AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ

ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಅವರು​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ
ರಾಜೀವ್ ಮಸಂದ್​
ಮದನ್​ ಕುಮಾರ್​
|

Updated on: May 03, 2021 | 1:37 PM

Share

ಕೊರೊನಾ ಕಾಟಕ್ಕೆ ಸಂಬಂಧಿಸಿದ ಕಹಿ ಸುದ್ದಿಗಳು ಪ್ರತಿ ಕ್ಷಣವೂ ಕೇಳಿಬರುತ್ತಿವೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಕೊವಿಡ್​ನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಪತ್ರಕರ್ತರಿಗೂ ಈ ಮಹಾಮಾರಿ ಕಾಟ ಕೊಡುತ್ತಿದೆ. ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಈಗ ಕೊರೊನಾ ಪಾಸಿಟಿವ್​ ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ರಾಜೀವ್​ ಮಸಂದ್​ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಯಿತು. ಕೂಡಲೇ ಅವರನ್ನು ಮುಂಬೈನ ಕೊಕಿಲಾವೆನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ ಸೇರಿದಂತೆ ದೇಶದ ಎಲ್ಲ ಪ್ರಮುಖ ಸ್ಟಾರ್​ ಕಲಾವಿದರ ಸಂದರ್ಶನವನ್ನು ರಾಜೀವ್​ ಮಸಂದ್​ ಮಾಡಿದ್ದಾರೆ. ಸಾವಿರಾರು ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ಅವರು ಖ್ಯಾತರಾಗಿದ್ದಾರೆ.

ರಾಜೀವ್​ ಮಸಂದ್​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ. ಕಲಾವಿದರಾದ ದಿಯಾ ಮಿರ್ಜಾ, ಬಿಪಾಶಾ ಬಸು, ನಿಮ್ರತ್​ ಕೌರ್​, ಸುನೀಲ್​ ಶೆಟ್ಟಿ ಮುಂತಾದವರು ರಾಜೀವ್ ಮಸಂದ್​ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಆಜ್​ ತಕ್​ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್​ ಸರ್ದಾನ ನಿಧನರಾದರು. ಅವರ ಅಗಲಿಕೆ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ರೋಹಿತ್ ಸರ್ದಾನ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ‘ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ’ ಎಂದಿದ್ದರು.

ಇದನ್ನೂ ಓದಿ:

 Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್