Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!
ಬಿಗ್ ಬಾಸ್ ಕನ್ನಡ ಸೀಸನ್​ 8
Follow us
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:01 PM

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಲ್ಕನೇ ವಾರ ಪೂರೈಸುತ್ತಿದ್ದಾರೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇವಾರ ಗೀತಾ ಭಾರತಿ ಭಟ್​ ಎಲಿಮಿನೇಟ್​ ಆಗಿದ್ದಾರೆ. ಮನೆಯಲ್ಲಿ ಈಗ ಉಳಿದು ಕೊಂಡಿದ್ದು 14 ಮಂದಿ ಮಾತ್ರ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಗೆ ಶೋಭಾ ಎನ್ನುವವರ ಎಂಟ್ರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ. ಹಾಂಗತ ಈ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಒಳಗೆ ಯಾರನ್ನೂ ಕಳುಹಿಸಿಲ್ಲ! ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ರಾಜೀವ್​ ಮಾಡಿದ ಎಡವಟ್ಟು ಕಾರಣ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಕೂತು ಮಾತನಾಡುತ್ತಿದ್ದರು. ಆಗ ಚದುರಂಗದ ಟಾಸ್ಕ್​ ಬಗ್ಗೆ ಮಾತನಾಡಿದ್ದಾರೆ ರಾಜೀವ್​. ನಿಧಿ ನೀನು ನನಗೆ ಯಾಕೆ ಹೊಡೆದೆ ಎನ್ನುವುದು ಗೊತ್ತೇ ಆಗಿಲ್ಲ. ಪಾಪ ಶೋಭಾ ನನಗೆ ಹೊಡೆದಿಲ್ಲ ಎಂದು ರಾಜೀವ್​ ಮಾತನಾಡುತ್ತಾ ಇದ್ದರು. ರಾಜೀವ್​, ಶುಭಾ ಪೂಂಜಾಗೆ ಶೋಭಾ ಎಂದು ಹೇಳಿದ್ದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕಿದ್ದಾರೆ.

ಇದನ್ನು ಕೇಳಿದ ಶುಭಾ ಪೂಂಜಾ ರೇಗಿದ್ದಾರೆ. ಅಷ್ಟೇ ಅಲ್ಲ, ರಾಜೀವ್​ಗೆ ರಾಜೇಶ್​ ಎನ್ನುವ ನಾಮಕರಣ ಮಾಡಿದ್ದಾರೆ! ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು ಎಂದು ಶಮಂತ್​ ಬ್ರೋ ಗೌಡ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಾಜೀವ್​ ಈ ವಿಚಾರಕ್ಕೆ ಶುಭಾ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ನಂತರ ಶುಭಾ ಮಂಜುಗೆ ಮಾಂಜಾ ಎಂದು ಕಿಚಾಯಿಸಿದ್ದಾರೆ!

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..