ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​

‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ರಜನಿಕಾಂತ್​ ಅವರ ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​
ರಜನಿಕಾಂತ್​
Follow us
|

Updated on: Dec 13, 2023 | 11:46 AM

ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಅವರು ದಣಿವರಿಯದ ಯುವಕನಂತೆ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ನಟಿಸುತ್ತಿರುವ 170ನೇ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ರಜನಿಕಾಂತ್​ ಅವರ ಜನ್ಮದಿನದ (Rajinikanth Birthday) ಪ್ರಯುಕ್ತ ಈ ಸಿನಿಮಾದ ಟೈಟಲ್​ ಏನು ಎಂಬುದು ರಿವೀಲ್​ ಮಾಡಲಾಗಿದೆ. ಈ ಚಿತ್ರಕ್ಕೆ ‘ವೆಟ್ಟೈಯನ್​’ (Vettaiyan) ಎಂದು ಹೆಸರು ಇಡಲಾಗಿದೆ. ಶೀರ್ಷಿಕೆ ಅನಾವರಣ ಮಾಡಲು ಬಿಡುಗಡೆ ಮಾಡಿರುವ ಟೀಸರ್​ ಗಮನ ಸೆಳೆಯುತ್ತಿದೆ. ಯೂಟ್ಯೂಬ್​ನಲ್ಲಿ 24 ಗಂಟೆ ಕಳೆಯುವುದರೊಳಗೆ 34 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಈ ವರ್ಷ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಬಳಿಕ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಅನೇಕ ನಿರ್ಮಾಪಕರು ಮುಂದೆ ಬಂದಿದ್ದಾರೆ. ‘ವೆಟ್ಟೈಯನ್​’ ಸಿನಿಮಾಗೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಟೀಸರ್​ ಗಮನ ಸೆಳೆಯುತ್ತಿದೆ.

ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸುತ್ತಿದ್ದಾರೆ. ‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

ಇದಲ್ಲದೇ, ‘ಲಾಲ್​ ಸಲಾಂ’ ಸಿನಿಮಾದಲ್ಲೂ ರಜನಿಕಾಂತ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ನಿರ್ದೇಶಕಿ. ತಲೈವ ಜನ್ಮದಿನದ ಪ್ರಯುಕ್ತ ‘ಲಾಲ್​ ಸಲಾಂ’ ಸಿನಿಮಾದ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದರಲ್ಲೂ ಆ್ಯಕ್ಷನ್​ ದೃಶ್ಯ ಮತ್ತು ಹಿನ್ನಲೆ ಸಂಗೀತ ಗಮನ ಸೆಳೆದಿದೆ. ಈ ಸಿನಿಮಾ ಕೂಡ ‘ಲೈಕಾ ಪ್ರೊಡಕ್ಷನ್ಸ್​’ ಮೂಲಕ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್