AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?
ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​
ರಾಜೇಶ್ ದುಗ್ಗುಮನೆ
|

Updated on: Apr 30, 2021 | 4:22 PM

Share

ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ಹೋಗಿದ್ದಾರೆ. ನಟನೆ ಹಾಗೂ ಕ್ರಿಕೆಟ್​ ಎರಡಲ್ಲೂ ಗುರುತಿಸಿಕೊಂಡಿದ್ದ ರಾಜೀವ್​ ಮನೆಯಲ್ಲಿ 50ಕ್ಕೂ ಹೆಚ್ಚು ದಿನ ಕಳೆದಿದ್ದಾರೆ. ಇದರಿಂದ ಅವರ ಕೆರಿಯರ್​ಗೆ ಒಳ್ಳೆಯ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಇನ್ನು, ಅವರು ಬಿಗ್​ ಬಾಸ್​ ಮನೆಯಿಂದ ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ನಡೆದಿದ್ದರು. ಸುದೀಪ್​ ಅವರನ್ನು ಭೇಟಿ ಮಾಡದೆ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ.

ರಾಜೀವ್​ ಹಾಗೂ ಸುದೀಪ್​ ಆಪ್ತರು. ಸುದೀಪ್​ ಅವರನ್ನು ರಾಜೀವ್​ ಅಣ್ಣ ಎಂದೇ ಸಂಬೋಧಿಸುತ್ತಾರೆ. ಎಲಿಮಿನೇಟ್​ ಆದಾಗ ಸುದೀಪ್​ ಅವರನ್ನು ನೋಡಿಲ್ಲವಲ್ಲ ಎನ್ನುವ ಬೇಸರ ರಾಜೀವ್​ಗೆ ಇದೆ. ಹೀಗಾಗಿ, ರಾಜೀವ್​ ಈ ಬಾರಿ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ. ಹಾಗಂತ ಅವರು ಮನೆ ಒಳಗೆ ಮತ್ತೆ ಹೋಗುತ್ತಿಲ್ಲ. ಸುದೀಪ್​ ಜತೆ ಮಾತುಕತೆ ಆಡಿ ನಂತರ ವೇದಿಕೆಯಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಬಿಗ್​ ಬಾಸ್ 8ನೇ ವಾರದ ಎಲಿಮಿನೇಷನ್​ನಲ್ಲಿ ರಾಜೀವ್​ ಎಲಿಮಿನೇಟ್​​ ಆಗಿದ್ದರು. ರಾಜೀವ್ ತಮ್ಮ ಬಳಿ ಇರುವ ಗೋಲ್ಡನ್​ ಪಾಸ್​ ಬಳಸದೆ ಇದ್ದಿದ್ದು ಮನೆಯಿಂದ ಹೊರ ಹೋಗಲು ಪ್ರಮುಖ ಕಾರಣವಾಗಿತ್ತು. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ರಾಜೀವ್​​ ಹೊರ ಹೋದ ಬಗ್ಗೆ ಚರ್ಚೆ ಜೋರಾಗಿತ್ತು. ಮನೆಯಲ್ಲಿ ಇನ್ನೂ ತುಂಬಾನೇ ವೀಕ್​ ಕ್ಯಾಂಡಿಡೇಟ್​ ಇದ್ದಾರೆ. ಹೀಗಿರುವಾಗ ರಾಜೀವ್ ಮನೆಯಿಂದ ಹೊರ ಹೋಗಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ವೀಕ್ಷಕರು ಸೋಶಿಯಲ್​ ಮೀಡಿಯಾದಲ್ಲಿ ಎತ್ತಿದ್ದರು.

ಇದನ್ನೂ ಒದಿ: Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಬಿಗ್​​ಬಾಸ್ ಮನೆಯಿಂದ ರಾಜೀವ್​ ಹೊರ ಹೋಗಿದ್ದು ಎಷ್ಟು ಸರಿ? ಸಾಮಾಜಿಕ ಜಾಲತಾಣದಲ್ಲಿ ಜೋರಾಯ್ತು ಚರ್ಚೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?