AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ

ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಅವರು​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ
ರಾಜೀವ್ ಮಸಂದ್​
ಮದನ್​ ಕುಮಾರ್​
|

Updated on: May 03, 2021 | 1:37 PM

Share

ಕೊರೊನಾ ಕಾಟಕ್ಕೆ ಸಂಬಂಧಿಸಿದ ಕಹಿ ಸುದ್ದಿಗಳು ಪ್ರತಿ ಕ್ಷಣವೂ ಕೇಳಿಬರುತ್ತಿವೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಕೊವಿಡ್​ನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಪತ್ರಕರ್ತರಿಗೂ ಈ ಮಹಾಮಾರಿ ಕಾಟ ಕೊಡುತ್ತಿದೆ. ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಈಗ ಕೊರೊನಾ ಪಾಸಿಟಿವ್​ ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ರಾಜೀವ್​ ಮಸಂದ್​ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಯಿತು. ಕೂಡಲೇ ಅವರನ್ನು ಮುಂಬೈನ ಕೊಕಿಲಾವೆನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ ಸೇರಿದಂತೆ ದೇಶದ ಎಲ್ಲ ಪ್ರಮುಖ ಸ್ಟಾರ್​ ಕಲಾವಿದರ ಸಂದರ್ಶನವನ್ನು ರಾಜೀವ್​ ಮಸಂದ್​ ಮಾಡಿದ್ದಾರೆ. ಸಾವಿರಾರು ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ಅವರು ಖ್ಯಾತರಾಗಿದ್ದಾರೆ.

ರಾಜೀವ್​ ಮಸಂದ್​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ. ಕಲಾವಿದರಾದ ದಿಯಾ ಮಿರ್ಜಾ, ಬಿಪಾಶಾ ಬಸು, ನಿಮ್ರತ್​ ಕೌರ್​, ಸುನೀಲ್​ ಶೆಟ್ಟಿ ಮುಂತಾದವರು ರಾಜೀವ್ ಮಸಂದ್​ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಆಜ್​ ತಕ್​ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್​ ಸರ್ದಾನ ನಿಧನರಾದರು. ಅವರ ಅಗಲಿಕೆ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ರೋಹಿತ್ ಸರ್ದಾನ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ‘ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ’ ಎಂದಿದ್ದರು.

ಇದನ್ನೂ ಓದಿ:

 Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?