AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​

‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ರಜನಿಕಾಂತ್​ ಅವರ ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​
ರಜನಿಕಾಂತ್​
Follow us
ಮದನ್​ ಕುಮಾರ್​
|

Updated on: Dec 13, 2023 | 11:46 AM

ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಅವರು ದಣಿವರಿಯದ ಯುವಕನಂತೆ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ನಟಿಸುತ್ತಿರುವ 170ನೇ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ರಜನಿಕಾಂತ್​ ಅವರ ಜನ್ಮದಿನದ (Rajinikanth Birthday) ಪ್ರಯುಕ್ತ ಈ ಸಿನಿಮಾದ ಟೈಟಲ್​ ಏನು ಎಂಬುದು ರಿವೀಲ್​ ಮಾಡಲಾಗಿದೆ. ಈ ಚಿತ್ರಕ್ಕೆ ‘ವೆಟ್ಟೈಯನ್​’ (Vettaiyan) ಎಂದು ಹೆಸರು ಇಡಲಾಗಿದೆ. ಶೀರ್ಷಿಕೆ ಅನಾವರಣ ಮಾಡಲು ಬಿಡುಗಡೆ ಮಾಡಿರುವ ಟೀಸರ್​ ಗಮನ ಸೆಳೆಯುತ್ತಿದೆ. ಯೂಟ್ಯೂಬ್​ನಲ್ಲಿ 24 ಗಂಟೆ ಕಳೆಯುವುದರೊಳಗೆ 34 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಈ ವರ್ಷ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಬಳಿಕ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಅನೇಕ ನಿರ್ಮಾಪಕರು ಮುಂದೆ ಬಂದಿದ್ದಾರೆ. ‘ವೆಟ್ಟೈಯನ್​’ ಸಿನಿಮಾಗೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಟೀಸರ್​ ಗಮನ ಸೆಳೆಯುತ್ತಿದೆ.

ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸುತ್ತಿದ್ದಾರೆ. ‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

ಇದಲ್ಲದೇ, ‘ಲಾಲ್​ ಸಲಾಂ’ ಸಿನಿಮಾದಲ್ಲೂ ರಜನಿಕಾಂತ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ನಿರ್ದೇಶಕಿ. ತಲೈವ ಜನ್ಮದಿನದ ಪ್ರಯುಕ್ತ ‘ಲಾಲ್​ ಸಲಾಂ’ ಸಿನಿಮಾದ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದರಲ್ಲೂ ಆ್ಯಕ್ಷನ್​ ದೃಶ್ಯ ಮತ್ತು ಹಿನ್ನಲೆ ಸಂಗೀತ ಗಮನ ಸೆಳೆದಿದೆ. ಈ ಸಿನಿಮಾ ಕೂಡ ‘ಲೈಕಾ ಪ್ರೊಡಕ್ಷನ್ಸ್​’ ಮೂಲಕ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು