AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ

ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಅವರು​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ
ರಾಜೀವ್ ಮಸಂದ್​
ಮದನ್​ ಕುಮಾರ್​
|

Updated on: May 03, 2021 | 1:37 PM

Share

ಕೊರೊನಾ ಕಾಟಕ್ಕೆ ಸಂಬಂಧಿಸಿದ ಕಹಿ ಸುದ್ದಿಗಳು ಪ್ರತಿ ಕ್ಷಣವೂ ಕೇಳಿಬರುತ್ತಿವೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಕೊವಿಡ್​ನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಪತ್ರಕರ್ತರಿಗೂ ಈ ಮಹಾಮಾರಿ ಕಾಟ ಕೊಡುತ್ತಿದೆ. ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಈಗ ಕೊರೊನಾ ಪಾಸಿಟಿವ್​ ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ರಾಜೀವ್​ ಮಸಂದ್​ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಯಿತು. ಕೂಡಲೇ ಅವರನ್ನು ಮುಂಬೈನ ಕೊಕಿಲಾವೆನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ ಸೇರಿದಂತೆ ದೇಶದ ಎಲ್ಲ ಪ್ರಮುಖ ಸ್ಟಾರ್​ ಕಲಾವಿದರ ಸಂದರ್ಶನವನ್ನು ರಾಜೀವ್​ ಮಸಂದ್​ ಮಾಡಿದ್ದಾರೆ. ಸಾವಿರಾರು ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ಅವರು ಖ್ಯಾತರಾಗಿದ್ದಾರೆ.

ರಾಜೀವ್​ ಮಸಂದ್​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ. ಕಲಾವಿದರಾದ ದಿಯಾ ಮಿರ್ಜಾ, ಬಿಪಾಶಾ ಬಸು, ನಿಮ್ರತ್​ ಕೌರ್​, ಸುನೀಲ್​ ಶೆಟ್ಟಿ ಮುಂತಾದವರು ರಾಜೀವ್ ಮಸಂದ್​ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಆಜ್​ ತಕ್​ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್​ ಸರ್ದಾನ ನಿಧನರಾದರು. ಅವರ ಅಗಲಿಕೆ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ರೋಹಿತ್ ಸರ್ದಾನ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ‘ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ’ ಎಂದಿದ್ದರು.

ಇದನ್ನೂ ಓದಿ:

 Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!