೆ. ಈ ರೀತಿ ಸಂದೇಶ ಕಳಿಸಿದವರ ವಿರುದ್ಧ ಅಕ್ಷಿತಾ ದೂರು ನೀಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ರಜತ್ ಕಿಶನ್ ಪತ್ನಿಗೆ ಬೆದರಿಕೆ ಸಂದೇಶ: ಪೂರ್ತಿ ಮಾಹಿತಿ ತೆರೆದಿಟ್ಟ ಅಕ್ಷಿತಾ
Akshita, Rajath
Malatesh Jaggin
| Edited By: |

Updated on: Aug 07, 2025 | 10:27 PM

Share

ಧರ್ಮಸ್ಥಳ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ರಜತ್ ಕಿಶನ್ (Rajath Kishan) ಅವರಿಗೆ ಬೆದರಿಕೆ ಸಂದೇಶ ಬಂದಿದೆ. ರಜತ್ ಪತ್ನಿ ಅಕ್ಷಿತಾ ಅವರಿಗೂ ಕೆಲವರು ಬೆದರಿಕೆ ಸಂದೇಶ ಕಳಿಸಿದ್ದಾರೆ. ಆದ್ದರಿಂದ ಅಕ್ಷಿತಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೊಲೆ ಬೆದರಿಕೆ ಹಾಕುವವರಿಗೆ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಲು ಅವರು ಮುಂದಾಗಿದ್ದಾರೆ. ದೂರು ನೀಡಲು ಬಂದ ಅಕ್ಷಿತಾ (Akshita) ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬೆದರಿಕೆ ಸಂದೇಶ ಬಂದಿದ್ದರ ಬಗ್ಗೆ ಅವರು ಪೂರ್ತಿ ವಿವರ ನೀಡಿದ್ದಾರೆ.

‘ತುಂಬ ದಿನದಿಂದ ಸ್ನೇಹಿತರ ಜೊತೆ ಸೇರಿ ಅಲ್ಲಿಗೆ ಹೋಗಬೇಕು ಅಂತ ರಜತ್ ಅಂದುಕೊಳ್ಳುತ್ತಿದ್ದರು. ಬಿಗ್ ಬಾಸ್​ ಶೋಗೆ ತೆರಳುವುದಕ್ಕೂ ಮುನ್ನವೇ ಈ ಘಟನೆ ಬಗ್ಗೆ ರಜತ್ ಅವರು ಮಾತನಾಡಿದ್ದರು. ಟೈಮ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಇಷ್ಟು ದಿನ ಧರ್ಮಸ್ಥಳಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಈಗ ಟೈಮ್ ಮಾಡಿಕೊಂಡು ಹೋದರು. ಆ ಭೇಟಿ ಸಹಜವಾಗಿ ಮುಗಿಯಿತು. ಕಾಕತಾಳೀಯ ಎಂಬಂತೆ ಅವರು ಹೋದಾಗಲೇ ಅಲ್ಲಿ ಗಲಾಟೆ ನಡೆಯಿತು’ ಎಂದು ಅಕ್ಷಿತಾ ಹೇಳಿದ್ದಾರೆ.

‘ರಜತ್ ಅವರು ಸುರಕ್ಷಿತವಾಗಿ ಮನೆಗೆ ಬಂದರು. ಎಲ್ಲವೂ ಸರಿಯಾಗಿಯೇ ಇತ್ತು. ಬೆಳಗ್ಗೆ ಎದ್ದ ತಕ್ಷಣ ಅನೇಕ ಫೋನ್ ಕರೆಗಳು ಬರಲು ಶುರುವಾಯಿತು. ಯಾರೋ ಶಾರದಾ ಭಟ್ ಎಂಬುವವರು ಸ್ಕ್ರೀನ್ ಶಾಟ್ ಕಳಿಸುತ್ತಿದ್ದರು. ಬೆದರಿಕೆ ಸಂದೇಶ, ಬೆದರಿಕೆ ಸ್ಟೇಟಸ್ ಬರಲು ಆರಂಭ ಆಯಿತು. ನಾನು, ನನ್ನ ಮಕ್ಕಳು, ನನ್ನ ಮಂಡ್ಯ ಜಿಲ್ಲೆ ಇದಕ್ಕೆ ಹೇಗೆ ಸಂಬಂಧಿಸಿದೆ ಅಂತ ನನಗೆ ಪ್ರಶ್ನೆ ಮೂಡಿತು. ಮಂಡ್ಯಕ್ಕೂ ಕರಾವಳಿಗೂ ಸಂಬಂಧವೇ ಇಲ್ಲ’ ಎಂದಿದ್ದಾರೆ ಅಕ್ಷಿತಾ.

‘ಸೋಶಿಯಲ್ ಮೀಡಿಯಾದಲ್ಲಿ ಒಬ್ಬರು ಇಷ್ಟು ಧೈರ್ಯವಾಗಿ, ಬಹಿರಂಗವಾಗಿ ಬೆದರಿಕೆ ಹಾಕುತ್ತಾರೆ ಎಂದರೆ ಅವರಿಗೆ ಎಷ್ಟು ಬೆಂಬಲ ಇರಬಹುದು ಎಂಬುದನ್ನು ನಾವು ನೋಡಬಹುದು. ಈ ಬಗ್ಗೆ ರಜತ್ ಬಳಿ ಮಾತಾಡಿದಾಗ ನಿರ್ಲಕ್ಷ್ಯ ಮಾಡೋಣ ಎಂದರು. ಆದರೆ, ಮಂಡ್ಯದ ಬಗ್ಗೆ ಮಾತನಾಡಿದಾಗ ಅದು ಆಕ್ಷೇಪಾರ್ಹ ಹೇಳಿಕೆ. ನಿನ್ನ ಗಂಡನನ್ನು ಕರೆದುಕೊಂಡು ಹೋಗು, ಇಲ್ಲದಿದ್ದರೆ ಕೇಸರಿ ಬಣ್ಣ ಮಾಡಿಬಿಡುತ್ತೇವೆ ಅಂತ ಏನೋ ಹಾಕಿದ್ದಾರೆ’ ಎಂದು ಅಕ್ಷಿತಾ ಹೇಳಿದ್ದಾರೆ.

ಇದನ್ನೂ ಓದಿ: ರಜತ್​ಗೆ ಮಹಿಳೆಯಿಂದ ಕೊಲೆ ಬೆದರಿಕೆ: ಪಾಠ ಕಲಿಸಲು ಕಾನೂನಿನ ಕ್ರಮ

‘ಮೂಟೆ ಕಟ್ಟಿ, ಸಿಲಿಂಡರ್​ ಹಾಕಿ ಸಾಯಿಸುತ್ತೇವೆ ಎಂಬ ಹೇಳಿಕೆ ಕೂಡ ಬಂದಿದೆ. ಅದರ ಫೋಟೋಕಾಪಿ ತೆಗೆದುಕೊಂಡಿದ್ದೇನೆ. ಈ ರೀತಿ ಹೇಳಿಕೆಗಳು ಸರಿಯಲ್ಲ. ಅದು ಭಯಾನಕ ಆಗಿರುತ್ತದೆ. ಅಕಸ್ಮಾತ್ ಹೆಚ್ಚು-ಕಡಿಮೆ ಆದರೆ ಏನು ಗತಿ? ನಮ್ಮ ಮುಂಜಾಗೃತಾ ಕ್ರಮವಾಗಿ ಪೊಲೀಸರಿಗೆ ದೂರು ನೀಡಲು ಬಂದಿದ್ದೇವೆ’ ಎಂದಿದ್ದಾರೆ ಅಕ್ಷಿತಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು