AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?
ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​
ರಾಜೇಶ್ ದುಗ್ಗುಮನೆ
|

Updated on: Apr 30, 2021 | 4:22 PM

Share

ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ಹೋಗಿದ್ದಾರೆ. ನಟನೆ ಹಾಗೂ ಕ್ರಿಕೆಟ್​ ಎರಡಲ್ಲೂ ಗುರುತಿಸಿಕೊಂಡಿದ್ದ ರಾಜೀವ್​ ಮನೆಯಲ್ಲಿ 50ಕ್ಕೂ ಹೆಚ್ಚು ದಿನ ಕಳೆದಿದ್ದಾರೆ. ಇದರಿಂದ ಅವರ ಕೆರಿಯರ್​ಗೆ ಒಳ್ಳೆಯ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಇನ್ನು, ಅವರು ಬಿಗ್​ ಬಾಸ್​ ಮನೆಯಿಂದ ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ನಡೆದಿದ್ದರು. ಸುದೀಪ್​ ಅವರನ್ನು ಭೇಟಿ ಮಾಡದೆ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ.

ರಾಜೀವ್​ ಹಾಗೂ ಸುದೀಪ್​ ಆಪ್ತರು. ಸುದೀಪ್​ ಅವರನ್ನು ರಾಜೀವ್​ ಅಣ್ಣ ಎಂದೇ ಸಂಬೋಧಿಸುತ್ತಾರೆ. ಎಲಿಮಿನೇಟ್​ ಆದಾಗ ಸುದೀಪ್​ ಅವರನ್ನು ನೋಡಿಲ್ಲವಲ್ಲ ಎನ್ನುವ ಬೇಸರ ರಾಜೀವ್​ಗೆ ಇದೆ. ಹೀಗಾಗಿ, ರಾಜೀವ್​ ಈ ಬಾರಿ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ. ಹಾಗಂತ ಅವರು ಮನೆ ಒಳಗೆ ಮತ್ತೆ ಹೋಗುತ್ತಿಲ್ಲ. ಸುದೀಪ್​ ಜತೆ ಮಾತುಕತೆ ಆಡಿ ನಂತರ ವೇದಿಕೆಯಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಬಿಗ್​ ಬಾಸ್ 8ನೇ ವಾರದ ಎಲಿಮಿನೇಷನ್​ನಲ್ಲಿ ರಾಜೀವ್​ ಎಲಿಮಿನೇಟ್​​ ಆಗಿದ್ದರು. ರಾಜೀವ್ ತಮ್ಮ ಬಳಿ ಇರುವ ಗೋಲ್ಡನ್​ ಪಾಸ್​ ಬಳಸದೆ ಇದ್ದಿದ್ದು ಮನೆಯಿಂದ ಹೊರ ಹೋಗಲು ಪ್ರಮುಖ ಕಾರಣವಾಗಿತ್ತು. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ರಾಜೀವ್​​ ಹೊರ ಹೋದ ಬಗ್ಗೆ ಚರ್ಚೆ ಜೋರಾಗಿತ್ತು. ಮನೆಯಲ್ಲಿ ಇನ್ನೂ ತುಂಬಾನೇ ವೀಕ್​ ಕ್ಯಾಂಡಿಡೇಟ್​ ಇದ್ದಾರೆ. ಹೀಗಿರುವಾಗ ರಾಜೀವ್ ಮನೆಯಿಂದ ಹೊರ ಹೋಗಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ವೀಕ್ಷಕರು ಸೋಶಿಯಲ್​ ಮೀಡಿಯಾದಲ್ಲಿ ಎತ್ತಿದ್ದರು.

ಇದನ್ನೂ ಒದಿ: Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಬಿಗ್​​ಬಾಸ್ ಮನೆಯಿಂದ ರಾಜೀವ್​ ಹೊರ ಹೋಗಿದ್ದು ಎಷ್ಟು ಸರಿ? ಸಾಮಾಜಿಕ ಜಾಲತಾಣದಲ್ಲಿ ಜೋರಾಯ್ತು ಚರ್ಚೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!