Coolie: ರಜನಿಕಾಂತ್​ ನಟನೆಯ 171ನೇ ಚಿತ್ರದ ಹೆಸರು ‘ಕೂಲಿ’; ಬಂತು ಭರ್ಜರಿ ಟೀಸರ್​

ನಿರ್ದೇಶಕ ಲೋಕೇಶ್​ ಕನಗರಾಜ್​ ಹಾಗೂ ನಟ ರಜನಿಕಾಂತ್​ ಅವರು ಇದೇ ಮೊದಲ ಬಾರಿಗೆ ಜೊತೆಯಾಗಿದ್ದಾರೆ. ಹಾಗಾಗಿ ‘ಕೂಲಿ’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಸನ್​ ಪಿಕ್ಚರ್ಸ್​ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಟೀಸರ್​ನಲ್ಲಿ ರಜನಿಕಾಂತ್​ ಅವರು ಅಬ್ಬರಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ‘ಕೂಲಿ’ ಟೈಟಲ್​ ಟ್ರೆಂಡ್​ ಆಗಿದೆ.

Coolie: ರಜನಿಕಾಂತ್​ ನಟನೆಯ 171ನೇ ಚಿತ್ರದ ಹೆಸರು ‘ಕೂಲಿ’; ಬಂತು ಭರ್ಜರಿ ಟೀಸರ್​
ರಜನಿಕಾಂತ್​
Follow us
|

Updated on: Apr 22, 2024 | 7:43 PM

ನಟ ರಜನಿಕಾಂತ್​ (Rajinikanth) ಅವರು 73ನೇ ವಯಸ್ಸಿನಲ್ಲೂ ದಣಿವರಿಯದ ಯುವಕನಂತೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರು ನಟಿಸಲಿರುವ 171ನೇ (Thalaivar 171) ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಈ ಸಿನಿಮಾದ ಟೈಟಲ್​ ಈಗ ಅನಾವರಣ ಆಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಇದರ ಶೂಟಿಂಗ್​ ಆರಂಭ ಆಗಲಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ‘ಕೂಲಿ’ (Coolie) ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್​ ಟೀಸರ್​ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

ತೋಳಿನಲ್ಲಿ ಕೂಲಿ ಎಂಬ ಹೆಸರು ಇರುವ ಬ್ಯಾಡ್ಜ್​ ಧರಿಸಿ ರಜನಿಕಾಂತ್ ಎಂಟ್ರಿ ನೀಡಿದ್ದಾರೆ. ಬ್ಲ್ಯಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಇಡೀ ಟೀಸರ್​ ಮೂಡಿಬಂದಿದೆ. ಆದರೆ ಇದರಲ್ಲಿ ಇರುವ ಬಂಗಾರದ ವಸ್ತುಗಳನ್ನು ಮಾತ್ರ ಬಣ್ಣದಲ್ಲಿ ತೋರಿಸಲಾಗಿದೆ. ಆ ಮೂಲಕ ಕಥೆಯ ಬಗ್ಗೆ ಹಿಂಟ್​ ಬಿಟ್ಟುಕೊಡಲಾಗಿದೆ. ಇದು ಗೋಲ್ಡ್​ ಸ್ಮಗ್ಲಿಂಗ್​ ಕುರಿತ ಸಿನಿಮಾ ಎಂಬುದು ಅಭಿಮಾನಿಗಳಿಗೆ ಗೊತ್ತಾಗಿದೆ.

ಗೋಲ್ಡ್​ ಬಿಸ್ಟೆಟ್​, ಗೋಲ್ಡ್​ ವಾಚ್​ ಜೊತೆಗೆ ಚಿನ್ನದ ರಾಶಿಯೇ ಇರುವ ಜಾಗಕ್ಕೆ ರಜನಿಕಾಂತ್​ ಎಂಟ್ರಿ ನೀಡುತ್ತಾರೆ. ಅಲ್ಲಿರುವ ಖದೀಮರಿಗೆ ಗೋಲ್ಡ್​ ವಾಚ್​ಗಳಿಂದ ಮಾಡಿದ ಚೈನ್​ನಿಂದಲೇ ಚಳಿ ಬಿಡಿಸುತ್ತಾರೆ. ಈ ರೀತಿಯ ಆ್ಯಕ್ಷನ್​ ದೃಶ್ಯದ ಮೂಲಕ ಅವರ ಪಾತ್ರದ ಪರಿಚಯ ಮಾಡಿಕೊಡಲಾಗಿದೆ. ಟೀಸರ್​ ಮೂಲಕ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಅಭಿಮಾನಿಗಳ ಕೌತುಕ ಕೆರಳಿಸುವಲ್ಲಿ ಯಶಸ್ವಿ ಆಗಿದೆ.

ಇದನ್ನೂ ಓದಿ: ನಿವೃತ್ತಿ ಪಡೆಯುವ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ‘ಕೈದಿ’, ‘ವಿಕ್ರಮ್​’, ‘ಲಿಯೋ’ ಚಿತ್ರಗಳ ನಿರ್ದೇಶಕ ಲೋಕೇಶ್​ ಕನಗರಾಜ್​

ಸೋಶಿಯಲ್​ ಮೀಡಿಯಾದಲ್ಲಿ ಲೋಕೇಶ್​ ಕನಗರಾಜ್​ ಅವರು ‘ಕೂಲಿ’ ಸಿನಿಮಾದ ಟೈಟಲ್​ ಟೀಸರ್​ ಹಂಚಿಕೊಂಡಿದ್ದಾರೆ. ಸನ್​ ಪಿಕ್ಚರ್ಸ್​ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇದೇ ಮೊದಲ ಬಾರಿಗೆ ಲೋಕೇಶ್​ ಕಗನರಾಜ್​ ಮತ್ತು ರಜನಿಕಾಂತ್​ ಅವರು ಜೊತೆಯಾಗಿ ಸಿನಿಮಾ ಮಾಡುತ್ತಿರುವುದರಿಂದ ಸಹಜವಾಗಿಯೇ ಹೈಪ್​​ ಹೆಚ್ಚಾಗಿದೆ. ಅನಿರುದ್ಧ್ ರವಿಚಂದರ್​ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಟೀಸರ್​ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ